ದೊಡ್ಡಣಗುಡ್ಡೆ: ಪಂಚಮುಖಿ ಗಾಯತ್ರಿ ದೇವಿಯ ದೃಢಕಲಶೋತ್ಸವ ಸಂಪನ್ನ

KannadaprabhaNewsNetwork |  
Published : Jul 13, 2025, 01:18 AM IST
12ಕಲಶ | Kannada Prabha

ಸಾರಾಂಶ

ಪ್ರಾತಃಕಾಲ ತ್ರಿನಾಳಿಕೇರ ಗಣಯಾಗ, ಪ್ರಧಾನಯಾಗ ಹಾಗೂ ಒದಗಿದ ಸುಮುಹೂರ್ತದಲ್ಲಿ ಬ್ರಹ್ಮಕಲಶಾಭಿಷೇಕವನ್ನು ವೇದಮೂರ್ತಿ ಸರ್ವೇಶ ತಂತ್ರಿ ಸಂಪನ್ನಗೊಳಿಸಿದರು. ನಂತರ ನ್ಯಾಸ ಪೂಜೆ, ಬ್ರಾಹ್ಮಣ ಸುವಾಸಿನಿ ಆರಾಧನೆ, ಪ್ರಸನ್ನ ಪೂಜೆ, ಮಹಾಪೂಜೆ ಹಾಗೂ ಮಹಾ ಅನ್ನಸಂತರ್ಪಣೆ ನೆರವೇರಿತು.

ಕನ್ನಡಪ್ರಭ ವಾರ್ತೆ ಉಡುಪಿಇಲ್ಲಿನ ದೊಡ್ಡಣ್ಣಗುಡ್ಡೆಯ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಗಾಯತ್ರಿ ಧ್ಯಾನಪೀಠದಲ್ಲಿರುವ ಶ್ರೀ ಪಂಚಮುಖಿ ಗಾಯತ್ರಿ ದೇವಿಯ ಪ್ರತಿಷ್ಠಾ ದೃಢಕಲಶ ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಿತು.

ದೃಢ ಕಲಶೋತ್ಸವದ ಪೂರ್ವಭಾವಿ ಧಾರ್ಮಿಕ ಕಾರ್ಯಕ್ರಮವಾಗಿ ವಾಸ್ತು, ರಾಕ್ಷೋಗ್ನಾದಿ ಪ್ರಕ್ರಿಯೆಗಳು, ಸಪ್ತಶುದ್ಧಿ, ಪ್ರಾಸಾದ ಶುದ್ಧಿ, ಕಲಶಾದಿವಾಸ ಪ್ರಕ್ರಿಯೆಗಳು ನಡೆಯಿತು.

ಶುಕ್ರವಾರ ಪ್ರಾತಃಕಾಲ ತ್ರಿನಾಳಿಕೇರ ಗಣಯಾಗ, ಪ್ರಧಾನಯಾಗ ಹಾಗೂ ಒದಗಿದ ಸುಮುಹೂರ್ತದಲ್ಲಿ ಬ್ರಹ್ಮಕಲಶಾಭಿಷೇಕವನ್ನು ವೇದಮೂರ್ತಿ ಸರ್ವೇಶ ತಂತ್ರಿ ಸಂಪನ್ನಗೊಳಿಸಿದರು. ನಂತರ ನ್ಯಾಸ ಪೂಜೆ, ಬ್ರಾಹ್ಮಣ ಸುವಾಸಿನಿ ಆರಾಧನೆ, ಪ್ರಸನ್ನ ಪೂಜೆ, ಮಹಾಪೂಜೆ ಹಾಗೂ ಮಹಾ ಅನ್ನಸಂತರ್ಪಣೆ ನೆರವೇರಿತು.

ಪ್ರಸನ್ನಾಕ್ಷಿಯ ಸನ್ನಿಧಾನದಲ್ಲಿ ನವಕಕಲಶ ಪ್ರಧಾನ ಹೋಮ, ಕಲಶ ಅಭಿಷೇಕವನ್ನು ಗಣೇಶ್ ಸರಳಾಯ ನೆರವೇರಿಸಿದರು. ವೇದಮೂರ್ತಿ ವಿಖ್ಯಾತ್ ಭಟ್ ಧಾರ್ಮಿಕ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ