ವರ್ಷದಲ್ಲಿ ಮೂರ್ನಾಲ್ಕು ಬಾರಿ ರಕ್ತದಾನ ಮಾಡಿ

KannadaprabhaNewsNetwork |  
Published : Nov 06, 2024, 11:49 PM IST
ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ರಕ್ತದಾನ ಶಿಬಿರ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಜೀವ ರಕ್ಷಣೆಯಲ್ಲಿ ರಕ್ತ ಮಹತ್ವದ್ದಾಗಿದ್ದು, ಆರೋಗ್ಯವಂತ ವ್ಯಕ್ತಿ ಒಂದು ವರ್ಷದಲ್ಲಿ ಮೂರ್ನಾಲ್ಕು ಬಾರಿ ರಕ್ತದಾನ ಮಾಡಬಹುದು ಎಂದು ಬಿ.ಎಂ.ಪಾಟೀಲ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ರಾಜೇಶ ಹೊನ್ನುಟಗಿ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜೀವ ರಕ್ಷಣೆಯಲ್ಲಿ ರಕ್ತ ಮಹತ್ವದ್ದಾಗಿದ್ದು, ಆರೋಗ್ಯವಂತ ವ್ಯಕ್ತಿ ಒಂದು ವರ್ಷದಲ್ಲಿ ಮೂರ್ನಾಲ್ಕು ಬಾರಿ ರಕ್ತದಾನ ಮಾಡಬಹುದು ಎಂದು ಬಿ.ಎಂ.ಪಾಟೀಲ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ರಾಜೇಶ ಹೊನ್ನುಟಗಿ ಹೇಳಿದರು.

ನಗರದ ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ವ್ಯವಹಾರ ಅಧ್ಯಯನ ವಿಭಾಗ ಮತ್ತು ಹಾಗೂ ಸಂಶೋಧನೆ ಕೇಂದ್ರ ಮತ್ತು ಬಿಎಲ್‌ಡಿಇ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ಸಾರ್ವಜನಿಕರಲ್ಲಿ ರಕ್ತದಾನದ ಕುರಿತು ಹೆಚ್ಚು ಜಾಗೃತಿ ಮೂಡಿಸಿ ರಕ್ತದಾನಕ್ಕೆ ಪ್ರೇರೆಪಿಸಬೇಕು. ರಕ್ತದಾನದಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಿ, ವ್ಯಕ್ತಿಯಲ್ಲಿ ಚೈತನ್ಯ ಉಂಟಾಗುತ್ತದೆ. ಅಲ್ಲದೇ, ರಕ್ತ ಅಗತ್ಯವಿರುವ ಜೀವಗಳನ್ನು ಉಳಿಸಿದ ಪುಣ್ಯ ಬರುತ್ತದೆ. ಬಿಎಲ್‌ಡಿಇ ಆಸ್ಪತ್ರೆ ರಕ್ತ ಭಂಡಾರದ ಮೂಲಕ ಅವಶ್ಯವಿರುವ ರೋಗಿಗಳಿಗೆ ರಕ್ತವನ್ನು ಒದಗಿಸಲಾಗುತ್ತಿದೆ. ವೈದ್ಯಕೀಯ, ನೀರಾವರಿ, ವೃಕ್ಷ ಅಭಿಯಾನದಂಥ ಸಮಾಜಮುಖಿ ಕೆಲಸದ ಮೂಲಕ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ.ಬಿ.ಪಾಟೀಲ ಅವರು ಶ್ರೇಷ್ಠ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಸಾಹಿತಿ ಕೆ.ಸುನಂದಾ ಮಾತನಾಡಿ, 50 ವರ್ಷದ ಸಂಭ್ರಮದಲ್ಲಿರುವ ಕರ್ನಾಟಕ ಇಂದು ಸಮೃದ್ಧತೆಯಿಂದ ಕೂಡಿದೆ. ಭಾಷೆ, ಸಾಹಿತ್ಯ ಸಾಂಸ್ಕೃತಿಕ ಶ್ರೀಮಂತಿಕೆ ಹೊಂದಿದ ಕನ್ನಡ ಶಾಸ್ತ್ರೀಯ ಸ್ಥಾನಮಾನ ಹೊಂದಿರುವುದು ಹೆಮ್ಮೆಯ ವಿಷಯ. ಕನ್ನಡದ ಬಗ್ಗೆ ಆತ್ಮಾಭಿಮಾನವಿರಬೇಕು, ಆಂಗ್ಲ ಭಾಷೆಗೆ ಮರುಳಾಗದೇ ಮಕ್ಕಳಲ್ಲಿ ಕನ್ನಡ ಪ್ರೇಮ ಬೆಳೆಸಬೇಕು. ಕನ್ನಡವೇ ನಮ್ಮ ಬದುಕು, ಕನ್ನಡವೇ ನಮ್ಮ ಉಸಿರಾಗಬೇಕು ಎಂದು ಹೇಳಿದರು.

ಪ್ರಾಚಾರ್ಯ ಬಿ.ಎಸ್.ಬೆಳಗಲಿ ಮಾತನಾಡಿದರು. ಶಿಬಿರದಲ್ಲಿ 85 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಮತ್ತು ಕಾಲೇಜಿನ ಸಿಬ್ಬಂದಿ ರಕ್ತದಾನ ಮಾಡಿದರು. ಈ ವೇಳೆ ಎಂ.ಬಿ.ಎ ವಿಭಾಗದ ನಿರ್ದೇಶಕ ಡಾ.ಚಿದಾನಂದ ಬ್ಯಾಹಟ್ಟಿ, ಡಾ.ಅಶ್ವಿನಿ ಯರನಾಳ, ಪ್ರೊ.ಲಕ್ಷಣ ಪವಾರ, ಡಾ.ಮಹಾಂತೇಶ ಕನಮಡಿ, ಪ್ರೊ.ವಿನಯ ಡರ್ಬಿ, ದೇವರಾಜ ಪಾಟೀಲ, ರೇಣುಕಾ ಬಿರಾದಾರ, ಪವಿತ್ರಾ ಜಾಧವ, ಪ್ರಶಾಂತ ಪಾಟೀಲ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಾ.ಮುರುಗೇಶ ಪಟ್ಟಣಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರತಿ ಮೋದಿ ಮತ್ತು ಅಲ್ಲಮಪ್ರಭು ನಿರೂಪಿಸಿದರು. ಪ್ರೊ.ಗಂಗಾಧರ ಮಮದಾಪುರ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಲು ಬಿಜೆಪಿಗೆ ಒಳ್ಳೆ ಅವಕಾಶ
ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ