ಕನ್ನಡಪ್ರಭ ವಾರ್ತೆ ರಾಮನಗರ
ಬಿಡದಿ ಟೌನ್ ಶಿಪ್ ಯೋಜನೆಗಾಗಿ ಭೂಸ್ವಾಧೀನ ಪಡಿಸಿಕೊಳ್ಳುತ್ತಿರುವ ಕೆಂಪಯ್ಯನಪಾಳ್ಯ, ಅರಳಾಳುಸಂದ್ರ, ಹೊಸೂರು, ಬನ್ನಿಗಿರಿ ಹಳ್ಳಿಗಳಿಗೆ ಭೇಟಿ ನೀಡಿ ರೈತರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಬೈರಮಂಗಲ ವೃತ್ತದಲ್ಲಿ ನಡೆಯುತ್ತಿರುವ ರೈತರ ಚಳವಳಿಯಲ್ಲಿ ಅವರು ಪಾಲ್ಗೊಂಡರು. ಈ ವೇಳೆ, ಸುದ್ದಿಗಾರರ ಜೊತೆ ಮಾತನಾಡಿ, ಇಲ್ಲಿವರೆಗೆ ರೖೆತರ ಹೊಟ್ಟೆ ಮೇಲೆ ಹೊಡೆದು ಕಣ್ಣೀರು ಹಾಕಿಸಿದ ಯಾವುದೇ ಸರ್ಕಾರಕ್ಕೆ ಒಳ್ಳೆಯದಾಗಿಲ್ಲ. ಆ ಸರ್ಕಾರಗಳು ಹೆಚ್ಚು ದಿನ ಉಳಿಯುವುದೂ ಇಲ್ಲ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರೈತರ ಮೇಲೆ ಗೂಂಡಾಗಿರಿ, ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಪರವಾಗಿ ನಿಲ್ಲಬೇಕು ಎಂದು ಒತ್ತಾಯಿಸಿದರು.
ಡಿ.ಕೆ.ಶಿವಕುಮಾರ್ ಅವರಿಗೆ ರಿಯಲ್ ಎಸ್ಟೇಟ್ ದಂಧೆ ಮಾಡಲು ಬೇರೆ ಕಡೆಗಳಲ್ಲಿ ಬೇಕಾದಷ್ಟು ಜಮೀನುಗಳಿವೆ. ಮುಖ್ಯಮಂತ್ರಿಗಳು, ಶಾಸಕರು ನೂರಾರು ಎಕರೆ ಜಮೀನು ಇಟ್ಟುಕೊಳ್ಳಬಹುದು, ಅದೇ ಸಣ್ಣ ರೈತರು ಜಮೀನು ಇಟ್ಟುಕೊಂಡು ಬದುಕುವುದು ಬೇಡವೇ?. ರೈತರನ್ನು ಬೀದಿಗೆ ತಂದರೆ ಆ ಭಗವಂತನು ನಿಮ್ಮನ್ನು ಕ್ಷಮಿಸುವುದಿಲ್ಲ ಎಂದರು.ಈ ಯೋಜನೆಗೆ ಬಲವಂತವಾಗಿ ಭೂಸ್ವಾಧೀನ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ ರೈತರು ನಿರಂತರವಾಗಿ ಹೋರಾಟ ನಡೆಸುತ್ತಿದ್ದರೆ, ಮತ್ತೊಂದೆಡೆ ಡಿ.ಕೆ.ಶಿವಕುಮಾರ್ ಅವರು ಶೇ.70ರಷ್ಟು ರೈತರು ಸ್ವಾಧೀನದ ಪರವಾಗಿದ್ದಾರೆ. ಭೂಸ್ವಾಧೀನದ ಜಾಗ ಬರಡು ಭೂಮಿ, ಪ್ರಧಾನಿ ಮೋದಿಯವರು ಒಪ್ಪಿಗೆ ನೀಡಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ. ಈ ಪ್ರಕರಣದಲ್ಲಿ ಪ್ರಧಾನಿ ಹೆಸರನ್ನು ಎಳೆದು ತರುತ್ತಿರುವ ಮುಖ್ಯಮಂತ್ರಿಗೆ ನಾಚಿಕೆ ಆಗಬೇಕು. ಪ್ರಧಾನಿ ಮೋದಿಯವರು ರೈತರ ಪರವಾಗಿ ಇರುವವರು. ಅವರೆಂದೂ ರೈತರ ಭೂಮಿ ಕಸಿದುಕೊಳ್ಳಿ ಅಂತ ಹೇಳಿರಲು ಸಾಧ್ಯವೇ ಇಲ್ಲ. ನೀವು ಮುಖ್ಯಮಂತ್ರಿಯಾಗಿ ಈ ರೀತಿ ಸುಳ್ಳು ಹೇಳಬಾರದು ಎಂದು ತಿರುಗೇಟು ನೀಡಿದರು.ಆಡಳಿತ ಪಕ್ಷದಷ್ಟೇ ಜವಾಬ್ದಾರಿ ವಿರೋಧ ಪಕ್ಷಕ್ಕೂ ಇದೆ. ಹಾಗಾಗಿ, ಈ ರಾಜ್ಯ ಸರ್ಕಾರಕ್ಕೆ ವಾಸ್ತವವನ್ನು ತಿಳಿಸುವ ಕೆಲಸ ಮಾಡಬೇಕೆಂದು ನಿರ್ಧರಿಸಿ ಬಿಡದಿ ಭಾಗದ ಹೊಲಗಳಿಗೆ ಭೇಟಿ ನೀಡಿ ರೈತರಿಂದ ಅಹವಾಲು ಆಲಿಸಿದ್ದೇವೆ. ಬಿಜೆಪಿ, ರೈತರ ವಿಚಾರದಲ್ಲಿ ಹುಡುಗಾಟಿಕೆ, ರಾಜಕೀಯ ಮಾಡಲು ಹಾಗೂ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಂದಿಲ್ಲ. ಬಿಡದಿ, ರಾಯಚೂರು, ಬೆಳಗಾವಿ ಮಾತ್ರವಲ್ಲ, ನಾಡಿನಲ್ಲಿ ಎಲ್ಲೇ ರೈತರು ಸಂಕಷ್ಟದಲ್ಲಿದ್ದರೂ ಬಿಜೆಪಿ ಅವರ ಪರವಾಗಿ ನಿಲ್ಲಲಿದೆ ಎಂದು ಹೇಳಿದರು.
ಬಿಜೆಪಿ ನಾಯಕರು ಬರುತ್ತಿದ್ದಾರೆಂದು ಹೆದರಿ ಕಾಂಗ್ರೆಸ್ ನವರು ಪೋಸ್ಟರ್ ಕ್ಯಾಂಪೇನ್ ಮಾಡುತ್ತಿದ್ದಾರೆ. ಈ ಭಾಗದಲ್ಲಿ ಗೂಂಡಾಗಳನ್ನು ಬಿಟ್ಟು ರೈತರೇ ಜಮೀನು ಬಿಟ್ಟು ಕೊಡುವಂತಹ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ. ರಾತ್ರಿ ವೇಳೆ ಮನೆಗಳಿಗೆ ಬರುವ ಗೂಂಡಾಗಳು ಜೀವ ಬೆದರಿಕೆ ಹಾಕುವ ಘಟನೆಗಳು ನಡೆಯುತ್ತಿವೆ ಎಂದು ರೈತರು ಹೇಳಿಕೊಂಡಿದ್ದಾರೆ. ಹೀಗಿದ್ದರೂ, ಇಲ್ಲಿನ ರೖೆತರು ಪ್ರಾಣ ಬೇಕಾದರೂ ಕೊಡುತ್ತೇವೆ. ಭೂಮಿ ಮಾತ್ರ ಕೊಡಲ್ಲ ಅಂದಿದ್ದಾರೆ. ಆ ರೈತರ ಫಲವತ್ತಾದ ಕೃಷಿ ಭೂಮಿ ಕಸಿದುಕೊಳ್ಳಲು ನಾವು ಅವಕಾಶ ನೀಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಡದಿ ಟೌನ್ಶಿಪ್ ಯೋಜನೆ ಹೆಸರಿನಲ್ಲಿ ರೈತರ ಮನೆ ಹಾಳು ಮಾಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಬಿಡಬೇಕು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸರ್ಕಾರ ಒಂದೂವರೆ ವರ್ಷ ಮಾತ್ರ ಇರುತ್ತದೆ. ಈ ಯೋಜನೆಯನ್ನು ಪ್ರಾರಂಭ ಮಾಡುವಷ್ಟರಲ್ಲಿ ಸರ್ಕಾರವೇ ಹೋಗುತ್ತದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಮುಂದೆ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಬಂದಾಗ ಈ ಯೋಜನೆಯನ್ನು ಕೈಬಿಡಲಾಗುವುದು. ನನ್ನ 35 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಹಸಿರು ವಲಯವನ್ನು ನೋಡಿಯೇ ಇಲ್ಲ. ವಾರ್ಷಿಕ 6 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ರೈತರಿಗೆ ₹25 ಕೋಟಿ ಆದಾಯವಿದೆ. ರೇಷ್ಮೆ ಬೆಳೆಯಿಂದ ₹35 ಕೋಟಿ ಲಾಭವಿದೆ. ಇಂತಹ ಫಲವತ್ತಾದ ಭೂಮಿಯಲ್ಲಿ ಲೇಔಟ್ ನಿರ್ಮಿಸಿ ರೈತರ ಮನೆಹಾಳು ಮಾಡಲು ಕಾಂಗ್ರೆಸ್ ಸರ್ಕಾರ ಹೊರಟಿದೆ ಎಂದು ಕಿಡಿಕಾರಿದರು.ಅಲ್ಲಿ ಓಕೆ, ಇಲ್ಲಿ ಸಿಟ್ಟು ಏಕೆ?:ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಅಂಡಮಾನ್-ನಿಕೋಬಾರ್ನಲ್ಲಿ ಚೀನಾ ದಾಳಿ ನಿಲ್ಲಿಸಲು ಸ್ಥಾಪಿಸುತ್ತಿರುವ ಹಡಗು ನಿಲ್ದಾಣ ಜಾಗಕ್ಕೆ ಹೋಗಿ ಯೋಜನೆಯನ್ನು ವಿರೋಧಿಸಿದ್ದಾರೆ. ಲಕ್ಷಾಂತರ ಮರಗಿಡಗಳು, ಪ್ರಾಣಿಪಕ್ಷಿಗಳು ನಾಶವಾಗುವ ಬಗ್ಗೆ ಕಳವಳ ವ್ಯಕ್ತಪಡಿಸಿ ಹಸಿರು ಉಳಿಸಲು ಹೇಳಿದ್ದಾರೆ. ಅದಕ್ಕೆ ಡಿ.ಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.ಈಗ ಈ ಭಾಗದ ಹಸಿರನ್ನು ರಾಹುಲ್ ಗಾಂಧಿಯವರೇ ಒಮ್ಮೆ ಬಂದು ನೋಡಲಿ. ಡಿಕೆಶಿ ಅವರು ಕೆಂಪೇಗೌಡರ ಜಯಂತಿಗೆ 16 ಸಾವಿರ ಮರ ನೆಡುತ್ತಾರಂತೆ. ಇಲ್ಲಿರುವ ತೆಂಗು, ಮಾವು, ಸಪೋಟ, ಅಡಿಕೆ ಸೇರಿದಂತೆ ಲಕ್ಷಾಂತರ ಮರಗಳು ಮರಗಳಲ್ಲವೇ?. ಅಂಡಮಾನ್-ನಿಕೋಬಾರ್ ವಿಚಾರದ ಪರವಾಗಿ ಸ್ಟ್ಯಾಂಡ್ ತೆಗೆದುಕೊಳ್ಳುವ ಡಿ.ಕೆ.ಶಿವಕುಮಾರ್ ಗೆ ಬಿಡದಿ ರೈತರ ಮೇಲೆ ಸಿಟ್ಟು ಏಕೆ?. ಇದು ಡಬಲ್ ಸ್ಟ್ಯಾಂಡ್ ಅಲ್ಲವೇ? ಎಂದು ಪ್ರಶ್ನಿಸಿದರು.ಇದು ಕುಮಾರಸ್ವಾಮಿ ಕೂಸು ಎನ್ನುವ ನೀವು ಅವರ ಅವಧಿಯಲ್ಲೂ ಯೋಜನೆಯನ್ನು ಅನುಷ್ಠಾನಗೊಳಿಸಲಿಲ್ಲ. ಯಡಿಯೂರಪ್ಪ ಸರ್ಕಾರದಲ್ಲಿಯೂ ಆಗಲಿಲ್ಲ. ಈಗೇಕೆ ಮಾಡುತ್ತೀರಾ?, ಬಿಟ್ಟು ಬಿಡಿ. ಬೆಂಗಳೂರಿನಲ್ಲಿರುವ ಹಲವು ಬಡಾವಣೆಗಳಲ್ಲಿ ಇನ್ನೂ ನಿವೇಶನಗಳು ಹಂಚಿಕೆಯಾಗಿಲ್ಲ. ಖಾಲಿ ನಿವೇಶನಗಳಲ್ಲಿ ಮನೆಗಳನ್ನೇ ಕಟ್ಟಿಲ್ಲ. ಇಲ್ಲೇಕೆ ಅಷ್ಟೊಂದು ಬಲವಂತವಾಗಿ ಟೌನ್ ಮಾಡುತ್ತಿದ್ದೀರಾ?. ಗುದ್ದಲಿ ಪೂಜೆ ಮಾಡುವಷ್ಟರಲ್ಲಿ ನಿಮ್ಮ ಸರ್ಕಾರವೇ ಹೋಗುತ್ತದೆ. ಮುಂದೆ ನಮ್ಮ ಸರ್ಕಾರ ಬಂದ ಮೇಲೆ ನಾವು ಈ ಯೋಜನೆ ಮಾಡುವುದಿಲ್ಲ ಎಂದು ಹೇಳಿದರು.ಡಿಕೆ ಸಿಎಂ ಆದರೂ ಪೋಸ್ಟರ್ ಚಾಳಿ ಬಿಟ್ಟಿಲ್ಲ: