ಮಕ್ಕಳ ಕೈಗೆ ಮೊಬೈಲ್‌ ಕೊಡದಿರಿ

KannadaprabhaNewsNetwork |  
Published : Feb 02, 2025, 01:02 AM IST
ತುಮಕೂರಿನ ಬಾಲಭವನದಲ್ಲಿ ನಡೆದ ಮೈಸೂರು ರಂಗಾಯಣ ನಾಟಕಕ್ಕೆ ಚಾಲನೆ ನೀಡಿದ ಚೇತನಕುಮಾರ್ | Kannada Prabha

ಸಾರಾಂಶ

ತಂತ್ರಜ್ಞಾನ ಪ್ರಾಬಲ್ಯವಿರುವ ಯುಗದಲ್ಲಿ ಸರ್ವವ್ಯಾಪಿಯಾಗಿರುವ ಮೊಬೈಲ್ ಅತಿಯಾದ ಬಳಕೆಯಿಂದ ವಿದ್ಯಾರ್ಥಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎನ್. ಚೇತನಕುಮಾರ್ ಹೇಳಿದರು.

ಕನ್ನಡಪ್ರಭ ವಾರ್ತೆ, ತುಮಕೂರುತಂತ್ರಜ್ಞಾನ ಪ್ರಾಬಲ್ಯವಿರುವ ಯುಗದಲ್ಲಿ ಸರ್ವವ್ಯಾಪಿಯಾಗಿರುವ ಮೊಬೈಲ್ ಅತಿಯಾದ ಬಳಕೆಯಿಂದ ವಿದ್ಯಾರ್ಥಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎನ್. ಚೇತನಕುಮಾರ್ ಹೇಳಿದರು.ನಗರದ ಬಾಲಭವನದಲ್ಲಿ ಬಾಲಭವನ ಸಮಿತಿ ಹಾಗೂ ಝೆನ್ ಟೀಮ್ ವತಿಯಿಂದ ಆಯೋಜಿಸಿದ್ದ ಮೈಸೂರು ರಂಗಾಯಣದ ಮೈ ಫ್ಯಾಮಿಲಿ ನಾಟಕ ಉದ್ಘಾಟಿಸಿ ಮಾತನಾಡಿದರು.ಮೊಬೈಲ್‌ನಿಂದ ಸಿಗುವ ಮನರಂಜನೆಯ ಆಕರ್ಷಣೆಯು ಏಕಾಗ್ರತೆಗೆ ಭಂಗ ತರುತ್ತದೆ. ಇದರಿಂದಾಗಿ ಮಕ್ಕಳ ಕಡಿಮೆ ಶೈಕ್ಷಣಿಕ ಕಾರ್ಯಕ್ಷಮತೆಗೆ ಕಾರಣವಾಗುತ್ತದೆ. ಮೊಬೈಲ್ ಅತಿಯಾದ ಬಳಕೆ ವ್ಯಸನದಂತಹ ನಡಾವಳಿಕೆಗೆ ಕಾರಣವಾಗುತ್ತದೆ. ಹೀಗಾಗಿ ಯಾವ ವಯಸ್ಸಿನಲ್ಲಿ ಮಕ್ಕಳಿಗೆ ಮೊಬೈಲ್‌ ನೀಡಬೇಕು ಎಂಬುದನ್ನು ಪೋಷಕರು ನಿರ್ಧರಿಸಬೇಕು ಎಂದರು.

ವರ್ಚುವಲ್ ಸಂವಹನಗಳಲ್ಲಿ ಹೆಚ್ಚಿನ ಸಮಯವನ್ನು ಕಳೆಯುವುದರಿಂದ ಮುಖಾಮುಖಿ ಸಂವಹನದ ಅವಕಾಶಗಳನ್ನು ಮಕ್ಕಳು ಕಳೆದುಕೊಳ್ಳುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ ಮೊಬೈಲ್ ಉಳ್ಳವರ ಸೊತ್ತಾಗಿತ್ತು. ಆದರೆ ಈಗ ಮೊಬೈಲ್‌ ಚಿಣ್ಣರ ಆಟಿಕೆಯ ವಸ್ತುವಾಗಿ ಯುವಕರೊಡಗೂಡಿ ವಯೋವೃದ್ಧರವರೆಗೆ ದಿನ ಬಳಕೆ ವಸ್ತುವಾಗಿದೆ. ಒಂದು ಮೊಬೈಲ್‌ ಬಳಸುವ ಕೆಲ ವಿದ್ಯಾರ್ಥಿಗಳು ಈಗ ಎರಡೆರೆಡು ಮೊಬೈಲ್‌ ಬಳಸುತ್ತಿದ್ದಾರೆ ಎಂದರು.

ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ದಿನೇಶ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ