ವ್ಯಾಪಾರಿ ದೃಷ್ಟಿಯಿಂದ ಶಿಕ್ಷಣವನ್ನು ನೋಡಬೇಡಿ: ರಾಘವೇಶ್ವರ ಶ್ರೀ

KannadaprabhaNewsNetwork |  
Published : Apr 18, 2026, 02:00 AM IST
ಕಾರ್ಯಕ್ರಮವನ್ನು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಉದ್ಘಾಟಿಸಿದರು. | Kannada Prabha

ಸಾರಾಂಶ

ಇಂದು ಶಿಕ್ಷಣವನ್ನು ವ್ಯಾಪಾರದ ದೃಷ್ಟಿಯಿಂದ ನೋಡಲಾಗುತ್ತಿದೆ.

ಸುಬ್ರಹ್ಮಣ್ಯ ಪ್ರೌಢಶಾಲೆ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಸಮಾರಂಭ ಉದ್ಘಾಟನೆ

ಕನ್ನಡಪ್ರಭ ವಾರ್ತೆ ಹೊನ್ನಾವರ

ಇಂದು ಶಿಕ್ಷಣವನ್ನು ವ್ಯಾಪಾರದ ದೃಷ್ಟಿಯಿಂದ ನೋಡಲಾಗುತ್ತಿದೆ. ಈ ಕಾಲಘಟ್ಟದಲ್ಲಿ ಶಿಕ್ಷಣ ಸಂಸ್ಥೆಯನ್ನು ಉಳಿಸಿ-ಬೆಳೆಸುವ ಕೆಲಸವನ್ನು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸಮಿತಿಯವರು ಮಾಡುತ್ತಿರುವುದು ಶ್ಲಾಘನೀಯ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ನುಡಿದರು.

ತಾಲೂಕಿನ ಮುಗ್ವಾದಲ್ಲಿ ಶ್ರೀ ಕ್ಷೇತ್ರ ಸುಬ್ರಹ್ಮಣ್ಯದ ಆಡಳಿತದಲ್ಲಿರುವ ಶ್ರೀ ಸುಬ್ರಹ್ಮಣ್ಯ ಪ್ರೌಢಶಾಲೆಯ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳ ದತ್ತು ಸ್ವೀಕಾರ ಸಮಾರಂಭ ಉದ್ಘಾಟಿಸಿ ಶ್ರೀಗಳು ಆಶೀರ್ವಚನ ನೀಡಿದರು. ಇಂದು ಆಹಾರ ವಿಹಾರಗಳು ಮಕ್ಕಳನ್ನು ಚಂಚಲತೆಗೆ ಈಡು ಮಾಡುವ ಕಾಲಘಟ್ಟದಲ್ಲಿ ಇದ್ದೇವೆ. ಯೋಗ್ಯ ಶಿಕ್ಷಣ ನೀಡಬೇಕು. ಶಾಲೆಯಲ್ಲಿ ಒಳ್ಳೆಯತನ ಹೇಳಿಕೊಡಬೇಕು. ಸಂಸ್ಥೆಗೆ ಶಕ್ತಿ ತುಂಬುವ ಕೆಲಸವನ್ನು ನಾವೆಲ್ಲ ಮಾಡಬೇಕು ಎಂದರು.

ಸಚಿವ ಮಂಕಾಳ ವೈದ್ಯ ಮಾತನಾಡಿ, ಶಿಕ್ಷಣಕ್ಕೆ ಕೊರತೆ ಆಗಬಾರದು. ಈ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು. ಶಾಲೆಗಳಿಗೆ ಸರ್ಕಾರದ ಸ್ಪಂದನೆ ಸರಿಯಾಗಿ ಆಗದೇ ಇರುವುದರಿಂದ ಶಾಲೆಗಳು ಮುಚ್ಚುವ ಪರಿಸ್ಥಿತಿ ಬಂದಿದೆ. ದೇವಸ್ಥಾನ ಜೊತೆಯಲ್ಲಿ ಶಾಲೆಯನ್ನು ಅಭಿವೃದ್ಧಿ ಮಾಡಿದಾಗ ಶಾಲೆಯು ಉಳಿದು ಬೆಳೆಯುತ್ತದೆ ಎಂದರು. ಶಾಸಕ ದಿನಕರ ಶೆಟ್ಟಿ ಮಾತನಾಡಿ, ಶಿಕ್ಷಣ ಸಂಸ್ಥೆ ನಡೆಸುವುದು ಸುಲಭವಲ್ಲ. ಆಡಳಿತ ಮಂಡಳಿಯವರು ಅತ್ಯಂತ ಜಾಗರೂಕತೆಯಿಂದ ಸಂಸ್ಥೆ ನಡೆಸಬೇಕು. ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದರು.

ಎಂ.ಜಿ. ಭಟ್ ಪ್ರೇರಣಾ ನುಡಿಗಳನ್ನಾಡಿದರು ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಆರ್. ಹೆಗಡೆ ಪ್ರಾಸ್ತಾವಿಕ ಮಾತನಾಡಿದರು.

ಸಾರಿಗೆ ಉದ್ಯಮಿ ವೆಂಕಟ್ರಮಣ ಹೆಗಡೆ ಕವಲಕ್ಕಿ, ಗೋವಿಂದ ನಾಯ್ಕ, ಐ.ವಿ. ನಾಯ್ಕ, ವಿ.ಕೆ. ವಿಶಾಲ, ಸುರೇಶ ಶೆಟ್ಟಿ, ಡಾ. ರಮೇಶ ಗೌಡ, ಮುಖ್ಯಾಧ್ಯಾಪಕ ಯು.ಜಿ. ತಿಮ್ಮಪ್ಪ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜನರ ನೈಜ ನಂಬಿಕೆ, ಸಂಸ್ಕೃತಿ ಪ್ರತಿಬಿಂಬಿಸುವ ಸಾಹಿತ್ಯ: ಡಾ. ವೀರೇಂದ್ರ ಪಾಲ್
ಹಿಮೋಫಿಲಿಯಾ ಬಗ್ಗೆ ಭಯ ಬೇಡ: ಡಾ. ರಾಜೇಂದ್ರ ಗಡಾದ