ಕನ್ನಡಪ್ರಭ ವಾರ್ತೆ ಮುಧೋಳತಾಯಿ-ತಂದೆಯ ಋಣ ತೀರಿಸಲು ಯಾರಿಂದಲೂ ಸಾಧ್ಯವಿಲ್ಲ. ಹೀಗಾಗಿ, ಅವರ ಹೆಸರಿನಲ್ಲಿ ಸಮಾಜಕ್ಕೆ ಮಾದರಿಯಾಗುವ ಉತ್ತಮ ಕೆಲಸ ಮಾಡಿದರೆ ತಾಯಿ-ತಂದೆ ಋಣ ತೀರಿಸಿದಂತೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಹಿರಿಯ ನಟಿ ಗೀತಾ ಅವರು ನಟಿಸಿರುವ ಹಲವಾರು ಚಲನಚಿತ್ರಗಳನ್ನು ನೋಡಿ ಸಂತೋಷ ಪಟ್ಟಿದ್ದೇನೆ. ಅವರ ನೈಜ ಕಲೆ ಇತರೆ ಕಲಾವಿದರಿಗೆ ಪ್ರೇರಣೆಯಾಗಲಿ ಎಂದರು.
ಯಡಹಳ್ಳಿ ಅಡವಿಸಿದ್ದೇಶ್ವರ ಮಠದ ಚಂದ್ರಶೇಖರ ಮಹಾಸ್ವಾಮಿಜಿ ದಿವ್ಯಸಾನಿಧ್ಯವಹಿಸಿ ಆರ್ಶೀವಚನ ನೀಡಿದರು.ಅರಳಿಕಟ್ಟಿ ಫೌಂಡೇಷನ್ದ ಸಂಸ್ಥಾಪಕ ಅಧ್ಯಕ್ಷ ಡಾ.ಟಿ.ವ್ಹಿ.ಅರಳಿಕಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ನಾನು ಯಾವುದೇ ಲಾಭದ ಉದ್ದೇಶವಿಟ್ಟುಕೊಂಡು ಶಿಕ್ಷಣ ಸಂಸ್ಥೆ ತೆರದಿಲ್ಲ, ಗ್ರಾಮೀಣ ಭಾಗದ ಬಡ, ಪ್ರತಿಭಾವಂತ, ರೈತರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಬೇಕೆಂಬ ಸದುದ್ದೇಶದಿಂದ ಈ ಶೈಕ್ಷಣಿಕ ಸಂಸ್ಥೆಯನ್ನು ತೆರೆದಿದ್ದೇನೆ. ವಿದ್ಯಾರ್ಥಿಗಳ ಪಾಲಕರು ಬೆಂಬಲ ಮತ್ತು ಸಹಕಾರ ನೀಡಿದ್ದಾರೆ ಎಂದರು.ಮಾಜಿ ಜಿಪಂ ಅಧ್ಯಕ್ಷ ಎಂ.ಎಲ್.ಕೆಂಪಲಿಂಗಣ್ಣವರ, ನಿವೃತ್ತ ಡಿಡಿಪಿಐ ಎಂ.ಜಿ.ದಾಸರ, ಕೊಣ್ಣೂರು ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಕೊಣ್ಣೂರ, ಕಬ್ಬು ಬೆಳೆಗಾರರ ಸೌಹಾರ್ಧ ಸಹಕಾರಿ ಸಂಘದ ಅಧ್ಯಕ್ಷ ಗಿರೀಶಗೌಡ ಪಾಟೀಲ, ಉಪಾಧ್ಯಕ್ಷ ಅನಂತರಾವ ಘೋರ್ಪಡೆ, ಮುಧೋಳ ರಾಯಲ್ ಸ್ಕೂಲ್ ಅಧ್ಯಕ್ಷೆ ಸವಿತಾ.ಟಿ.ಅರಳಿಕಟ್ಟಿ, ಉಪಾಧ್ಯಕ್ಷೆ ರಾಜೇಶ್ವರಿ ಕೋಮಾರ, ಕಾರ್ಯದರ್ಶಿ ವಿನಾಯಕ ಟಿ.ಅರಳಿಕಟ್ಟಿ, ವರ್ಷಾ ಘಾರಗೆ,
ಹಾಗೂ ಸಂಸ್ಥೆಯ ಆಡಳಿತಿ ಮಂಡಳಿಯ ಸದಸ್ಯರು, ಗಾಯಕರಾದ ಹೇಮಂತಕುಮಾರ, ಜಸ್ಕರನ್ ಸಿಂಗ್ಗೂ ನಟರಾಜ ಕಲಾ ತಂಡದಿಂದ ವಿಶೇಷ ಮನರಂಜನಾ ಕಾರ್ಯಕ್ರಮ ಜರುಗಿದವುಕೋಟ್ಉತ್ತರ ಕರ್ನಾಟಕದ ಜನರ ಪ್ರೀತಿ, ವಿಶ್ವಾಸ ಯಾವತ್ತೂ ನನ್ನ ಮೇಲೆ ಇರಲಿ. ಪ್ರತಿಯೊಬ್ಬ ವ್ಯಕ್ತಿಯು ತಾನು ಗಳಿಸಿದ್ದರಲ್ಲಿ ಸ್ವಲ್ಪವಾದರೂ ಸಮಾಜಕ್ಕೆ ಖರ್ಚು ಮಾಡಬೇಕು, ಆಗ ಸಮಾಜ ತಮ್ಮನ್ನು ಗುರುತಿಸಿ ಗೌರವಿಸುತ್ತದೆ, ಸಮಾಜ ಕೊಡುವ ಗೌರವ ಎಲ್ಲರಿಗಿಂತಲೂ ದೊಡ್ಡದು.ಗೀತಾ, ಹಿರಿಯ ಚಿತ್ರನಟಿ