ಗೌಡರ ಜೀವ ಬಲಿ ಪಡೆಯಲು ‘ಕೈ’ ಸಂಚು: ಜೆಡಿಎಸ್‌

KannadaprabhaNewsNetwork |  
Published : May 20, 2024, 01:37 AM ISTUpdated : May 20, 2024, 10:47 AM IST
JDS flag

ಸಾರಾಂಶ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.

  ಬೆಂಗಳೂರು :  ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರದ್ದು ಎನ್ನಲಾದ ಮೊಬೈಲ್ ಸಂಭಾಷಣೆಯ ತುಣುಕುಗಳು ಮಾಧ್ಯಮಗಳಲ್ಲಿ ಬಹಿರಂಗವಾದ ಬೆನ್ನಲ್ಲಿಯೇ ಜೆಡಿಎಸ್ ಪಕ್ಷವು ತನ್ನ ಎಕ್ಸ್ ಖಾತೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ನೇರ ವಾಗ್ದಾಳಿ ನಡೆಸಿದೆ.

ದೇವೇಗೌಡರ ಕುಟುಂಬವನ್ನು ಮುಗಿಸಲು ಕಾಂಗ್ರೆಸ್ ಸರ್ಕಾರ ವ್ಯವಸ್ಥಿತ ಹುನ್ನಾರ ನಡೆಸಿ ಯೋಜಿತವಾಗಿ ಟಾರ್ಗೆಟ್ ಮಾಡಿದೆ. ಹೊಂಚು ಹಾಕಿ ಸಂಚು ಮಾಡುವ ಕಾಂಗ್ರೆಸ್ ಪಕ್ಷದ ಅಸಲಿ ಮುಖ ಕಳಚಿ ಕೆಳಕ್ಕೆ ಬಿದ್ದಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಹೌದಲ್ಲವೇ ಕಾಂಗ್ರೆಸ್ಸಿಗರೇ? ಸತ್ಯ ನಿಮ್ಮ ಮುಂದೆಯೇ ಇದೆ. ನಿಮ್ಮ ಅಧ್ಯಕ್ಷರೇ ಪೆನ್ ಡ್ರೈವ್ ಫ್ಯಾಕ್ಟರಿಯ ಒರಿಜಿನಲ್ ಓನರ್. ಸಿಡಿ ಶಿವಕುಮಾರ್ ಗ್ಯಾಂಗ್ ನಡೆಸಿದ ಪೆನ್‌ಡ್ರೈವ್ ಹಂಚಿಕೆಯ ಹೇಯ ಕೃತ್ಯದ ಸಂಚುಗಳೇ ಅವೆಲ್ಲಾ. ದೇವರಾಜೇಗೌಡರ ಹೇಳಿಕೆಯ ನಂತರ ಹೊರಬಿದ್ದಿರುವ ಆಡಿಯೋ ಟೇಪುಗಳೇ ಮಹಾಸಂಚಿನ ಮಹಾಕಥೆಯನ್ನು ಬಿಚ್ಚಿಟ್ಟಿವೆ. ಈಗ ಹೇಳಿ, ಯಾರು ಮೆಂಟಲ್ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದೆ.

ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ರೆಡಿ ಮಾಡಿದ್ದೇ ಶಿವಕುಮಾರ್. ಮೋದಿ, ಕುಮಾರಸ್ವಾಮಿ ಅವರ ವಿರುದ್ಧ ಅಪಪ್ರಚಾರ ನಡೆಸಲು, ಇಡೀ ಸಂಚು ಅನುಷ್ಠಾನಕ್ಕೆ ನಾಲ್ವರು ಪ್ರಮುಖ ಸಚಿವರ ಸಮಿತಿ ರಚಿಸಿದ್ದೇ ಶಿವಕುಮಾರ್. ದೇವೇಗೌಡರನ್ನು ಸಾವಿನ ದವಡೆಗೆ ನೂಕುವುದು ಈ ಸ್ಲೀಪರ್ ಸೆಲ್ ಟಾರ್ಗೆಟ್. ವಕೀಲರಾದ ದೇವೇರಾಜೇಗೌಡರೇ ಸ್ವತಃ ಬಿಚ್ಚಿಟ್ಟ ಈ ಸತ್ಯಗಳು ಹಾಗೂ ಆಡಿಯೋ ಟೇಪುಗಳು ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷದ ಮಾನವನ್ನು ಬೀದಿ ಬೀದಿಯಲ್ಲಿ ಹರಾಜು ಹಾಕಿವೆ. ಕಂಡವರ ಮನೆಯಲ್ಲಿ ಸಾವು ಬಯಸುವ ಕಾಂಗ್ರೆಸ್ಸಿಗೆ ಧಿಕ್ಕಾರ ಎಂದು ಜೆಡಿಎಸ್ ಕಿಡಿಕಾರಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ