- ಹೊನ್ನಾಳಿಯಲ್ಲಿ ಬಾಲರಾಜ್ ಘಾಟ್ ಪ್ರದೇಶ, ಇತರೆಡೆ ಮುಳುಗಡೆ ಸಂತ್ರಸ್ತರೊಂದಿಗೆ ಚರ್ಚೆ ನಡೆಸಿದ ಮಾಜಿ ಸಚಿವ - - -
ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಜನರ ಸಂಕಷ್ಟ ಪರಿಸ್ಥಿತಿಗಳಲ್ಲಿ ಅವರೊಂದಿಗೆ ಮಾನವೀಯತೆಯಿಂದ ಸ್ಪಂದಿಸಬೇಕು. ಯಾವುದೇ ಕಾರಣಕ್ಕೂ ಅಧಿಕಾರದ ದರ್ಪ ತೋರಿಸಬಾರದು. ಏಕೆಂದರೆ, ಇಡೀ ಆಡಳಿತ ವ್ಯವಸ್ಥೆಗಳು ಜನರು ಪಾವತಿಸುವ ತೆರಿಗೆ ಹಣದಲ್ಲಿ ನಡೆಯುತ್ತದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಅತಿವೃಷ್ಟಿಯಿಂದ ತುಂಗಭದ್ರಾ ನದಿ ನೀರಿನಮಟ್ಟದಲ್ಲಿ ಏರಿಕೆಯಾಗಿ ಪಟ್ಟಣದ ಬಾಲರಾಜ್ ಘಾಟ್ ಪ್ರದೇಶದ ಜನವಸತಿ ಪ್ರದೇಶಗಳ ಅತಿ ಸಮೀಪಕ್ಕೆ ನದಿನೀರು ನುಗ್ಗಿದೆ. ಈ ಹಿನ್ನೆಲೆ ಸೋಮವಾರ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಸ್ಥಳಕ್ಕೆ ಭೇಟಿ ನೀಡಿ, ಅವಲೋಕನ ನಡೆಸಿ, ಸ್ಥಳೀಯರೊಂದಿಗೆ ಅಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.ಮನೆಗಳ ಕೆಡವುವ ಬೆದರಿಕೆ:
ಇದರಿಂದ ಅಸಮಾಧಾನಗೊಂಡ ರೇಣುಕಾಚಾರ್ಯ ಅವರು, ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದರು. ಇಲ್ಲಿಯ ಸ್ಥಳಯರಿಗೆ ಕೂಡಲೇ ಮೂಲಸೌಕರ್ಯಗಳನ್ನು ಒದಗಿಸಿಕೊಡಬೇಕು. ನದಿನೀರು ಮನೆಯೊಳಗೆ ನುಗ್ಗುವಂತಿದ್ದರೆ ಕುಟುಂಬಗಳನ್ನು ಊಟ, ವಸತಿ ಸೌಲಭ್ಯಗಳೊಂದಿಗೆ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಬೇಕು. ಆದರೆ ಪರ್ಯಾಯ ವ್ಯವಸ್ಥೆಗಳನ್ನು ಮಾಡದೇ ಕುಟುಂಬಗಳನ್ನು ಸ್ಥಳಾಂತರಿಸುವುದು ಸಮಂಜಸವಲ್ಲ. ಇಲ್ಲಿನ ಮನೆಗಳನ್ನು ಕೆಡುವಲು ತಾನು ಬಿಡುವುದಿಲ್ಲ ಎಂದು ಅಧಿಕಾರಿಗಳಿಗೆ ದೂರವಾಣಿಯಲ್ಲಿ ಖಾರವಾಗಿ ನುಡಿದರು.
- - -
* ಅಭಿವೃದ್ಧಿಗಳು ಬಿಜೆಪಿ ಸರ್ಕಾರದ ಕಾಲಕ್ಕೆ ಸೀಮಿತ
ಹೊನ್ನಾಳಿ ಪಟ್ಟಣಕ್ಕೆ ಕುಡಿಯುವ ನೀರಿಗಾಗಿ ನೀರು ಸಂಗ್ರಹ ಟ್ಯಾಂಕ್ಗಳು ಸೇರಿದಂತೆ ಪೈಪ್ ಲೈನ್ ಮುಂತಾದ ಕಾಮಗಾರಿಗಳಿಗಾಗಿ ಒಟ್ಟು ₹37 ಕೋಟಿ ಬಿಜೆಪಿ ಸರ್ಕಾರದಿಂದ ಈ ಹಿಂದೆ ಅನುದಾನ ಮಂಜೂರು ಮಾಡಿಸಲಾಗಿತ್ತು, ಇದೇ ರೀತಿ ನ್ಯಾಮತಿ ತಾಲೂಕಿಗೆ ₹44 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿಗಾಗಿ ಹಾಗೂ ₹30 ಕೋಟಿ ವೆಚ್ಚದಲ್ಲಿ ಯುಜಿಡಿ ಕಾಮಗಾರಿಗಳಿಗಾಗಿ ತಮ್ಮ ಸರ್ಕಾರದ ಅವಧಿಯಲ್ಲಿ ಅನುದಾನ ಬಿಡುಗಡೆ ಮಾಡಿಸಲಾಗಿತ್ತು, ನಗರೋತ್ಥಾನ ಯೋಜನೆಯಡಿ. ಹೊನ್ನಾಳಿಗೆ ₹11 ಕೋಟಿ ಹಾಗೂ ನ್ಯಾಮತಿ ತಾಲೂಕಿಗೆ ₹6 ಕೋಟಿ ಹೀಗೆ ತಮ್ಮ ಅಧಿಕಾರಾವಧಿಯಲ್ಲಿ ಸಾಕಷ್ಟು ಅನುದಾನ ಮಂಜೂರು ಮಾಡಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು ಎಂದು ವಿವರಿಸಿದರು.
-22ಎಚ್.ಎಲ್.ಐ1: