
ಕನ್ನಡಪ್ರಭ ವಾರ್ತೆ, ತುಮಕೂರು
ನಂತರ ಮಾತನಾಡಿದ ಸ್ವಾಮೀಜಿ, ಮಕ್ಕಳನ್ನು ಕೇವಲ ಓದಿಗೆ ಸೀಮಿತಗೊಳಿಸಬೇಡಿ, ಅವರು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಪೋಷಕರು ಪ್ರೋತ್ಸಾಹ ನೀಡಬೇಕು. ಇಲ್ಲಿ ಸೇರಿರುವ 11ರಿಂದ 13 ವರ್ಷದ ಮಕ್ಕಳ ಮುಖದಲ್ಲಿ ಉತ್ಸಾಹದ ಚಿಲುಮೆ ಉಕ್ಕುತ್ತಿದೆ. ಇಂತಹ ಮಕ್ಕಳಿಗೆ ಸರಿಯಾದ ತರಬೇತಿ ನೀಡಿದರೆ ಅವರು ದೊಡ್ಡ ಸಾಧನೆ ಮಾಡುವುದರಲ್ಲಿ ಸಂದೇಹವಿಲ್ಲ ಎಂದರು.
ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಸೋತವರು ಕುಗ್ಗುವುದು, ಗೆದ್ದವರು ಹಿಗ್ಗುವುದು ಬೇಡ. ಸೋತವರು ಮತ್ತಷ್ಟು ತಯಾರಿ ಮಾಡಿಕೊಂಡು ಗೆಲುವು ಪಡೆಯಲು ಪ್ರಯತ್ನಿಸಬೇಕು. ಗೆದ್ದವರು ಮತ್ತೊಂದು ಸ್ಪರ್ಧೆಯ ಗೆಲುವಿನತ್ತ ಗಮನಹರಿಸಬೇಕು. ಶ್ರದ್ಧೆ, ಆತ್ಮವಿಶ್ವಾಸ, ತಯಾರಿಯೊಂದಿಗೆ ಸಾಧನೆ ಮಾಡಬಹುದು. ಕ್ರೀಡೆಯಲ್ಲಿ ಎತ್ತರಕ್ಕೆ ಏರಿ ದೇಶದ ಘನತೆಯನ್ನು ಎತ್ತಿಹಿಡಿಯಬೇಕು ಎಂದು ಹೇಳಿದರು.ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ, ಮಾಜಿ ಸಚಿವ ಕುಮಾರ್ ಬಂಗಾರಪ್ಪ ಮಾತನಾಡಿ, ರಾಜಕೀಯ ಕ್ಷೇತ್ರಕ್ಕಿಂಥಾ ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚು ಆಸಕ್ತಿಯಿಂದ ತೊಡಗಿಕೊಂಡಿದ್ದಾರೆ. ನಮ್ಮ ಕ್ರೀಡಾಪಟುಗಳನ್ನು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟಕ್ಕೆ ತಯಾರು ಮಾಡುವ ಕಾಳಜಿ ಹೊಂದಿರುವುದು ಶ್ಲಾಘನೀಯ. ಯಲಹಂಕ ಬಳಿ ಸರ್ಕಾರದಿಂದ 40 ಎಕರೆ ಜಮೀನು ಪಡೆದು ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡಲು ಹೊರಟಿದ್ದಾರೆ. ಅಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಿ ತರಬೇತಿ ನೀಡಿ ಹೊಸ ಕ್ರೀಡಾಪ್ರತಿಭೆಗಳು ಬೆಳಕಿಗೆ ಬರಲು ನೆರವಾಗಲಿ ಎಂದು ಸಿದ್ಧಲಿಂಗ ಸ್ವಾಮೀಜಿ ಹೇಳಿದರು.
ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ ಗೌರವ ಕಾರ್ಯದರ್ಶಿ ವಿ. ಮುರಳಿಧರ್, ಖಜಾಂಚಿ ನಿಶ್ಚಿತಾ, ತುಮಕೂರು ಬ್ಯಾಡ್ಮಿಂಟನ್ ಅಕಾಡೆಮಿ ಅಧ್ಯಕ್ಷ ಪಿ. ಪ್ರವೀಣ್, ಗೌರವ ಕಾರ್ಯದರ್ಶಿ ವಿ. ಮುರಳಿಧರ್, ಸಂಯೋಜಕರಾದ ನಿಶಾಂತ್, ಗುರುಪ್ರಸಾದ್, ಅಜಯ್ಕುಮಾರ್, ಎಂ. ನಾಗರಾಜು, ಟಿ.ವಿ. ವೆಂಕಟಸ್ವಾಮಿ, ಊರುಕೆರೆ ಪುರುಷೋತ್ತಮ್, ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಕಾರ್ಯದರ್ಶಿ ಎ.ಎನ್. ಪ್ರಭಾಕರ್ ಮೊದಲಾದವರು ಭಾಗವಹಿಸಿದ್ದರು.