ಕನ್ನಡಪ್ರಭ ವಾರ್ತೆ ಕಾರವಾರ
ಸೋಮವಾರ ಕಾರವಾರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಗ್ರಾಹಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಯುವಪೀಳಿಗೆ ಆನ್ಲೈನ್ನಲ್ಲಿ ವಸ್ತುಗಳನ್ನು ಖರೀದಿಸುವಾಗ ಹೆಚ್ಚಾಗಿ ಮೋಸ ಮತ್ತು ವಂಚನೆಗೆ ಒಳಗಾಗುವ ಸಾಧ್ಯತೆ ಇದೆ. ಆದ್ದರಿಂದ ವಸ್ತುಗಳನ್ನು ಖರೀದಿಸುವ ಮೊದಲು ಅದರ ಮೌಲ್ಯ, ಗುಣಮಟ್ಟ, ಬೆಲೆ ಮತ್ತು ಸೇವೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕು. ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯ ವಸ್ತುಗಳನ್ನು ಮಾತ್ರ ಖರೀದಿಸಿ. ವಿದ್ಯಾರ್ಥಿಗಳು ಮೊಬೈಲ್ನಲ್ಲಿ ಅನಾವಶ್ಯಕವಾಗಿ ರೀಲ್ಸ್ ವೀಕ್ಷಣೆ ಮಾಡುವುದನ್ನು ಕಡಿಮೆ ಮಾಡಿ ಜ್ಞಾನವರ್ಧಕ ವಿಡಿಯೋಗಳನ್ನು ವೀಕ್ಷಿಸುವ ಮೂಲಕ ಹಾಗೂ ಪುಸ್ತಕಗಳನ್ನು ಓದುವ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳುವುದರಿಂದ ಉತ್ತಮ ಗ್ರಾಹಕರಾಗಲು ಸಾಧ್ಯ ಎಂದು ಹೇಳಿದರು.ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಜಪ್ಪ ಗೌಳಿ, ಬ್ಯಾಂಕ್ ದೇಶದ ಆರ್ಥಿಕ ಅಭಿವೃದ್ಧಿಗೆ ಸಹಕಾರಿ, ಸರ್ಕಾರ ವಿವಿಧ ಯೋಜನೆಗಳನ್ನು ಬ್ಯಾಂಕ್ಗಳ ಮೂಲಕ ತಮಗೆ ಒದಗಿಸಲಾಗುತ್ತಿದೆ. ಬ್ಯಾಂಕ್ನಿಂದ ಕರೆ ಮಾಡುತ್ತಿರುವುದು ಎಂದು ವಂಚಕರು ಹೇಳಿ, ಡಿಜಿಟಲ್ ಆರೆಸ್ಟ್, ಒಟಿಪಿ, ಕೆವೈಸಿ, ಯುಪಿಐ, ವಹಿವಾಟು ಸಂಬಂಧಿಸಿದ ಕರೆಗಳು ಬಂದಲ್ಲಿ ಕೂಡಲೇ ಜಾಗೃತರಾಗಬೇಕು. ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕ ಮಾಹಿತಿಗಳನ್ನು ಹಂಚಿಕೊಳ್ಳಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಎಪಿಕೆ ಲಿಂಕ್ಗಳ ತೆರೆಯಬಾರದು. ಪಬ್ಲಿಕ್ ವೈಪೈ, ಚಾರ್ಜರ್ ಬಳಸಬಾರದು. ಬ್ಯಾಂಕ್ ಖಾತೆ ಪ್ರತಿಯೊಬ್ಬರ ಭವಿಷ್ಯದ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು.
ಗ್ರಾಹಕರ ಹಿತ ಕಾಯುವ ಉದ್ದೇಶದಿಂದಲೇ ಆಯೋಗ ಕಾರ್ಯನಿರ್ವಹಿಸುತ್ತಿದೆ ಎಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಮಾರುತಿ ವಡ್ಡರ ತಿಳಿಸಿದರು.
ಗ್ರಾಹಕರ ಸಹಾಯವಾಣಿ ಸಂಖ್ಯೆಗಳ ಫಲಕ ಅನಾವರಣಗೊಳಿಸಲಾಯಿತು.ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ನೈನಾ ಅಶೋಕ ಕಾಮಟೆ, ಕಾನೂನು ಮಾಪನ ಸಹಾಯಕ ನಿಯಂತ್ರಕ ದೇವರಾಜ ಇದ್ದರು. ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಂಜುನಾಥ್ ರೇವಣ್ಕಕರ್ ಸ್ವಾಗತಿಸಿದರು. ಹಾಲಪ್ಪ ಜೋಗಣ್ಣ ನಿರೂಪಿಸಿದರು. ವಿಜಯ ನಾಯಕ ವಂದಿಸಿದರು.