ಕನ್ನಡಪ್ರಭ ವಾರ್ತೆ ರಾಮದುರ್ಗ
ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಕೆ.ಚಂದರಗಿ ಗ್ರಾಮದಲ್ಲಿ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರದಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ರಾಷ್ಟ್ರೀಯ ಕಾರ್ಯಕ್ರಮಗಳಿಗೆ ಅಧಿಕಾರಿಗಳು ಗೈರು ಉಳಿಯುವುದು ಸಾಮಾನ್ಯವಾಗಿದೆ. ಭಾನುವಾರ ಯಾರೂ ಗೈರು ಉಳಿಯುವ ಹಾಗಿಲ್ಲ. ಗೈರು ಉಳಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಅವಕಾಶ ನೀಡಬಾರದು ಎಂದು ಎಚ್ಚರಿಸಿದರು.
ತಾಲೂಕಿನ ದಾ. ಸಾಲಾಪುರದಿಂದ ಆರಂಭವಾಗುವ ಮಾನವ ಸರಪಳಿ ಕೊನೆಯ ಹಳ್ಳಿ ಎಂ.ಚಂದರಗಿ ಕ್ರಾಸ್ವರೆಗೆ 25 ಕಿ.ಮೀ ಮಾನವ ಸರಪಳಿ ನಿರ್ಮಿಸಲಾಗುವುದು. ಇದಕ್ಕೆ ತಾಲೂಕು ಆಡಳಿತ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಎಲ್ಲರೂ ನಿಗದಿತ ಸಮಯಕ್ಕೆ ಬರಬೇಕೆಂದು ತಹಸೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು.ತಾಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಕರು, ಸಿಆರ್ಸಿ ಸಿಬ್ಬಂದಿ, ಗ್ರಾಮ ಪಂಚಾಯತಿ ಪಿಡಿಒ, ಅಧ್ಯಕ್ಷರು, ಉಪಾಧ್ಯಕ್ಷರು, ಆಶಾ, ಅಂಗನವಾಡಿ ನೌಕರರು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಸಭೆಯಲ್ಲಿ ಇದ್ದರು.