ಕನ್ನಡಪ್ರಭ ವಾರ್ತೆ ಕಾಗವಾಡ
ತಾಲೂಕಿನ ಮೋಳೆ ಗ್ರಾಮದಲ್ಲಿ ಶ್ರೀ ಕೆ.ಪಿ.ಮಗೆಣ್ಣವರ ಶ್ರೀ ಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ನೂತನ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ನಾವು ಬದುಕಬೇಕು ಮತ್ತು ಇರರಿಗೂ ಬದುಕಲು ಅವಕಾಶ ಮಾಡಿ ಕೊಡಬೇಕೆಂಬ ಸದುದ್ದೇಶದಿಂದ ಮಾಜಿ ಶಾಸಕರಾದ ಕಲ್ಲಪ್ಪಣ್ಣ ಮಗೆಣ್ಣವರ ಅವರು ಹಲವಾರು ವರ್ಷಗಳ ಹಿಂದೆ ಪ್ರಾರಂಭಿಸಿದ ಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘವು, ಇಂದು ಹಲವಾರು ಶಾಖೆಗಳನ್ನು ಹೊಂದಿ ಹೆಮ್ಮರವಾಗಿ ಬೆಳೆದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಸ್ಥಾಪಕ ಅಧ್ಯಕ್ಷ ಕಲ್ಲಪ್ಪಣ್ಣ ಮಗೆಣ್ಣವರ ಮಾತನಾಡಿ, ಆರ್ಥಿಕವಾಗಿ ಸದೃಢ ಇದ್ದರವರು ಹಣವನ್ನು ತಂದು ಇಡಬೇಕು. ಕಷ್ಟದಲ್ಲಿದ್ದವರು ಸಾಲ ಪಡೆದು ತನ್ನ ತೊಂದರೆಯನ್ನು ನಿವಾರಿಸಿಕೊಳ್ಳಬೇಕೆಂಬ ಉದ್ದೇಶದಿಂದ ಈ ಸಸ್ಥೆಯನ್ನು ಪ್ರಾರಂಭಿಸಿದ್ದೇನೆ. ಎಲ್ಲರೂ ಪ್ರಾಮಾಣಿಕವಾಗಿ ಸಾಲ ಪಡೆದು ಸರಿಯಾಗಿ ಮರುಪಾವತಿ ಮಾಡುವಂತೆ ಕೋರಿದರು.ಮಾಜಿ ಶಾಸಕ ಮೋಹನರಾವ್ ಶಹಾ ಮುಖ್ಯ ಅತಿಥಿಗಳಾಗಿ ಮಾತನಾಡಿ, ಗ್ರಾಹಕರು ಮತ್ತು ಸಿಬ್ಬಂದಿ ವರ್ಗ ಒಂದೇ ಗಾಡಿಯ ಎರಡು ಚಕ್ರಗಳಿಂದ್ದಂತೆ. ಎಲ್ಲರು ಒಂದಾಗಿ ನಡೆದರೇ ಮಾತ್ರ ಸಂಸ್ಥೆಗಳು ಅಭಿವೃದ್ಧಿ ಹೊಂದಲು ಸಾಧ್ಯ. ಕಲ್ಲಪ್ಪಣ್ಣ ಮಗೆಣ್ಣವರ ಅವರು ಹತ್ತಾರು ವರ್ಷಗಳ ಹಿಂದೆ ಶ್ರೀ ಲಕ್ಷ್ಮೀ ಸೌಹಾರ್ದ ಸಂಘವನ್ನು ಪ್ರಾರಂಭಿಸಿದ್ದು, ಈಗ ಸುಮಾರು 30ಕ್ಕೂ ಅಧಿಕ ಶಾಖೆಗಳನ್ನು ಪ್ರಾಂಭಿಸಿ ನೂರಾರು ಯುವಕರಿಗೆ ನೌಕರಿಯನ್ನು ಕೊಟ್ಟಿದ್ದು, ಲಕ್ಷಾಂತರ ಜನರಿಗೆ ಆರ್ಥಿಕವಾಗಿ ಶಾಲ ನೀಡುವ ಮೂಲಕ ಸಹಾಯ ಮಾಡಿದ್ದಾರೆ. ಅವರ ಈ ಸಂಸ್ಥೆ ನೂರಾರು ಶಾಖೆಗಳನ್ನು ಹೊಂದಲಿ ಎಂದು ಶುಭ ಕೋರಿದರು.
ಕೋಟ್..
ರಾಜು ಕಾಗೆ, ಶಾಸಕರು.ಆರ್ಥಿಕವಾಗಿ ಸದೃಢ ಇದ್ದರವರು ಹಣವನ್ನು ತಂದು ಇಡಬೇಕು. ಕಷ್ಟದಲ್ಲಿದ್ದವರು ಸಾಲ ಪಡೆದು ತನ್ನ ತೊಂದರೆಯನ್ನು ನಿವಾರಿಸಿಕೊಳ್ಳಬೇಕೆಂಬ ಉದ್ದೇಶದಿಂದ ಈ ಸಸ್ಥೆಯನ್ನು ಪ್ರಾರಂಭಿಸಿದ್ದೇನೆ. ಎಲ್ಲರೂ ಪ್ರಾಮಾಣಿಕವಾಗಿ ಸಾಲ ಪಡೆದು ಸರಿಯಾಗಿ ಮರುಪಾವತಿ ಮಾಡಬೇಕು.