ರಾಮನಗರ: ಸಂದಿಗ್ಧ ಮತ್ತು ಸಂಕಷ್ಟ ಪರಿಸ್ಥಿತಿಗಳಲ್ಲಿ ಕಾಂಗ್ರೆಸ್ ಪಾಲಿಗೆ ''''ಬಂಡೆ''''ಯಂತೆ ನಿಂತು ಪಕ್ಷ ನಿಷ್ಠೆ ಪ್ರದರ್ಶಿಸುತ್ತಾ ಬಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಒಡಿಶಾ ರಾಜ್ಯದ ರಾಜ್ಯಸಭೆ ಚುನಾವಣೆ ಸವಾಲಾಗಿ ನಿಂತಿದೆ.
ಕಾಂಗ್ರೆಸ್ ಪಾಲಿಗೆ ಆಪತ್ಬಾಂಧವ :
ವಿಲಾಸ್ರಾವ್ ದೇಶಮುಖ್ ಅವರು ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಅವರು 2002ರಲ್ಲಿ ಅವಿಶ್ವಾಸ ನಿರ್ಣಯ ಎದುರಿಸಬೇಕಾಗಿ ಬಂದಿತು. ಆ ಸಂದರ್ಭದಲ್ಲಿ ಅವರೊಂದಿಗೆ ಡಿ.ಕೆ.ಶಿವಕುಮಾರ್ ನಿಕಟವಾಗಿ ಕೆಲಸ ಮಾಡಿದರು. ವಿಶ್ವಾಸಮತದ ದಿನಾಂಕದವರೆಗೆ ಬೆಂಗಳೂರಿನ ಹೊರವಲಯದಲ್ಲಿರುವ ರೆಸಾರ್ಟ್ನಲ್ಲಿ ಮಹಾರಾಷ್ಟ್ರದಶಾಸಕರಿಗೆ ಆತಿಥ್ಯ ನೀಡಿ ದೇಶಮುಖ್ ಸರ್ಕಾರವನ್ನು ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇದರ ಪರಿಣಾಮ ಡಿ.ಕೆ.ಶಿವಕುಮಾರ್ ಅವರ ನಿವಾಸ ಮತ್ತು ಆಪ್ತರ ಮೇಲೆ ಐಟಿ (ಆದಾಯ ತೆರಿಗೆ) ಮತ್ತು ಇಡಿ (ಜಾರಿ ನಿರ್ದೇಶನಾಲಯ) ಇಲಾಖೆಗಳ ನಿರಂತರ ದಾಳಿಗಳು ನಡೆದವು. ಕೊನೆಗೆ ದೆಹಲಿಯ ತಿಹಾರ್ ಜೈಲುವಾಸ ಅನುಭವಿಸಬೇಕಾಯಿತು. ಈ ಘಟನೆ ಡಿ.ಕೆ.ಶಿವಕುಮಾರ್ ಅವರನ್ನು ಗಾಂಧಿ ಕುಟುಂಬದ ಅತ್ಯಂತ ಆಪ್ತ
ವಲಯದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿತು. ಇದು ಟ್ರಬಲ್ ಶೂಟರ್ ಇಮೇಜ್ ಮತ್ತಷ್ಟು ಹೆಚ್ಚಿಸಿತು.2018 ರ ಚುನಾವಣೆಯ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಹಾಗೂ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಡಿ.ಕೆ.ಶಿವಕುಮಾರ್ ನಿರ್ಣಾಯಕ ಪಾತ್ರ ವಹಿಸಿದ್ದರು.
ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲೂ ಡಿ.ಕೆ.ಶಿವಕುಮಾರ್ ಕಾರ್ಯತಂತ್ರ ಕೆಲಸ ಮಾಡಿದೆ. ಇತ್ತೀಚೆಗಷ್ಟೇ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬಿಕ್ಕಟ್ಟಿಗೆ ಸಿಲುಕಿದಾಗಲೂ ಹೈಕಮಾಂಡ್ ಡಿಕೆಶಿ ಅವರನ್ನು ವೀಕ್ಷಕರನ್ನಾಗಿ ಕಳುಹಿಸಿತ್ತು. ಒಟ್ಟಾರೆಯಾಗಿ ಪಕ್ಷಕ್ಕಾಗಿ ಎಂತಹ ಸವಾಲು ಸ್ವೀಕರಿಸಲು ಸಿದ್ಧರಿರುವ ಡಿ.ಕೆ.ಶಿವಕುಮಾರ್ ಇದೀಗ ಒಡಿಶಾ ರಾಜ್ಯದ ರಾಜ್ಯಸಭೆ ಚುನಾವಣೆಗೆ ಕೈ ಹಾಕಿದ್ದಾರೆ.13ಕೆಆರ್ ಎಂಎನ್ 6.ಜೆಪಿಜಿ
ಡಿ.ಕೆ.ಶಿವಕುಮಾರ್