ಕನಕದ ದಾಸರಾಗುವುದು ಬೇಡ, ಕನಕದಾಸರಾಗೋಣ: ಪ್ರಾಂಶುಪಾಲ ಡಾ.ಶ್ರೀನಿವಾಸ ಸಲಹೆ

KannadaprabhaNewsNetwork |  
Published : Nov 09, 2025, 01:15 AM IST
್ಿ್ಿ್ಿ | Kannada Prabha

ಸಾರಾಂಶ

ಶ್ರೇಷ್ಠ ವ್ಯಕ್ತಿಯ ಸಿದ್ಧಾಂತವನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಬದುಕು ಸರಳ ಮತ್ತು ಸುಖಕರವಾಗಿರುತ್ತದೆ.

ಕನ್ನಡಪ್ರಭ ವಾರ್ತೆ, ತುಮಕೂರುಹಣ, ಅಂತಸ್ತಿನ ಬೆನ್ನಟ್ಟಿರುವ ನಾವು ಮೌಲ್ಯಾಧಾರಿತ ಜೀವನ ಮರೆತಿದ್ದೇವೆ. ಕನಕದ ದಾಸರಾಗುವ ಬದಲು ಕನಕದಾಸರಾಗೋಣ ಎಂದು ವಿಶ್ವವಿದ್ಯಾನಿಲಯದ ವಿಜ್ಞಾನಕಾಲೇಜಿನ ಪ್ರಾಂಶುಪಾಲರಾದ ಡಾ.ಶ್ರೀನಿವಾಸ ಎಸ್. ಹೇಳಿದರು.ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ಕನಕದಾಸ ಜಯಂತಿ ಸಂದರ್ಭದಲ್ಲಿ ಮಾತನಾಡಿದರುಕನಕದಾಸರ ವಿಚಾರಧಾರೆಗಳು ಮೌಲಿಕ. ಅವರ ಕೀರ್ತನೆಗಳ ಉದ್ದೇಶ ಸಮಾಜದ ಅಂಕುಡೊಂಕುಗಳನ್ನು ತಿದ್ದುವುದಾಗಿದೆ ಎಂದರು.ಸಂಪನ್ಮೂಲ ವ್ಯಕ್ತಿಗಳಾದ ಕನ್ನಡ ವಿಭಾಗದ ಸಹಪ್ರಾಧ್ಯಾಪಕ ಡಾ.ನಾಗಭೂಷಣ ಬಗ್ಗನಡು ಮಾತನಾಡಿ, ಒಬ್ಬ ಸಾಮಾನ್ಯ ವ್ಯಕ್ತಿಯನ್ನು ಇಂದಿಗೂ ನೆನಪಿಸಿಕೊಳ್ಳಲು ಅವರು ಸಮಾಜಕ್ಕೆ ನೀಡಿದ ಸಂದೇಶಗಳೇ ಕಾರಣ. ಕನಕದಾಸರ ಕೀರ್ತನೆಗಳು ಸಾಮಾಜಿಕ ಶ್ರೇಣಿಕರಣವನ್ನು ದೇವರ ಮೂಲಕ ತಿದ್ದಿಸುವುದಾಗಿದೆ. ಇಲ್ಲಿ ಯಾರೂ ಶ್ರೇಷ್ಠರಲ್ಲ, ಕನಿಷ್ಠರು ಅಲ್ಲ. ಅಹಂ ಇಲ್ಲದ ಸರಳ ಜೀವನ ಒಳ್ಳೆಯದು ಎಂಬುದು ದಾಸರ ಒಳನೋಟವಾಗಿದೆ ಎಂದರು.ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ. ದ್ರಾಕ್ಷಾಯಿಣಿ ಮಾತನಾಡಿ, ಶ್ರೇಷ್ಠ ವ್ಯಕ್ತಿಯ ಸಿದ್ಧಾಂತವನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಬದುಕು ಸರಳ ಮತ್ತು ಸುಖಕರವಾಗಿರುತ್ತದೆ ಎಂದರು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಸಂಯೋಜಕ ಡಾ. ಎ.ಎಂ. ಮಂಜುನಾಥ, ಡಾ.ಚೇತನ್ ಪ್ರತಾಪ್ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ