ಧಾರವಾಡ:
ಇಲ್ಲಿನ ಜೆಎಸ್ಎಸ್ ಉತ್ಸವ ಭವನದಲ್ಲಿ ವಿವಿಧ ಸಂಸ್ಥೆಗಳೊಡನೆ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಉದ್ಘಾಟಿಸಿದ ಅವರು, ಪ್ರತಿ ವರ್ಷ ಸಂಸ್ಥೆಯಲ್ಲಿ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಲಾಗುತ್ತಿದೆ ಎಂದರು.
ರಕ್ತವು ಮನುಷ್ಯನ ದೇಹಕ್ಕೆ ಅತ್ಯಂತ ಅವಶ್ಯಕವಾದ ಜೀವದ್ರವ್ಯ. ಅಪಘಾತ, ಶಸ್ತ್ರಚಿಕಿತ್ಸೆ, ಹೆರಿಗೆ ಸಂದರ್ಭದಲ್ಲಿ ಉಂಟಾಗುವ ತೊಂದರೆ, ವಿವಿಧ ಕಾಯಿಲೆ ಹಾಗೂ ತುರ್ತು ಚಿಕಿತ್ಸೆಯ ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ನಮ್ಮ ಒಂದು ಯೂನಿಟ್ ರಕ್ತವು ಮತ್ತೊಬ್ಬರ ಜೀವ ಉಳಿಸಲು ಸಹಾಯ ಮಾಡಬಹುದು ಎಂದರು.ಕ್ಯಾನ್ಸರ್ ಆಸ್ಪತ್ರೆಯ ಡಾ. ಉಮೇಶ ಹಳ್ಳಿಕೇರಿ ಮಾತನಾಡಿ, ಯಾವುದೇ ವ್ಯಕ್ತಿಯ ತೂಕ ಹಾಗೂ ಆರೋಗ್ಯ ಸರಿಯಾದ ಕ್ರಮದಲ್ಲಿದ್ದರೇ ಮಾತ್ರ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ರಕ್ತದಾನಕ್ಕೆ ಒಬ್ಬ ಸಾಮಾನ್ಯ ವಯಸ್ಕನ ದೇಹದಲ್ಲಿ ಐದರಿಂದ ಆರು ಲೀಟರ್ ರಕ್ತವಿದ್ದು, ಅದರಲ್ಲಿ ಕೇವಲ 300 ಮಿಲಿ ಮಾತ್ರ ರಕ್ತದಾನದ ಸಮಯದಲ್ಲಿ ಬಳಕೆಯಾಗುತ್ತದೆ. ಈ ರಕ್ತವನ್ನು ನಿಮ್ಮ ದೇಹವು 24ರಿಂದ 48 ಗಂಟೆಗಳ ಒಳಗೆ ಬದಲಾಯಿಸುತ್ತದೆ. ರಕ್ತದಾನದ ನಂತರ ಯಾವುದೇ ವಿಶೇಷ ಆಹಾರ, ವಿಶ್ರಾಂತಿ ಅಥವಾ ಔಷಧಿ ಅಗತ್ಯವಿಲ್ಲ. ಇದು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಕಡಿಮೆ ಮಾಡುತ್ತದೆ ಎಂದು ಹೇಳಿದರು.