
ಕಾರವಾರ: ಕರಾವಳಿ ಉತ್ಸವದ ಅಂಗವಾಗಿ ಕಾರವಾರದ ಮಾಲಾದೇವಿ ಮೈದಾನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಇಲಾಖೆ ವತಿಯಿಂದ ಶನಿವಾರ ಆಯೋಜಿಸಲಾಗಿದ್ದ ಶ್ವಾನ ಪ್ರದರ್ಶನವನ್ನು ಜಿಲ್ಲಾ ಪಂಚಾಯತ್ ಸಿಇಒ ಡಾ. ದಿಲೀಷ್ ಸಸಿ ಪ್ರದರ್ಶನ ಆವರಣದ ರಿಬ್ಬನ್ ತೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪೊಲೀಸ್ ಇಲಾಖೆಯ ಶೈನಿ, ಮಾರ್ವೆಲ್ ಮತ್ತು ಅಖಿರ ಹೆಸರಿನ ಶ್ವಾನಗಳು ಶಿಸ್ತಿನ ಆದೇಶಗಳನ್ನು ಪ್ರದರ್ಶಿಸಿದರೆ ಮತ್ತು ಕೈಗಾರಿಕಾ ಭದ್ರತಾ ಪಡೆಯ ಐರಾ, ಅಭಯ್ ಮತ್ತು ಭೈರವ ಶ್ವಾನಗಳು ರೋಮಾಂಚಕ ಸಾಹಸ ಚಟುವಟಿಕೆಗಳನ್ನು ಪ್ರದರ್ಶಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾದವು, ಈ ಎರಡೂ ಇಲಾಖೆಗಳ ಶ್ವಾನಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ₹10,000 ನಗದು ಬಹುಮಾನ ನೀಡಿ, ಅಭಿನಂದಿಸಿದರು.
ಬೆಂಗಳೂರಿನಿಂದ ಆಗಮಿಸಿದ್ದ ಕುಮಾರ್ ಅವರ 2 ಶ್ವಾನಗಳು ವಿವಿಧ ಆಕರ್ಷಕ ಬುದ್ದಿವಂತ ಚಟುವಟಿಕೆಗಳನ್ನು ಪ್ರದರ್ಶಿಸುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾದವು. ಪ್ರದರ್ಶನದಲ್ಲಿ ಜಿಲ್ಲೆಯ ಮತ್ತು ಹೊರ ಜಿಲ್ಲೆಯ ಶ್ವಾನಗಳು ಭಾಗವಹಿಸಿದ್ದು, ಚಾಂಪಿಯನ್ ವಿಭಾಗದಲ್ಲಿ ವಿಜೇತವಾದ ಶ್ವಾನಗಳಿಗೆ ಮತ್ತು ಪ್ರತಿ ವಿಭಾಗದಲ್ಲೂ ವಿಜೇತವಾದ ಶ್ವಾನಗಳಿಗೆ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ನಾಯಿಗಳನ್ನು ಆರೋಗ್ಯಕರವಾಗಿ ಪೋಷಣೆ ಮಾಡುವ ಬಗ್ಗೆ, ಅವುಗಳಿಗೆ ಅಗತ್ಯ ಲಸಿಕೆಗಳನ್ನು ನೀಡುವ ಬಗ್ಗೆ ಪಶು ವೈದ್ಯರು ಮಾಹಿತಿ ನೀಡಿದರು. ದೇಶಿ ತಳಿಯ ನಾಯಿ ಮರಿಗಳನ್ನು ಉಚಿತವಾಗಿ ದತ್ತು ನೀಡಲು ಕಾರ್ಯಕ್ರಮದಲ್ಲಿ ಸೌಲಭ್ಯ ಕಲ್ಪಿಸಲಾಗಿತ್ತು.
ಶ್ವಾನ ಪ್ರದರ್ಶನಕ್ಕಾಗಿ 25 ತಳಿಗಳ ಒಟ್ಟು 118 ಶ್ವಾನಗಳನ್ನು ನೋಂದಣಿ ಮಾಡಲಾಗಿದ್ದು, 21 ತಳಿಗಳ 52 ನಾಯಿಗಳು ಭಾಗವಹಿಸಿದ್ದು, ಶ್ವಾನ ಮರಿಗಳ ವಿಭಾಗದಲ್ಲಿ 11 ಶ್ವಾನಗಳು ಭಾಗವಹಿಸಿದ್ದವು.
ಶ್ವಾನ ತಳಿಗಳ ಅಭಿವೃದ್ಧಿಗೆ ಉತ್ತೇಜನ ನೀಡುವುದು ಮತ್ತು ಮನುಷ್ಯನ ಮೊದಲ ಮಿತ್ರನಾಗಿರುವ ಶ್ವಾನಗಳ ಮಹತ್ವ ಸಾರುವುದು ಈ ಪ್ರದರ್ಶನದ ಉದ್ದೇಶವಾಗಿತ್ತು. ಶ್ವಾನಗಳ ತಳಿಯ ವಿಶಿಷ್ಟ ಗುಣಲಕ್ಷಣ ಮತ್ತು ಅವುಗಳ ನಡವಳಿಕೆಯ ಆಧಾರದ ಮೇಲೆ ವಿಜೇತರನ್ನು ನಿರ್ಣಯಿಸಲಾಗಿದೆ ಎಂದು ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಪಶುವೈದ್ಯಾಧಿಕಾರಿ.