ವೈದ್ಯ ಸಾವು: ತನಿಖೆಗೆ ನಡೆಸುವಂತೆ ಪತ್ನಿ ದೂರು

KannadaprabhaNewsNetwork |  
Published : May 05, 2026, 02:30 AM IST
ಜೋಯಿಡಾ 04 ಸೋಮವಾರ         | Kannada Prabha

ಸಾರಾಂಶ

ತಾಲೂಕಿನ ಡಿಗ್ಗಿ ಆಸ್ಪತ್ರೆಯ ವೈದ್ಯ ಲೆನ್ಸರ್ ಲೋಬೊ ಸಾವು ಸಂಶಯಾಸ್ಪದವಾಗಿದ್ದು ತನಿಖೆ ನಡೆಸಿ ನ್ಯಾಯ ನೀಡಬೇಕೆಂದು ಅವರ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಜೋಯಿಡಾ:

ತಾಲೂಕಿನ ಡಿಗ್ಗಿ ಆಸ್ಪತ್ರೆಯ ವೈದ್ಯ ಲೆನ್ಸರ್ ಲೋಬೊ ಸಾವು ಸಂಶಯಾಸ್ಪದವಾಗಿದ್ದು ತನಿಖೆ ನಡೆಸಿ ನ್ಯಾಯ ನೀಡಬೇಕೆಂದು ಅವರ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಲೆನ್ಸರ್ ಲೋಬೊ ಜೋಯಿಡಾದ ಇಬ್ರಾಹಿಂ ಎಂಬ ಗೆಳೆಯನೊಂದಿಗೆ ಗೋವಾಕ್ಕೆ ಹೋಗಿ ಬಂದಾಗ ಆರೋಗ್ಯ ಸರಿ ಇರಲಿಲ್ಲ. ತಾವೇ ಸ್ವತಃ ಚಿಕಿತ್ಸೆ ಮಾಡಿಕೊಳ್ಳುತ್ತಿದ್ದರು. ಈ ಸಂದರ್ಭ ಊಟ ಕೂಡ ಮಾಡುತ್ತಿರಲಿಲ್ಲ. ಹೀಗಾಗಿ ಅಸ್ವಸ್ಥರಾಗಿ ಕಾಣುತಿದ್ದರು. ಕಳೆದ ಏ. ೩೦ರಂದು ಚಿಕಿತ್ಸೆಗೆ ಸ್ಪಂದಿಸದೇ ಇದ್ದಾಗ ಅವರು ಸಂಜೆ 6.30ರ ವೇಳೆಗೆ ನಿತ್ರಾಣರಾದರು. ಆಗ ನಾನು ಅವರನ್ನು ಜೋಯಿಡಾ ಆಸ್ಪತ್ರೆಗೆ ಕರೆದುಕೊಂಡು ಹೋದೆ. ಆದರೆ ಆಗಲೇ ಅವರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದರು ಎಂದು ದೂರಿನಲ್ಲಿ ಮೃತರ ಪತ್ನಿ ನಿಖಿತಾ ಲೋಬೋ ತಿಳಿಸಿದ್ದಾರೆ.

ಕುಡಿತ, ಅನಾರೋಗ್ಯ, ವಿಷಾಹಾರ ಸೇವನೆಯೇ ಸಾವಿಗೆ ಕಾರಣವಾಗಿದ್ದು, ವೈದ್ಯರ ಜೊತೆ ಹೋದ ಗೆಳೆಯನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದು, ಘಟನೆಯ ಸಂಪೂರ್ಣ ತನಿಖೆ ನಡೆಸಿ ಸಾವಿಗೆ ನ್ಯಾಯ ನೀಡುವಂತೆ ಮನವಿ ಮಾಡಿದ್ದಾರೆ. ಈ ಪ್ರಕರಣದ ತನಿಖೆಯನ್ನು ಜೋಯಿಡಾ ಪಿಎಸ್ಐ ಮಹೇಶ ಮಾಳಿ ಕೈಕೊಂಡಿದ್ದಾರೆ.ಕಾರವಾರ: ತಲೆಮರೆಸಿಕೊಂಡಿದ್ದ ಆರೋಪಿಗೆ 33 ವರ್ಷಗಳ ಬಳಿಕ 5 ವರ್ಷ ಜೈಲು ಶಿಕ್ಷೆ

ಹಳೆಯ ದ್ವೇಷದ ಹಿನ್ನೆಲೆ ದೊಣ್ಣೆಯಿಂದ ಹೊಡೆದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ 1993ರ ಹಳೆಯ ಪ್ರಕರಣದ ಆರೋಪಿಗೆ ಕಾರವಾರದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹7,000 ದಂಡ ವಿಧಿಸಿ ತೀರ್ಪು ನೀಡಿದೆ.ಹಳೆಯ ದ್ವೇಷದ ಹಿನ್ನೆಲೆ ಆರೋಪಿಗಳು ಗುಂಪುಗೂಡಿ ಪ್ರಶಾಂತ್ ಎಂಬ ವ್ಯಕ್ತಿಗೆ ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದರು. ಈ ಕುರಿತು 1993ರಲ್ಲಿ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 143, 147, 149, 504, 302 ಅಡಿ ಪ್ರಕರಣ ದಾಖಲಾಗಿತ್ತು. ಅಂದಿನ ಕದ್ರಾ ವೃತ್ತದ ಸಿಪಿಐ ಆಗಿದ್ದ ಡಿ.ಕೆ. ನಿಕ್ಕಮ್ ಅವರು ಸಮಗ್ರ ತನಿಖೆ ನಡೆಸಿ, ಕಾರವಾರದ ಭಗತವಾಡಾ ಅಸ್ನೋಟಿ ನಿವಾಸಿ ದೀಲಿಪ ಶಾಂತಾ ತಳೇಕರ ಎಂಬಾತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದಾಗ ಆರೋಪಿ ದೀಲಿಪ ತಲೆಮರೆಸಿಕೊಂಡಿದ್ದ. ಹೀಗಾಗಿ ಆತನ ಪ್ರಕರಣವನ್ನು ಎಲ್.ಪಿ.ಸಿ ಎಂದು ಪರಿಗಣಿಸಲಾಗಿತ್ತು. ತರುವಾಯ, 16-04-2021 ರಂದು ಚಿತ್ತಾಕುಲ ಪಿಎಸ್‌ಐ ಪ್ರವೀಣ್ ಕುಮಾರ್ ನೇತೃತ್ವದ ಪೊಲೀಸ್ ತಂಡವು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ, ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಕಾರವಾರದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ಆರೋಪಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ ₹7 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಸುನೀತಾ ನಾಗೇಕರ ವಾದ ಮಂಡಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪರೀಕ್ಷಾ ಕೇಂದ್ರಗಳಲ್ಲಿ ಜನಿವಾರ, ಮಂಗಳಸೂತ್ರ ತೆಗಿಸುವುದು ನಿಲ್ಲಲಿ
ಫಸಲ್ ಬಿಮಾ ಯೋಜನೆಯಲ್ಲಿ ಭಾರೀ ಅಕ್ರಮ: ಆರೋಪ