ಡಿಕೆಶಿ ಸಿಎಂ: ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಸಂಭ್ರಮಾಚರಣೆ

KannadaprabhaNewsNetwork |  
Published : Jun 04, 2026, 01:30 AM IST
ಪೊಟೋ: 03ಎಸ್‌ಎಂಜಿಕೆಪಿ06 | Kannada Prabha

ಸಾರಾಂಶ

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಗರದ ಶಿವಪ್ಪ ನಾಯಕ ಪ್ರತಿಮೆ ಬಳಿ ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ ನೇತೃತ್ವದಲ್ಲಿ ಭಗವಂತನಿಗೆ ಅತ್ಯಂತ ಪ್ರಿಯವಾದ ಹಯಗ್ರೀವ ಪ್ರಸಾದ ಹಾಗೂ ಅನ್ನ ಪ್ರಸಾದ ವಿತರಿಸಿ ಡಿ.ಕೆ.ಶಿವಕುಮಾರ್ ಅವರಿಗೆ ಶುಭಕೋರಲಾಯಿತು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಗರದ ಶಿವಪ್ಪ ನಾಯಕ ಪ್ರತಿಮೆ ಬಳಿ ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ ನೇತೃತ್ವದಲ್ಲಿ ಭಗವಂತನಿಗೆ ಅತ್ಯಂತ ಪ್ರಿಯವಾದ ಹಯಗ್ರೀವ ಪ್ರಸಾದ ಹಾಗೂ ಅನ್ನ ಪ್ರಸಾದ ವಿತರಿಸಿ ಡಿ.ಕೆ.ಶಿವಕುಮಾರ್ ಅವರಿಗೆ ಶುಭಕೋರಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ ಅವರು, ಇನ್ನು ಎರಡು ವರ್ಷದ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ಸಮಾಜಮುಖಿಯಾಗಿ ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಯುವಕರು ಮಹಿಳೆಯರಿಗೆ ಅನುಕೂಲವಾಗುವಂತಹ ಉತ್ತಮ ಕಾರ್ಯಗಳು ನಡೆಯಲಿ ಎಂದರು.

ಪ್ರತಿಯೊಂದು ಸಮಾಜಕ್ಕೂ, ಧರ್ಮಕ್ಕೂ ಸಮಾನವಾಗಿ ಕೆಲಸ ಮಾಡುವ ಮೂಲಕ ರಾಜ್ಯದ ಆದರ್ಶ ಮುಖ್ಯಮಂತ್ರಿಯಾಗಿ ಇನ್ನು 12 ವರ್ಷಗಳ ಕಾಲ ರಾಜ್ಯದ ಪ್ರಜೆಗಳ ಸೇವೆ ಮಾಡಲಿ. ಈಗಿರುವ ಪಂಚ ಗ್ಯಾರಂಟಿಗಳ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿಕೊಳ್ಳಲಾಯಿತು. ಇವರು ಅವಧಿಯಲ್ಲಿ ಮಳೆ ಬೆಳೆ ಪ್ರಕೃತಿಯಲ್ಲಿ ಉತ್ತಮ ವಾತಾವರಣ ನಿರ್ಮಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು.

ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯ ಎಚ್.ಸಿ. ಯೋಗೇಶ್, ರಾಜ್ಯ ಹಿಂದುಳಿದ ವರ್ಗಗಳ ಮುಖಂಡ ಬಿ.ಎಮ್. ಹರ್ಷ, ಶಿವಮೊಗ್ಗ ಜಿಲ್ಲಾ ಐಎನ್‌ಟಿಯುಸಿ ಮಹಿಳಾ ವಿಭಾಗದ ಅಧ್ಯಕ್ಷೆ ಕವಿತಾ ರಾಘವೇಂದ್ರ, ಕೆಪಿಸಿಸಿ ಸಂಯೋಜಕ ಕವಿತಾ, ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್, ಎಸ್.ಎ. ಬಾಬು, ಹುಸೇನ್, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಸ್ಟೆಲಾ ಮಾರ್ಟಿನ್, ಗ್ಲಾಡಿನ್ ಗೋಂದಿ ಚಟ್ನಳ್ಳಿ ರಾಜೀವ, ನಿಸಾರ್ ಅಹಮದ್, ಜೋಳ ದಾಲ್ ನಾಗರಾಜ್ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚನ್ನರಾಯಪಟ್ಟಣದಲ್ಲಿ ನಾಳೆಯಿಂದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿ
ಬೇಲೂರಿನಲ್ಲಿ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ