ಯೋಧರಿಗಾಗಿ ರಕ್ತದಾನ ಮಾಡಿ

KannadaprabhaNewsNetwork |  
Published : Aug 01, 2024, 12:17 AM IST
ಕೆ ಕೆ ಪಿ ಸುದ್ದಿ, 03:ಬಿಜೆಪಿ ಯುವ ಮೋರ್ಚಾ ವತಿಯಿಂದಕೋಟೆ ಗಣಪತಿ ದೇವಸ್ಥಾನದಲ್ಲಿ ಕಾರ್ಗಿಲ್ ಹುತಾತ್ಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸ್ವಯ ಪ್ರೇರಿತ ರಕ್ತದಾನ ಶಿಬಿರದಲ್ಲಿ ಸಂಸದ ಡಾ. ಮಂಜುನಾಥ್ ಪುತ್ರ ಸಾತ್ವಿಕ್ ಮಂಜುನಾಥ್ ರಕ್ತದಾನ ಮಾಡಿದರು.   | Kannada Prabha

ಸಾರಾಂಶ

ಕನಕಪುರ: ದೇಶದ ಜನರ ಪ್ರಾಣ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ಒತ್ತೆಯಿಟ್ಟು ಹಗಲಿರುಳು ದೇಶದ ಗಡಿಯಲ್ಲಿ ಕಾವಲು ಕಾಯುತ್ತಿರುವ ವೀರಯೋಧರಿಗಾಗಿ ಯುವ ಜನತೆ ರಕ್ತದಾನ ಮಾಡುವಂತೆ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಾಗನಂದ ಮನವಿ ಮಾಡಿದರು.

ಕನಕಪುರ: ದೇಶದ ಜನರ ಪ್ರಾಣ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ಒತ್ತೆಯಿಟ್ಟು ಹಗಲಿರುಳು ದೇಶದ ಗಡಿಯಲ್ಲಿ ಕಾವಲು ಕಾಯುತ್ತಿರುವ ವೀರಯೋಧರಿಗಾಗಿ ಯುವ ಜನತೆ ರಕ್ತದಾನ ಮಾಡುವಂತೆ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಾಗನಂದ ಮನವಿ ಮಾಡಿದರು.

ನಗರದ ಕೋಟೆ ಗಣಪತಿ ದೇವಸ್ಥಾನದಲ್ಲಿ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ವೀರಯೋಧರ ಸ್ಮರಣಾರ್ಥ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಮಾತನಾಡಿದ ಅವರು, ನಮ್ಮ ಭಾರತ ದೇಶವನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಯುವ ವೀರಯೋಧರು ಸಂಕಷ್ಟಕ್ಕೆ ಗುರಿಯಾದಾಗ ರಕ್ತದ ಅವಶ್ಯಕತೆ ಇರುವುದರಿಂದ ದೇಶದ ಯುವ ಜನತೆ ತಮ್ಮ ಕರ್ತವ್ಯ ಹಾಗೂ ಸೇವೆ ಎಂದು ಭಾವಿಸಿ ರಕ್ತದಾನ ಮಾಡಬೇಕೆಂದರು.

ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಪಿ.ಕುಮಾರ್ ಮಾತನಾಡಿ, ಯುವ ಜನತೆ ರಕ್ತದಾನ ಮಾಡಲು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪಣ ತೊಡಬೇಕೆಂದರು.

ಸಂಸದ ಡಾ. ಮಂಜುನಾಥ್ ಪುತ್ರ ಡಾ. ಸಾತ್ವಿಕ್ ಮಂಜುನಾಥ್ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿ ಯುವಕರಿಗೆ ಸ್ಫೂರ್ತಿ ತುಂಬಿದರು. ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಜಗನಾಥ್ ಗೌಡ, ನಗರ ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ್, ಯುವ ಮೋರ್ಚಾ ತಾಲೂಕು ಅಧ್ಯಕ್ಷ ಉಮೇಶ್, ಪಕ್ಷದ ಮುಖಂಡರಾದ ದಯಾನಂದ, ಅಶ್ವತ್ಥ್, ಪಾಲಾಕ್ಷ, ಕೋಟೆ ಕಿಟ್ಟಣ್ಣ, ಚೂಡಾಮಣಿ ಚಂದ್ರು, ದರ್ಶನ್, ಪ್ರದೀಪ್, ಮರಿಯಪ್ಪ ಪವಿತ್ರಾ, ವರಲಕ್ಷ್ಮೀ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

(ಸಿಂಗಲ್‌ ಕಾಲಂ ಫೋಟೋ ಮಾತ್ರ ಬಳಸಿ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ