ಕನ್ನಡಪ್ರಭ ವಾರ್ತೆ ಹಾಸನ
ಕಾರ್ಯಕ್ರಮವನ್ನು ಕನಸು ಮತ್ತು ಬೇಗೂರು ಸೌಹಾರ್ದ ಸಂಸ್ಥೆಯ ಸಂಸ್ಥಾಪಕರಾದ ಶ್ರೀಮತಿ ಜಿ.ಆರ್. ಚಂದ್ರಕಲಾ ಅವರು ಉದ್ಘಾಟಿಸಿದರು. ನಂತರ ಉದ್ದೇಶಿಸಿ ಮಾತನಾಡಿದ ಅವರು, ಮಕ್ಕಳ ಪೋಷಕರು ಮಕ್ಕಳಿಗೆ ಮೊಬೈಲ್ ಕೊಟ್ಟು ಅಭ್ಯಾಸ ಮಾಡಬೇಡಿ. ಮಕ್ಕಳ ಜೊತೆ ನೀವು ಸೇರಿ ನೀತಿ ಕಥೆ, ಹಾಡು, ನೃತ್ಯ, ಜಾನಪದ ಗೀತೆಗಳು, ಮಕ್ಕಳ ಚಲನ, ವಲನ ಹಾಗೂ ಪಾಲನೆಗೆ ಹೆಚ್ಚಿನ ಗಮನಕೊಡಬೇಕು ಎಂದು ಪೋಷಕರಿಗೆ ಮನವರಿಕೆ ಮಾಡಿಕೊಟ್ಟರು.
ಮುಖ್ಯ ಅತಿಥಿಗಳಾಗಿ ಲೇಡೀಸ್ ಕ್ಲಬ್ ನ ಕಾರ್ಯದರ್ಶಿ ಹಾಗೂ ವೈಷ್ಣವಿ ಚಾರಿಟೇಬಲ್ ಟ್ರಸ್ಟ್ ನ ಸಹ ಕಾರ್ಯದರ್ಶಿ ಪ್ರತಿಭಾ ಇವರು ಮಕ್ಕಳಿಗೆ ಪರಿಸರದ ಜಾಗೃತಿ ಮೂಡಿಸಿದರು. ಕೃಷ್ಣ ರಾಧೆ ವೇಷಧರಿಸಿದ್ದ ಮಕ್ಕಳಿಗೆ ಮತ್ತು ಪೋಷಕರಿಗೆ ಹಸಿರು ಗಿಡಗಳನ್ನು ಕೊಡುವ ಮೂಲಕ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು.