ಕನ್ನಡಪ್ರಭ ವಾರ್ತೆ ಬಾಗಲಕೋಟೆ
ತಾಲೂಕು ಗಾಣಿಗ ಸಮಾಜ ಹಾಗೂ ಜ್ಯೋತಿ ಕೋ ಆಪ್ ಕ್ರೇಡಿಟ್ ಸೊಸೈಟಿ ಸಹಯೋಗದಲ್ಲಿ ನಗರದ ಚರಂತಿಮಠದ ಶಿವಾನುಭವ ಮಂಟಪದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬೇರೆ ಬೇರೆ ಪಕ್ಷದಲ್ಲಿ ಕೆಲಸ ಮಾಡುವ ಜೊತೆಗೆ ಸಮಾಜ ಎಂದು ಬಂದಾಗ ಕುಟುಂಬದಂತೆ ನಿಂತು ಕೆಲಸ ಮಾಡಿದಾಗ ಸಮಾಜಕ್ಕೆ ಒಳ್ಳೆಯದಾಗಲಿದೆ ಎಂದು ಹೇಳಿದರು.
ಸಮಾಜದ ಮುಖಂಡ ಬಸವಪ್ರಭು ಸರನಾಡಗೌಡರ ಮಾತನಾಡಿ, ಶಿಕ್ಷಣವಂತರಾದರೆ ಸಮಾಜ ಅಭಿವೃದ್ಧಿ ಹೊಂದಲಿದೆ. ಮಕ್ಕಳಿಗೆ ಒಳ್ಳೆಯ ಶಿಕ್ಷಣವನ್ನು ಪಾಲಕರು ನೀಡಿದರೆ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳು, ಅಧಿಕಾರಿಗಳಾಗಿ ಹೊರಹೊಮ್ಮಲಿದ್ದಾರೆ ಎಂದು ಹೇಳಿದರು.ನಮ್ಮ ಸಮುದಾಯದ ಹಲವಾರು ಮನೆತನದವರು ವಿವಿಧ ಶಿಕ್ಷಣ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಾರೆ. ಆದರೆ ನಮ್ಮ ಸಮಾಜದಿಂದ ಒಂದು ಶಿಕ್ಷಣ ಸಂಸ್ಥೆಯಾದರೆ ಸಮುದಾಯದ ಮಕ್ಕಳಿಗೆ ನೆರವಾಗಲಿದೆ. ಆ ಕೆಲಸಕ್ಕೆ ಒತ್ತು ನೀಡಬೇಕು. ಸಮುದಾಯದ ಏಳ್ಗೆಗೆ ಸಹಾಯ ಮಾಡುವುದಾಗಿ ಭರವಸೆ ನೀಡಿದ ಅವರು, ಶಿಕ್ಷಣ ಸಂಸ್ಥೆ ಕಟ್ಟಲು ಮುಂದಾದರೆ ಸಮುದಾಯದ ಹಲವಾರು ಮುಖಂಡರು ದೇಣಿಗೆ ನೀಡುತ್ತಾರೆ. ಸಮಾಜಕ್ಕೆ ಬೆನ್ನೆಲುಬಾಗಿ ನಿಲ್ಲುತ್ತಾರೆ ಎಂದು ಹೇಳಿದರು.
ರಾಜ್ಯದಲ್ಲಿ ಗಾಣಿಗ ಸಮಾಜ ದೊಡ್ಡದಿದೆ. ಜಾತಿ ಜನಗಣತಿ ಸಮೀಕ್ಷೆಗೆ ಬಂದಾಗ ಸಮಾಜದವರು ಜಾತಿ ಕಾಲಂದಲ್ಲಿ ಗಾಣಿಗ, ಧರ್ಮ ಹಿಂದೂ ಎಂದು ಬರೆಸಬೇಕು. ಮುಂಬರುವ ದಿನಗಳಲ್ಲಿ ಬೆಂಗಳೂರಿನಲ್ಲಿ ಗಾಣಿಗ ಸಮಾಜದ ಸಮಾವೇಶ ನಡೆಸಲು ಸಿದ್ಧತೆ ನಡೆದಿದೆ ಎಂದರು. ಇದೇ ವೇಳೆ 2024-25ನೇ ಸಾಲಿನ ಎಸ್.ಎಸ್.ಎಸಲ್.ಸಿ. ಹಾಗೂ ಪಿಯುಸಿ ದ್ವಿತೀಯ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಹಾಗೂ ನೀವೃತ್ತ ನೌಕರರನ್ನು , ಸಾಧಕರನ್ನು ಸನ್ಮಾನಿಸಲಾಯಿತು.