ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣ ಅಭಿವೃದ್ಧಿ: ಡಾ.ಕೆ.ಸುಧಾಕರ್

KannadaprabhaNewsNetwork |  
Published : Jul 18, 2025, 12:48 AM IST
ದೊಡ್ಡಬಳ್ಳಾಪುರ ರೈಲು ನಿಲ್ದಾಣಕ್ಕೆ ಗುರುವಾರ ಭೇಟಿ ನೀಡಿದ ಸಂಸದ ಡಾ.ಕೆ.ಸುಧಾಕರ್‌ ಅಮೃತ ಭಾರತ್‌ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಇಲ್ಲಿನ ರೈಲು ನಿಲ್ದಾಣಕ್ಕೆ ಗುರುವಾರ ಭೇಟಿ ನೀಡಿದ ಸಂಸದ ಡಾ.ಕೆ.ಸುಧಾಕರ್‌, ಕೇಂದ್ರ ಸರ್ಕಾರದ ಅಮೃತ್‌ ಭಾರತ್‌ ಯೋಜನೆಯಡಿ ₹25.42 ಕೋಟಿ ವೆಚ್ಚದಲ್ಲಿ ಪುನರ್‌ ಅಭಿವೃದ್ದಿಪಡಿಸಲಾಗುತ್ತಿರುವ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

ದೊಡ್ಡಬಳ್ಳಾಪುರ: ಇಲ್ಲಿನ ರೈಲು ನಿಲ್ದಾಣಕ್ಕೆ ಗುರುವಾರ ಭೇಟಿ ನೀಡಿದ ಸಂಸದ ಡಾ.ಕೆ.ಸುಧಾಕರ್‌, ಕೇಂದ್ರ ಸರ್ಕಾರದ ಅಮೃತ್‌ ಭಾರತ್‌ ಯೋಜನೆಯಡಿ ₹25.42 ಕೋಟಿ ವೆಚ್ಚದಲ್ಲಿ ಪುನರ್‌ ಅಭಿವೃದ್ದಿಪಡಿಸಲಾಗುತ್ತಿರುವ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಅಮೃತ್ ಭಾರತ್ ಸ್ಟೇಷನ್ ಯೋಜನೆ-2 ಅಡಿಯಲ್ಲಿ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣ ನವೀಕರಣ ಮತ್ತು ಪುನರಾಭಿವೃದ್ಧಿಗೊಳ್ಳುತ್ತಿದೆ. ಯೋಜನೆಯನ್ನು ಸಕಾಲದಲ್ಲಿ ಮತ್ತು ಉತ್ತಮ ಗುಣಮಟ್ಟದಲ್ಲಿ ಕಾರ್ಯಗತಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಪ್ರತಿನಿಧಿಗಳ ನಡುವಿನ ಸಮನ್ವಯದ ಪ್ರಯತ್ನವನ್ನು ಉಲ್ಲೇಖಿಸುವುದು ಅಗತ್ಯ ಎಂದರು.

ಮೂಲಸೌಕರ್ಯ ಉನ್ನತೀಕರಣ:

ಅಮೃತ್ ಭಾರತ್ ಯೋಜನೆಯು ನಮ್ಮ ದೇಶದ ರೈಲ್ವೆ ಮೂಲಸೌಕರ್ಯವನ್ನು ಉನ್ನತೀಕರಿಸಲು ಕೇಂದ್ರ ಸರ್ಕಾರವು ಇಟ್ಟಿರುವ ಒಂದು ದೂರದೃಷ್ಟಿಯ ಹೆಜ್ಜೆಯಾಗಿದೆ. ದೊಡ್ಡಬಳ್ಳಾಪುರದ ಜನರಿಗೆ ಸುರಕ್ಷಿತ, ಅನುಕೂಲಕರ ಮತ್ತು ನಮ್ಮ ಇಡೀ ಕ್ಷೇತ್ರದ ಪ್ರಗತಿಯ ಸಂಕೇತವಾಗಿರುವ ಅತ್ಯಾಧುನಿಕ ರೈಲ್ವೆ ನಿಲ್ದಾಣವನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳುವುದಾಗಿದೆ. ಈ ಯೋಜನೆಯು ಬೆಂಗಳೂರು ಗ್ರಾಮಾಂತರ ವಲಯದಾದ್ಯಂತ ಅಭಿವೃದ್ಧಿಯನ್ನು ಉತ್ತೇಜಿಸಲು ಮತ್ತು ಸಾರ್ವಜನಿಕ ಸೇವೆಗಳನ್ನು ಸುಧಾರಿಸಲು ನಡೆಯುತ್ತಿರುವ ಪ್ರಯತ್ನಗಳ ಪ್ರಮುಖ ಭಾಗವಾಗಿದೆ ಎಂದರು.

ಅತ್ಯಾಧುನಿಕ ಸೌಲಭ್ಯ:

ಈ ಯೋಜನೆಯಲ್ಲಿ ಆಧುನಿಕ ತಂತ್ರಜ್ಞಾನದ ಹೊಸ ನಿಲ್ದಾಣ ಕಟ್ಟಡ ನಿರ್ಮಾಣ, ಪ್ರವೇಶ ಮತ್ತು ನಿರ್ಗಮನ ಕಮಾನು, ಶೌಚಾಲಯಗಳು, ಪ್ಲಾಟ್‌ಫಾರಂ ಶೆಲ್ಟರ್‌ ವಿಸ್ತರಣೆ, ಲಿಫ್ಟ್ ಮತ್ತು ಎಸ್ಕಲೇಟರ್‌, ವಿದ್ಯುತ್ ಮಾರ್ಗ ನವೀಕರಣ, ಮಾದರಿ ವೈದ್ಯಕೀಯ ಕೊಠಡಿಗಳು ಕಲ್ಪಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಕೇಂದ್ರ ರೇಷ್ಮೆ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ನಗರಸಭೆ ಅಧ್ಯಕ್ಷೆ ಸುಮಿತ್ರ, ಉಪಾಧ್ಯಕ್ಷ ಮಲ್ಲೇಶ್‌, ಸ್ಥಾಯಿ ಸಮಿತಿ ಅಧ್ಯಕ್ಷ ರವಿಕುಮಾರ್‌ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.

ಬಾಕ್ಸ್‌.........................

ಅಭಿವೃದ್ಧಿಗೊಳ್ಳುತ್ತಿರುವ ರೈಲ್ವೆ ನಿಲ್ದಾಣದ ವಿಶೇಷತೆ:

ಅಮೃತ ಭಾರತ್ ನಿಲ್ದಾಣ ಯೋಜನೆ'''''''' ಅಡಿಯಲ್ಲಿ ಕೈಗೊಳ್ಳಲಾಗುತ್ತಿರುವ ನಿಲ್ದಾಣದ ಸಮಗ್ರ ಪುನರಾಭಿವೃದ್ದಿಗಾಗಿ 25.42 ಕೋಟಿ ಅನುದಾನ ಬಿಡುಗಡೆ ಆಗಿದ್ದು, ನಿಲ್ದಾಣವನ್ನು ವಿಶ್ವದರ್ಜೆಯ ಮೂಲಸೌಕರ್ಯ ಮತ್ತು ಪ್ರಯಾಣಿಕರ ಸೌಲಭ್ಯಗಳೊಂದಿಗೆ ಆಧುನೀಕರಿಸಲಿದೆ. ಪುನರಾಭಿವೃದ್ಧಿ ಯೋಜನೆಯು ಹಲವಾರು ಪ್ರಮುಖ ನವೀಕರಣಗಳನ್ನು ಒಳಗೊಂಡಿದ್ದು, ಎಲ್ಲಾ ಪ್ರಯಾಣಿಕರ ಅನುಕೂಲಕ್ಕಾಗಿ ಲಿಫ್ಟ್ ಮತ್ತು ಎಸ್ಕಲೇಟರ್ ಸೌಲಭ್ಯಗಳೊಂದಿಗೆ 12 ಮೀಟರ್ ಅಗಲದ ಹೊಸ ಪಾದಚಾರಿ ಮೇಲ್ಸೇತುವೆ ನಿರ್ಮಾಣಗೊಳ್ಳಲಿದೆ.

ಹೊಸ ಎರಡನೇ ಪ್ರವೇಶ ದ್ವಾರದ ಕಟ್ಟಡ ಮತ್ತು ನಿಲ್ದಾಣದ ಎರಡೂ ಬದಿಗಳಲ್ಲಿ ಸುಸಜ್ಜಿತ ದ್ವಿಚಕ್ರ ಮತ್ತು ನಾಲ್ಕು-ಚಕ್ರ ವಾಹನಗಳ ಪಾರ್ಕಿಂಗ್ ಪ್ರದೇಶಗಳು. ಆಧುನಿಕ ಪ್ರಯಾಣಿಕರ ಸೌಲಭ್ಯಗಳಾದ ಹೊಸ ಪ್ಲಾಟ್‌ಫಾರ್ಮ್ ಶೆಲ್ಟರ್‌ಗಳು, ದಿವ್ಯಾಂಗರ ಸೌಲಭ್ಯಗಳನ್ನು ಒಳಗೊಂಡ ಆಧುನಿಕ ''''''''ಪಾವತಿಸಿ ಮತ್ತು ಬಳಸಿ'''''''' ಶೌಚಾಲಯಗಳು, ಮತ್ತು ಪಾದಚಾರಿ ಮಾರ್ಗ ಸುಧಾರಿತ ಮುಖ್ಯ ಸಂಪರ್ಕ ರಸ್ತೆಗಳನ್ನು ಒಳಗೊಂಡಿರುತ್ತದೆ.

ಫೋಟೋ-

17ಕೆಡಿಬಿಪಿ2- ದೊಡ್ಡಬಳ್ಳಾಪುರ ರೈಲು ನಿಲ್ದಾಣಕ್ಕೆ ಗುರುವಾರ ಭೇಟಿ ನೀಡಿದ ಸಂಸದ ಡಾ.ಕೆ.ಸುಧಾಕರ್‌ ಅಮೃತ ಭಾರತ್‌ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು.

17ಕೆಡಿಬಿಪಿ3- ಅಮೃತ ಭಾರತ್‌ ಯೋಜನೆಯಡಿ ಅಭಿವೃದ್ದಿಪಡಿಸಲಾಗುತ್ತಿರುವ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಯೋಜನಾ ನಕ್ಷೆಯನ್ನು ಸಂಸದ ಡಾ.ಕೆ.ಸುಧಾಕರ್‌ ವೀಕ್ಷಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.

PREV

Latest Stories

ಸಂಕಷ್ಟಗಳಿವೆ ಆದರೆ ಸೇವಾ ಸಂತೃಪ್ತಿ ನಮಗಿದೆ: ದಶರಥ ಸಾವೂರ
ರೈತರನ್ನು ಸ್ಮರಿಸುವ, ನೋವಿಗೆ ಸ್ಪಂದಿಸುವ ಕಾರ್ಯವಾಗಲಿ
ಮಳೆಯ ರಭಸಕ್ಕೆ ಮನೆಗಳಿಗೆ ನುಗ್ಗಿದ ನೀರು: ಪರಿಶೀಲನೆ