ವರ್ಷಕ್ಕೆ ಮೂರು ಬಾರಿಯಾದರೂ ರಕ್ತದಾನ ಮಾಡಿ

KannadaprabhaNewsNetwork |  
Published : Apr 18, 2025, 12:33 AM IST
17ಎಚ್ಎಸ್ಎನ್8 : ಹೊಳೆನರಸೀಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಿ.ಆರ್.ಪಟ್ಟಣ ಸಹಾಯೋಗದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರದಲ್ಲಿ ಯುವಕರು ರಕ್ತದಾನ ಮಾಡಿದರು. | Kannada Prabha

ಸಾರಾಂಶ

ಗಂಡಸರಿಗೆ ಹುಟ್ಟಿನಿಂದ ಜೀವಿತ ಅವಧಿಯಲ್ಲಿ ಒಮ್ಮೆಯೂ ದೇಹದಿಂದ ರಕ್ತ ಹೊರಹೋಗುವುದಿಲ್ಲ ಮತ್ತು ವಯಸ್ಸಾದಂತೆ ರಕ್ತ ಗಟ್ಟಿಯಾಗುತ್ತದೆ. ಇದರಿಂದ ಹೃದಯಘಾತ, ಲಕ್ವಾ ಹಾಗೂ ಇತರೆ ಕಾಯಿಲೆಗಳು ಕಾಡುವ ಸಾಧ್ಯತೆ ಹೆಚ್ಚು ಇರುತ್ತದೆ. ಆದ್ದರಿಂದ ಯುವಕರು ಭಯ ಅಥವಾ ಇತರೆ ತಪ್ಪು ತಿಳಿವಳಿಕೆ ಬಿಟ್ಟು ವರ್ಷಕ್ಕೆ ಮೂರು ಬಾರಿ ರಕ್ತದಾನವನ್ನು ಮಾಡುವುದರಿಂದ ಉತ್ತಮ ಆರೋಗ್ಯದ ಜೊತೆಗೆ ಆತ್ಮವಿಶ್ವಾಸದಿಂದ ಇರಲು ಸಾಧ್ಯವಾಗುತ್ತದೆ ಎಂದು ಚನ್ನರಾಯಪಟ್ಟಣ ಸಂಸ್ಥೆಯ ಭರತ್ ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ಗಂಡಸರಿಗೆ ಹುಟ್ಟಿನಿಂದ ಜೀವಿತ ಅವಧಿಯಲ್ಲಿ ಒಮ್ಮೆಯೂ ದೇಹದಿಂದ ರಕ್ತ ಹೊರಹೋಗುವುದಿಲ್ಲ ಮತ್ತು ವಯಸ್ಸಾದಂತೆ ರಕ್ತ ಗಟ್ಟಿಯಾಗುತ್ತದೆ. ಇದರಿಂದ ಹೃದಯಘಾತ, ಲಕ್ವಾ ಹಾಗೂ ಇತರೆ ಕಾಯಿಲೆಗಳು ಕಾಡುವ ಸಾಧ್ಯತೆ ಹೆಚ್ಚು ಇರುತ್ತದೆ. ಆದ್ದರಿಂದ ಯುವಕರು ಭಯ ಅಥವಾ ಇತರೆ ತಪ್ಪು ತಿಳಿವಳಿಕೆ ಬಿಟ್ಟು ವರ್ಷಕ್ಕೆ ಮೂರು ಬಾರಿ ರಕ್ತದಾನವನ್ನು ಮಾಡುವುದರಿಂದ ಉತ್ತಮ ಆರೋಗ್ಯದ ಜೊತೆಗೆ ಆತ್ಮವಿಶ್ವಾಸದಿಂದ ಇರಲು ಸಾಧ್ಯವಾಗುತ್ತದೆ ಎಂದು ಚನ್ನರಾಯಪಟ್ಟಣ ಸಂಸ್ಥೆಯ ಭರತ್ ಸಲಹೆ ನೀಡಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಿ.ಆರ್.ಪಟ್ಟಣ ಸಹಯೋಗದಲ್ಲಿ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು. ಮಹಿಳೆಯರಿಗೆ ದೇವರು ನೀಡಿದ ವರದಾನವಾದ ಋತುಚಕ್ರದಿಂದ ರಕ್ತವು ದೇಹದಿಂದ ಹೊರ ಹೋಗುತ್ತದೆ. ಜೊತೆಗೆ ಪ್ರಕೃತಿದತ್ತವಾಗಿ ಅಗತ್ಯ ರಕ್ತವು ದೇಹದಲ್ಲಿ ಸಂಗ್ರಹವಾಗುವ ಕಾರಣದಿಂದ ಕಾಯಿಲೆಗಳು ಕಾಡುವುದು ಕಡಿಮೆ ಎಂದರು. ಇದೇ ವೇಳೆ ಹಲವಾರು ವಿಷಯಗಳು ಹಾಗೂ ಮಾನವೀಯ ಮೌಲ್ಯಗಳು ಕುರಿತು ಮಾತನಾಡಿದರು.

೪೦ ಯೂನಿಟ್ ರಕ್ತವನ್ನು ವಿದ್ಯಾರ್ಥಿಗಳು ನೀಡಿದರು. ೨೮೦ ವಿದ್ಯಾರ್ಥಿಗಳಿಗೆ ಕಣ್ಣಿನ ಪರೀಕ್ಷೆ ಹಾಗೂ ೫೬ ವಿದ್ಯಾರ್ಥಿಗಳಿಗೆ ಬಿಪಿ ಹಾಗು ಸಕ್ಕರೆ ಕಾಯಿಲೆ ತಪಾಸಣೆ ನಡೆಸಲಾಯಿತು.

ಪ್ರಾಂಶುಪಾಲರಾದ ಮೂರ್ತಿ ಎಸ್.ಆರ್. ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕಿ ಡಾ.ಪೂರ್ಣಿಮಾ, ಬರ್ನಾಡ್, ಉದಯ್ ಕುಮಾರ್, ಜಯಣ್ಣ, ಪೂರ್ಣಿಮಾ, ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?