ಕನ್ನಡಪ್ರಭ ವಾರ್ತೆ ಕಲಬುರಗಿ
ಗಣರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರ ಧ್ವಜಾರೋಹಣ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷಕ್ಕೆ 135 ವರ್ಷದ ಇತಿಹಾಸವಿದೆ. ಅವರು ಬರೋದ್ರಿಂದ ಪ್ಲಸ್, ಮೈನಸ್ ಏನು ಇಲ್ಲ. ಹಿರಿಯ ನಾಯಕರು ಅಂತ ಸೇರಿಸಿಕೊಂಡಿದ್ದೆವು. ಆದ್ರೆ ಅವರು ಸೋತ್ರು, ಆದ್ರು ನಾವು ಗೌರವ ಕೊಟ್ಟಿದ್ದೆವು, ಶೆಟ್ಟರ್ ಸೇರ್ಪಡೆ ಹಿಂದೆ ಐಟಿ, ಇಡಿ ಇರಬಹುದು ಎಂದು ಖರ್ಗೆ ಶಂಕಿಸಿದರು.
ಕಾಂಗ್ರೆಸ್ ತಮಗೆ ಸೂಕ್ತ ಸ್ಥಾನಮಾನ ಮತ್ತು ಗೌರವ ನೀಡಿದೆ. ಆದರೂ, ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ತಾವು ವಾಪಸ್ ಬಿಜೆಪಿ ಸೇರ್ಪಡೆಗೊಂಡಿರುವುದಾಗಿ ಶೆಟ್ಟರ್ ಹೇಳಿದ್ದಾರೆ. ಇದು ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ ಎಂಬುದನ್ನು ಸಾಬೀತುಪಡಿಸಿದೆ ಎಂದರು.ಶೆಟ್ಟರ್ ಬಿಜೆಪಿಗೆ ಸೇರ್ಪಡೆ ಆಗುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲಕ್ಷ್ಮಣ ಸವದಿಯವರನ್ನು ಕರೆಯಿಸಿಕೊಂಡು ಚರ್ಚಿಸಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್, ಅದೊಂದು ತೀರಾ ಸೌಹಾರ್ದ ಭೇಟಿಯಷ್ಟೆ. ಪಕ್ಷದ ರಾಜ್ಯಾಧ್ಯಕ್ಷರು ಯಾರನ್ನು ಯಾವಾಗ ಬೇಕಾದರೂ ಕರೆಯಿಸಿಕೊಂಡು ಮಾತನಾಡುತ್ತಾರೆ. ಮೂರು ದಿನಗಳ ಹಿಂದೆ ತಮ್ಮನ್ನೂ ಕರೆಸಿದ್ದರು ಎಂದರು.
ಲಕ್ಷ್ಮಣ ಸವದಿ ಮಿನಿಸ್ಟರ್ ಆಗುತ್ತಾರೋ ಇಲ್ಲವೋ ಎಂಬುದನ್ನು ಖಾತ್ರಿಪಡಿಸಲು ನಾನು ಈ ರಾಜ್ಯದ ಮುಖ್ಯಮಂತ್ರಿಯೂ ಅಲ್ಲ. ಕೆಪಿಸಿಸಿ ಅಧ್ಯಕ್ಷನೂ ಅಲ್ಲ. ಹೀಗೆಲ್ಲಾ ನನ್ನ ಚೌಕಟ್ಟು ಮೀರಿ ಪ್ರಶ್ನಿಸಿದರೆ ಹೇಗೆ ಎಂದು ಪ್ರಶ್ನಿಸಿದರು.
ಬಿಜೆಪಿಗೆ ಸ್ಟಾರ್ ಪ್ರಚಾರಕರು ಯಾರು? ಐಟಿ, ಇಡಿ, ಸಿಬಿಐ ಇದೇ ಸಂಸ್ಥೆಗಳೇ ಅವರ ಸ್ಟಾರ್ ಪ್ರಚಾರಕರು, ಇದನ್ನ ತೆಗೆದುಬಿಡಿ ಇವರೆಲ್ಲಾ ಸೋತು ಬಿಡುತ್ತಾರೆಂದರು.