ಸಮಯ ವ್ಯರ್ಥಮಾಡದೆ ದೇಶದ ಬೆಳವಣಿಗೆಗೆ ಚರ್ಚಿಸಿ

KannadaprabhaNewsNetwork |  
Published : Dec 25, 2024, 12:45 AM IST
ರಾಷ್ಟ್ರಪತಿಗಳು ಮಧ್ಯ ಪ್ರವೇಶ ಮಾಡಿ ದೇಶದ ಲೋಕಸಭೆ, ರಾಜ್ಯಸಭೆ ಹಾಗೂ ಎಲ್ಲಾ ರಾಜ್ಯಗಳ ವಿಧಾನಸಭೆ, ವಿಧಾನ ಪರಿಷತ್ ಅಧಿವೇಶಗಳ ಸಂದರ್ಭದಲ್ಲಿ ಸಂಸದರು, ಶಾಸಕರು ಗೌರವಯುತವಾಗಿ ನಡೆದುಕೊಳ್ಳುವಂತೆ ಸೂಚಿಸುವಂತೆ ಭದ್ರಾವತಿ ಜನ್ನಾಪುರ ಫಿಲ್ಟರ್‌ಶೆಡ್ ನಿವಾಸಿ, ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ತಹಸೀಲ್ದಾರ್ ಮೂಲಕ ಮನವಿ ಮಾಡಿದ್ದಾರೆ. | Kannada Prabha

ಸಾರಾಂಶ

Don't waste time, discuss the development of the country.

ಕನ್ನಡಪ್ರಭ ವಾರ್ತೆ ಭದ್ರಾವತಿ

ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಲೋಕಸಭೆ, ರಾಜ್ಯಸಭೆ ಹಾಗೂ ಎಲ್ಲಾ ರಾಜ್ಯಗಳ ವಿಧಾನಸಭೆ, ವಿಧಾನ ಪರಿಷತ್ ಅಧಿವೇಶಗಳ ವೇಳೆ ಸಂಸದರು, ಶಾಸಕರು ಗೌರವಯುತವಾಗಿ ನಡೆದುಕೊಳ್ಳುವಂತೆ ಸೂಚಿಸುವಂತೆ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಮನವಿ ಮಾಡಿದ್ದಾರೆ.

ಈ ಸಂಬಂಧ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗಿದೆ. ರೈತರ, ದೀನದಲಿತರ ಪೂರಕ ಚರ್ಚೆ ಆಗಬೇಕೆ ಹೊರತು ಭ್ರಷ್ಟ ರಾಜಕಾರಣಿಗಳ ಕಚ್ಚಾಟದಿಂದ ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಅಧಿವೇಶನ ವೇಳೆ ಕ್ಷುಲ್ಲಕ ಕಾರಣಕ್ಕೆ ಅಧಿವೇಶನದ ಸಮಯ ವ್ಯರ್ಥ ಮಾಡಿ ಸದನಗಳು ನಡೆಯದಂತೆ ಮಾಡಿದರೆ ಅಂತಹ ರಾಜಕಾರಣಿಗಳನ್ನು ನೇರ ಹೊಣೆಗಾರರನ್ನಾಗಿಸಿ, ಅಧಿವೇಶನ ನಡೆಯಲು ತಗಲುವ ಖರ್ಚು ವೆಚ್ಚ ಅವರೇ ಭರಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ. -----

ಡಿ೨೪-ಬಿಡಿವಿಟಿ

ರಾಷ್ಟ್ರಪತಿಗಳು ಮಧ್ಯ ಪ್ರವೇಶ ಮಾಡಿ ಎಲ್ಲಾ ರಾಜ್ಯಗಳ ವಿಧಾನಸಭೆ, ವಿಧಾನ ಪರಿಷತ್ ಅಧಿವೇಶನ ವೇಳೆ ಸಂಸದರು, ಶಾಸಕರು ಗೌರವಯುತವಾಗಿ ನಡೆದುಕೊಳ್ಳುವಂತೆ ಸೂಚಿಸುವಂತೆ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ತಹಸೀಲ್ದಾರ್ ಮೂಲಕ ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ