ತಮಿಳುನಾಡಿಗೆ ಒಂದು ಹನಿ ನೀರು ಬಿಡಬೇಡಿ

KannadaprabhaNewsNetwork |  
Published : Jul 29, 2026, 01:30 AM IST
ಕೆ ಕೆ ಪಿ ಸುದ್ದಿ 01: ತಮಿಳುನಾಡಿಗೆ ಕಾವೇರಿ ನೀರು ಹರಿಸಿದಂತೆ ರೈತ ಸಂಘದ ಮುಖಂಡರ ಆಗ್ರಹ.  | Kannada Prabha

ಸಾರಾಂಶ

ಕನಕಪುರ: ತಮಿಳುನಾಡಿಗೆ ನೀರು ಬಿಟ್ಟರೆ ಬೆಂಗಳೂರಿನಲ್ಲಿ ಆಗಸ್ಟ್ 3ರಂದು ಆಯೋಜಿಸಿರುವ ಕರ್ನಾಟಕ-ತಮಿಳುನಾಡು ಮುಖ್ಯಮಂತ್ರಿಗಳ ಸಭೆ ನಡೆಯಲು ಬಿಡುವುದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಯ ಕುಮಾರಸ್ವಾಮಿ ಮುಖ್ಯಮಂತ್ರಿಗಳಿಗೆ ಎಚ್ಚರಿಕೆ ನೀಡಿದ್ದಾರೆ

ಕನಕಪುರ: ತಮಿಳುನಾಡಿಗೆ ನೀರು ಬಿಟ್ಟರೆ ಬೆಂಗಳೂರಿನಲ್ಲಿ ಆಗಸ್ಟ್ 3ರಂದು ಆಯೋಜಿಸಿರುವ ಕರ್ನಾಟಕ-ತಮಿಳುನಾಡು ಮುಖ್ಯಮಂತ್ರಿಗಳ ಸಭೆ ನಡೆಯಲು ಬಿಡುವುದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಯ ಕುಮಾರಸ್ವಾಮಿ ಮುಖ್ಯಮಂತ್ರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ನಡೆದ CWRC ಸಭೆಯಲ್ಲಿ ಕರ್ನಾಟಕದ ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3.5 ಕ್ಯೂಸೆಕ್‌ ನೀರು ಬಿಡುವಂತೆ ಆದೇಶ ಹೊರಡಿಸಲಾಗಿದ್ದು ಈ ಆದೇಶ ಸಂಪೂರ್ಣ ಅವೈಜ್ಞಾನಿಕ ಮತ್ತು ರಾಜ್ಯದ ಹಿತಕ್ಕೆ ವಿರುದ್ಧವಾಗಿದ್ದು ಇದನ್ನು ರೈತ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದರು.

ನಮ್ಮ ಮುಖ್ಯಮಂತ್ರಿಗಳು ತಮಿಳುನಾಡಿಗೆ ಒಂದಿಂಚು ನೀರನ್ನು ಬಿಡಬಾರದು. ಸರ್ಕಾರ ನೀರು ಬಿಟ್ಟರೆ ಮುಂದಿನ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಹೊಣೆ. ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕರ್ನಾಟಕದೊಳಗೆ ಪ್ರವೇಶಿಸಲು ಬಿಡುವುದಿಲ್ಲ. ಈಗಾಗಲೇ ಕರ್ನಾಟಕದ ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿ ಕೆರೆಗಳು, ಕೊಳವೆ ಬಾವಿಗಳು ಬತ್ತಿ ರೈತರು ಬೆಳೆದ ಬೆಳೆಗಳು ಒಣಗುತ್ತಿವೆ.

ಕೆಆರ್‌ಎಸ್ ಜಲಾಶಯದ ಸಂಗ್ರಹವೂ ಅಪಾಯದ ಮಟ್ಟದಲ್ಲಿದೆ. ಈಗಿರುವ ನೀರು ಸಂಗ್ರಹ ಒಂದು ಬೆಳೆಗೂ ಸಾಕಾಗುವುದಿಲ್ಲ. ಇಂತಹ ಸಂದರ್ಭದಲ್ಲಿ 4 ಟಿಎಂಸಿ ನೀರನ್ನು ಹೊರ ರಾಜ್ಯಕ್ಕೆ ಬಿಡುವಂತೆ ಸಮಿತಿ ಹೇಳುವುದು ರೈತರ ಬದುಕಿನೊಂದಿಗೆ ಚೆಲ್ಲಾಟವಾಡಿದಂತಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ತಮಿಳುನಾಡು ಕಾವೇರಿ ನೀರನ್ನು ಕೇವಲ ಕೃಷಿಗಷ್ಟೇ ಅಲ್ಲ, ಉದ್ಯಮಕ್ಕೂ ಬಳಸಿಕೊಂಡು ಕರ್ನಾಟಕದ ಪಾಲನ್ನು ಲೂಟಿ ಮಾಡುತ್ತಿದೆ. ಸಿಡಬ್ಲ್ಯುಸಿ ಆದೇಶದಲ್ಲಿ ಕರ್ನಾಟಕದ ಜನ ಮತ್ತು ಜಾನುವಾರುಗಳ ಕುಡಿಯುವ ನೀರಿನ ಪ್ರಮಾಣದ ಅಗತ್ಯವನ್ನು ಪರಿಗಣಿಸಿಯೇ ಇಲ್ಲ. ನ್ಯಾಯಾಧೀಕರಣದ ತೀರ್ಪಿನಲ್ಲಿ "ಕರ್ನಾಟಕದ ಮೊದಲು ಕುಡಿಯುವ ನೀರು " ಎಂಬ ಸ್ಪಷ್ಟ ನಿಬಂಧನೆ ಇದ್ದರೂ ಅದನ್ನು ಗಾಳಿಗೆ ತೂರಲಾಗಿದೆ. ಈ ಅವೈಜ್ಞಾನಿಕ ಆದೇಶವನ್ನು ಕರ್ನಾಟಕ ಸರ್ಕಾರ ತಕ್ಷಣ ವಿರೋಧಿಸಿ ಸುಪ್ರೀಂಕೋರ್ಟಿ ಮೆಟ್ಟಿಲೇರಬೇಕು. ಯಾವುದೇ ಕಾರಣಕ್ಕೂ KRS ನಿಂದ ಒಂದು ಹನಿ ನೀರನ್ನು ಕೂಡ ತಮಿಳುನಾಡಿಗೆ ಬಿಡಬಾರದು. ಇಂತಹ ಬರಗಾಲದ ಸಂದರ್ಭದಲ್ಲಿ ನೀರು ಬಿಟ್ಟರೆ ಕರ್ನಾಟಕದ 40 ಲಕ್ಷ ರೈತರ ಬದುಕು ಬೀದಿಗೆ ಬೀಳುತ್ತದೆ ಎಂದು ಕಿಡಿಕಾರಿದರು.

ಕರ್ನಾಟಕ ರಾಜ್ಯ ರೈತ ಸಂಘಟನೆಯ ಸಂಚಾಲಕ ಚೀಲೂರು ಮುನಿರಾಜು ಮಾತನಾಡಿ, ಕರ್ನಾಟಕ ಸರ್ಕಾರ ತಕ್ಷಣವೇ ಸರ್ವ ಪಕ್ಷಗಳ ಸಭೆ ಕರೆದು ಏಕಾಭಿಪ್ರಾಯದ ನಿರ್ಣಯ ಮಾಡಬೇಕು. ಅಗತ್ಯ ಬಿದ್ದರೆ ಕಾವೇರಿ ಉಳಿಸಿ, ಕರ್ನಾಟಕ ಉಳಿಸಿ ಚಳವಳಿ ಹೋರಾಟಕ್ಕೆ ರೈತ ಸಂಘ ಸಿದ್ಧವಿದೆ. ಸಿಡಬ್ಲ್ಯುಸಿ ಮತ್ತು ಕೇಂದ್ರ ಸರ್ಕಾರ ಕರ್ನಾಟಕದ ರೈತರ ಕಣ್ಣೀರಿಗೆ ಬೆಲೆ ಕೊಡದಿದ್ದರೆ ಅದರ ಪರಿಣಾಮ ಅನುಭವಿಸಬೇಕಾಗುತ್ತದೆ. ಸರ್ಕಾರ ಕದ್ದು ಮುಚ್ಚಿ ನೀರು ಹರಿಸಿದರೆ ಸರ್ಕಾರಕ್ಕೆ ರೈತರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ರೈತ ಮುಖಂಡರಾದ ರವಿಚಂದ್ರ, ಸಿದ್ದರಾಜು, ಶಶಿಕುಮಾರ್ ಹಾಜರಿದ್ದರು.

ಕೆ ಕೆ ಪಿ ಸುದ್ದಿ 01:

ಕನಕಪುರದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಕರ್ನಾಟಕ ರಾಜ್ಯ ರೈತ ಸಂಘಟನೆಯ ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು. ಸಂಚಾಲಕ ಚೀಲೂರು ಮುನಿರಾಜು, ರವಿಚಂದ್ರ, ಸಿದ್ದರಾಜು, ಶಶಿಕುಮಾರ್ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತಿ ಗ್ರಾ.ಪಂನಲ್ಲಿ ಅರ್ಹ ಮೂವರು ಗೃಹಲಕ್ಷ್ಮಿಯರಿಗೆ ಸನ್ಮಾನ: ಎಲ್.ಪಿ. ಪ್ರಕಾಶ್‌ಗೌಡ
ಸೌಲಭ್ಯ ವಂಚಿತರಿಗೆ ನೆರವಾಗುವ ದೊಡ್ಡ ಸಂಸ್ಥೆ ರೋಟರಿ: ಅಲೆನ್ ವಿನಯ್ ಲಿವಿಸ್