ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ಎಲ್ಲಾ ಆಸ್ಪತ್ರೆಗಳಲ್ಲಿ ಹಲವು ಸಮಸ್ಯೆಗಳಿವೆ. ಇಲಾಖೆ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಮತ್ತು ಆಸ್ಪತ್ರೆಗಳಿಗೆ ಔಷಧಿಯನ್ನು ಪೂರೈಸುವಂತೆ ಒತ್ತಾಯಿಸಿ, ಹಲವು ಬಾರಿ ಇಲಾಖೆಯ ಸಚಿವರುಗಳೊಂದಿಗೆ ಸಭೆ ನಡೆಸಿದ್ದೇವೆ. ಫೆ.13 ರಂದು ಕೂಡ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿತ್ತು. ಆದರೆ ಸಭೆಯಲ್ಲಿ ಯಾವುದೇ ತೀರ್ಮಾನಕ್ಕೆ ಬಾರದೇ ಇರುವುದರಿಂದ ಮುಂದಿನ ಹಂತವಾಗಿ ಮುಷ್ಕರ ನಡೆಸಲು ತೀರ್ಮಾನಿಸಲಾಯಿತು ಎಂದರು.
ಮಾ.11ರಿಂದ ಮಾ.15ರವರೆಗೆ ಮುಷ್ಕರ ಮಾಡುತ್ತೇವೆ. ಬೇಡಿಕೆ ಈಡೇರದಿದ್ದರೆ ಅನಿರ್ಧಿಷ್ಟ ಅವಧಿವರೆಗೆ ಗೈರು ಹಾಜರಾಗುವ ಮೂಲಕ ನಮ್ಮ ಮುಷ್ಕರವನ್ನು ಮುಂದುವರೆಸುತ್ತೇವೆ. ಸರ್ಕಾರ ಇದಕ್ಕೆ ಅವಕಾಶ ಕೊಡದೆ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.ನಮ್ಮ ಪ್ರಮುಖ ಬೇಡಿಕೆಗಳೆಂದರೆ ಸರ್ಕಾರಿ ಆಸ್ಪತ್ರೆಗಳಿಗೆ ಸಮರ್ಪಕವಾಗಿ ಕಾಲ ಕಾಲಕ್ಕೆ ಔಷಧಿಯನ್ನು ಸರಬರಾಜು ಮಾಡಬೇಕು. ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ 3 ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಲು ಅವಕಾಶ ಇದ್ದರೂ ಕೂಡ ಅದನ್ನು ಉಲ್ಲಂಘನೆ ಮಾಡಲಾಗಿದೆ ಎಂದರು.
ಪ್ರಮುಖರಾದ ಡಾ.ನಾಗೇಂದ್ರಪ್ಪ, ಡಾ. ನಾಗರಾಜ್ನಾಯ್ಕ, ಪಾಪಣ್ಣ, ಮ.ಸ. ನಂಜುಂಡಸ್ವಾಮಿ, ಶಂಕರ್, ಪಿ.ಮಂಜುಳಾ, ಇಂದಿರಮ್ಮ, ಡಾ. ಗುಡದಪ್ಪ, ಅಶೋಕ್, ನರಸಿಂಹ, ವಿಜಯ್ ಆಂಟೋನಿ ಇತರರು ಇದ್ದರು.