ಎಸ್‌ಸಿಡಿಸಿಸಿ ಬ್ಯಾಂಕ್‌ ನಿವೃತ್ತ ಅಧಿಕಾರಿಗಳಿಗೆ ಬೀಳ್ಕೊಡುಗೆ

KannadaprabhaNewsNetwork |  
Published : May 02, 2026, 03:00 AM IST
ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿವೃತ್ತ ಅಧಿಕಾರಿಗಳನ್ನು ಸನ್ಮಾನಿಸಲಾಯಿತು | Kannada Prabha

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಹಾಯಕ ಮಹಾಪ್ರಬಂಧಕ ಕರುಣಾಕರ ಹಾಗೂ ಕಿರಿಯ ಶಾಖಾ ನಿರೀಕ್ಷಕ ರಾಜಾರಾಮ ರಾವ್ ಡಿ. ಅವರು ಸೇವಾ ನಿವೃತ್ತಿ ಹೊಂದಿದ್ದು, ಅವರ ಬೀಳ್ಕೊಡುಗೆ ಸಮಾರಂಭ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಹಾಯಕ ಮಹಾಪ್ರಬಂಧಕ ಕರುಣಾಕರ ಹಾಗೂ ಕಿರಿಯ ಶಾಖಾ ನಿರೀಕ್ಷಕ ರಾಜಾರಾಮ ರಾವ್ ಡಿ. ಅವರು ಸೇವಾ ನಿವೃತ್ತಿ ಹೊಂದಿದ್ದು, ಅವರ ಬೀಳ್ಕೊಡುಗೆ ಸಮಾರಂಭ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು.ಕರುಣಾಕರ ಅವರು 32 ವರ್ಷ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸಿ ಸಹಾಯಕ ಮಹಾಪ್ರಬಂಧಕರಾಗಿ ನಿವೃತ್ತಿ ಹೊಂದುತ್ತಿದ್ದು ಮತ್ತು ರಾಜರಾಮ ರಾವ್ ಅವರು ಕೂಡಾ 32 ವರ್ಷ ಸೇವೆ ಸಲ್ಲಿಸಿ ಕಿರಿಯ ಶಾಖಾ ನಿರೀಕ್ಷಕರಾಗಿ ನಿವೃತ್ತಿ ಹೊಂದಿದ್ದಾರೆ.ನಿವೃತ್ತಿ ಹೊಂದಿದ ಇಬ್ಬರು ಅಧಿಕಾರಿಗಳನ್ನು ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಹಾರ, ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕೆ ನೀಡಿ ಸನ್ಮಾನಿಸಿ ಶುಭಹಾರೈಸಿದರು.

ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಎಸ್‌ಸಿಡಿಸಿಸಿ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜೋವಿನ್ ಪ್ರಕಾಶ್ ಡಿಸೋಜಾ ಮತ್ತು ಬ್ಯಾಂಕಿನ ಹಿರಿಯ ಅಧಿಕಾರಿಗಳು ಇದ್ದರು.

---------------------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೃಷಿಯಲ್ಲಿ ಹಸಿವಿದ್ದಾಗ ಒಕ್ಕಲುತನ ಪ್ರಗತಿ ಸಾಧ್ಯ
ಸಣ್ಣ ನೀರಾವರಿ ಯೋಜನೆ ದೇಶಕ್ಕೆ ಮಾದರಿ