ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ತಾಲೂಕಿನ ಮಂಚನಬಲೆ ಗ್ರಾಮದ ಬಿಜಿಎಸ್ ವಿದ್ಯಾನಿಕೇತನ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಮಾತೃ ಭೋಜನ ಕಾರ್ಯಕ್ರಮ ಮತ್ತು ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿ, ಪಾಠ ಪ್ರವಚನಗಳು ಎಲ್ಲ ಶಾಲೆಗಳಲ್ಲಿಯೂ ಆಗುತ್ತದೆ. ಆದರೆ ಮಾತೃಭೋಜನದಂತಹ ಕಾರ್ಯಕ್ರಮಗಳು ನಮ್ಮ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಎಲ್ಲಾ ಶಾಲೆಗಳಲ್ಲಿ ಕಳೆದರೆಡು ದಶಕಗಳಿಂದ ನಡೆಯುತ್ತಿದೆ ಎಂದರು.
ಮಾತೃದೇವೂ ಭವ:ದೇವರು ಎಲ್ಲಕಡೆ ಇರಲು ಆಗುವುದಿಲ್ಲವೆಂದ ತಾಯಿಯನ್ನು ಸೃಷ್ಟಿಸಿ ಅಮ್ಮನ ರೂಪದಲ್ಲಿ ನಮ್ಮೆಲ್ಲರಿಗೂ ನೀಡಿದ್ದಾನೆ. ವೇದ-ಉಪನಿಷತ್, ಪುರಾಣ ಮತ್ತು ಗಾದೆಗಳಲ್ಲೂ ಸಹಾ ಮಾತೃದೇವೂ ಭವ ಎಂದೇ ಮೊದಲು ಹೇಳುವುದು. ತಾಯಿಗಿಂತ ದೇವರಿಲ್ಲ. ಆಕೆಯೇ ಒಂದು ದಿವ್ಯಶಕ್ತಿಯಾಗಿದ್ದಾಳೆ. ನಮ್ಮಲ್ಲಿ ಐಕ್ಯತೆ ಮೂಡಲು ತಾಯಿಯೇ ಕಾರಣಳಾಗಿದ್ದಾಳೆ. ಪ್ರತಿ ಮನೆಯಲ್ಲಿ ತಾಯಿಯ ಪಾತ್ರ ಬಹುಮುಖ್ಯ. ತಾಯಿಯು ಸರಿಯಾಗಿ ಗಮನ ಹರಿಸಿದರೆ ಮಕ್ಕಳು ಉತ್ತಮ ಪ್ರಜೆಗಳಾಗಿ ಬೆಳೆಯುತ್ತಾರೆ. ಮಕ್ಕಳಿಗೆ ಮಾತೃ ಪ್ರೇಮದ ಸವಿ ತುತ್ತು ಉಣಿಸುವ ಈ ಕಾರ್ಯಕ್ರಮ ತುಂಬಾ ಅಥಪೂರ್ಣ ಮತ್ತು ವೈಶಿಷ್ಟ್ಯವಾಗಿದೆ ಎಂದು ಹೇಳಿದರು.
ಬಿಜಿಎಸ್ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಡಾ.ಎನ್. ಶಿವರಾಮರೆಡ್ಡಿ ಮಾತನಾಡಿ, ಎಲ್ಲಾ ಶಾಲೆಗಳಂತೆ ನಮ್ಮ ಶಾಲೆ ಕೇವಲ ಅಂಕಪಟ್ಟಿ ವಿತರಿಸುವ ಸಂಸ್ಥೆಯಾಗಿಲ್ಲ. ನಾವು ಮಕ್ಕಳಿಗೆ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಹಾಗೂ ಸ್ವ-ಕೌಶಲದಿಂದ ಜೀವನವನ್ನು ಅತ್ಯಂತ ಸುಂದರವಾಗಿ ನಡೆಸುವ ವೈವಿಧ್ಯಮಯ ಚಟುವಟಿಕೆಗಳನ್ನು ಆಯೋಜಿಸಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡುತ್ತಿದ್ದೇವೆ. ಪ್ರತಿಯೊಬ್ಬ ಮಗುವಿನ ಜೀವನ ರೂಪಿಸುವಲ್ಲಿ, ಶೈಕ್ಷಣಿಕ ಅಭಿವೃದ್ಧಿಯಲ್ಲಿ ಬಿಜಿಎಸ್ ಶಾಲೆಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಹೇಳಿದರು.
ಸಾಮೂಹಿಕ ಭೋಜನ:
ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ಧೇಶಕ ರವಿಕುಮಾರ್, ಶಾಲೆಯ ಪ್ರಾಶುಪಾಲ ಜಿ.ವಿ.ಗಂಗಾಧರ್, ಮುಖ್ಯೋಪಾಧ್ಯಾಯ ಬೋರಯ್ಯ, ಶಿಕ್ಷಕ ಮುಖಂಡರಾದ ಸಿಎಸ್ಎನ್ ರಮೇಶ್, ರಾಜಣ್ಣ, ವೆಂಕಟನಾರಾಯಣ್,ಗಂಗಾಧರ್, ವೆಂಕಟೇಶ್, ಮಂಚನಬಲೆ ಶ್ರೀನಿವಾಸ್, ಸೊಣ್ಣೇಗೌಡ,ರಾಜೇಶ್, ಹರೀಶ್, ದಿಲೀಪ್, ಶಾಲೆಯ ಭೋಧಕ ಮತ್ತು ಭೋಧಕೇತರ ಸಿಬ್ಬಂಧಿ, ಶಾಲೆಯ ಹಿರಿಯ ವಿಧ್ಯಾರ್ಥಿಗಳು, ವಿಧ್ಯಾರ್ಥಿಗಳು, ಪೋಷಕರು ಮತ್ತಿತರರು ಇದ್ದರು.