ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರದಲ್ಲಿ ದಸರಾ ಪ್ರಾರಂಭವಾಗುತ್ತದೆ. ಹಳ್ಳಿಗಳಲ್ಲಿ ಅತಿವೃಷ್ಟಿಯಿಂದ ಹಾಳಾದ ಬೆಳೆಗಳ ಕೊಯ್ಲು, ಹಿಂಗಾರಿಗೆ ಭೂಮಿ ಹದಗೊಳಿಸುವ ಕಾರ್ಯದಲ್ಲಿ ರೈತರು ಕೃಷಿ ಚಟುವಟಿಕೆಯಲ್ಲಿರುವಾಗ ಸರ್ಕಾರ ಕೆಲವೇ ದಿನಗಳಲ್ಲಿ ಸಮೀಕ್ಷೆ ಮುಗಿಸುತ್ತೆವೆ ಎನ್ನುವುದು ಸರಿಯಲ್ಲ. ಯಾವುದೇ ಒತ್ತಡಕ್ಕೆ ಒಳಗಾಗಿ ಸಮೀಕ್ಷೆ ಮಾಡುವುದು ಯಾವ ಪುರುಷಾರ್ಥಕ್ಕೆ? ರಾಜ್ಯದ ಸುಮಾರು 2 ಕೋಟಿ ಮನೆಗಳ ಸಮೀಕ್ಷೆ ಸುಲಭಸಾಧ್ಯವಲ್ಲ, ಬೇಸಿಗೆ ಕಾಲದಲ್ಲಿ ಸಮೀಕ್ಷೆ ಮಾಡುವುದು ಉತ್ತಮ ಎಂದು ಪಾಟೀಲ ಹೇಳಿದರು.
ಸರ್ಕಾರ ಹೊರಡಿಸಿರುವ ಹೊಸ ಜಾತಿಗಳ ಸೃಷ್ಟಿಮಾಡಿರುವುದು ದುರದೃಷ್ಟಕರ. 1,400 ಜಾತಿಗಳ ಪಟ್ಟಿ ಪತ್ರಿಕೆಗಳಲ್ಲಿ ಪ್ರಕಟಿಸಿ ಅದರ ಸಂಬಂಧ ಆಕ್ಷೇಪಣೆಗಳನ್ನು ಕೇಳಿದ್ದರು. ನಂತರ ಅದರಲ್ಲಿರುವ ಕೆಲ ಅನವಾಶ್ಯಕವಾಗಿ ಸೃಷ್ಟಿಸಿದ್ದ ಜಾತಿಗಳು ಕೈಬಿಡಬೇಕಾಗಿತ್ತು ಮತ್ತೊಂದಷ್ಟು ಬಿಟ್ಟು ಹೋಗಿರುವ ಮತ್ತು ಅನಾವಶ್ಯಕ ಜಾತಿಗಳನ್ನು ಸೇರಿಸಿ ಜನರಿಗೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿರುವ ಸರ್ಕಾರದ ನೀತಿ ಸರಿಯಲ್ಲ ಎಂದು ಆಕ್ಷೇಪಿಸಿದರು.ಇಡೀ ರಾಜ್ಯದಲ್ಲಿ ಇದೊಂದು ಜನಾಂದೋಲನ ಆಗುವ ಸಾಧ್ಯತೆಗಳಿವೆ. ಕ್ರಿಶ್ಚಿಯನ್, ಮುಸ್ಲಿಮರಲ್ಲಿ ಕೆಲವು ಉಪ ಜಾತಿ ಕೇಳಿದ್ದೆವು. ಎಲ್ಲ ಹಿಂದೂ ಉಪ ಜಾತಿಗಳಿಗೆ ಕ್ರಿಶ್ಚಿಯನ್, ಮುಸ್ಲಿಂ ಎಂದು ಹಾಕಿ ಮತ್ತೊಂದು ರೀತಿ ಮತಾಂತರಕ್ಕೆ ಪ್ರೇರಣೆ ಕೊಡುವ ಹುನ್ನಾರವನ್ನು ಸರ್ಕಾರ ಮಾಡಿದೆ. ಇದು ಮತ್ತೊಂದು ಮೀಸಲಾತಿಯ ಹುನ್ನಾರ ಎಂದು ಜನರಲ್ಲಿ ಅನುಮಾನ ಹುಟ್ಟು ಹಾಕುತ್ತಿದೆ. ಹೊಸದಾಗಿ ಸೃಷ್ಟಿಸಿದ ಜಾತಿಗಳನ್ನು ಪಟ್ಟಿಯಿಂದ ಕೈಬಿಡಲು ಆಗ್ರಹಿಸಿದ್ದಾರೆ.
ಸರ್ಕಾರ ಯಾವುದೇ ಜಾತಿ ಪಟ್ಟಿಯಲ್ಲಿ ಇಲ್ಲದ, ಯಾವ ಆಯೋಗದ ಪಟ್ಟಿಯಲ್ಲಿ ಇಲ್ಲದ ಹೊಸ ಜಾತಿಗಳನ್ನು ಸೃಷ್ಟಿಸಿದೆ. ಕುರುಬ ಕ್ರಿಶ್ಚಿಯನ್, ಮಡಿವಾಳ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್- ಈ ರೀತಿ 107 ಕಡೆಗಳಲ್ಲಿ ಹೊಸ ಜಾತಿ ಪ್ರಕಟಿಸಿದ್ದಾರೆ. ಅವುಗಳಿಗೆ ಕೋಡ್ ನಂಬರ್ ನೀಡಿದ್ದು, ಇದನ್ನು ಯಾವುದೇ ಕಾರಣಕ್ಕೂ ಒಪ್ಪಲಾಗದು ಎಂದರು.