ಇನ್ನೊಬ್ಬರ ಜೀವ ಉಳಿಸಲು ರಕ್ತದಾನ ಮಾಡಿ: ಡಾ. ಬಸವರಾಜ ಬೊಮ್ಮನಹಳ್ಳಿ

KannadaprabhaNewsNetwork |  
Published : Apr 02, 2026, 02:15 AM IST
ಪೊಟೋ-ಪಟ್ಟಣದ ಅಗಡಿ ಎಂಜಿನೀಯರ್ ಕಾಲೇಏಜಿನಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿದ್ದ ರಕ್ತದಾನಿಗಳು.. | Kannada Prabha

ಸಾರಾಂಶ

ರಸ್ತೆ ಅಪಘಾತಗಳು, ಶಸ್ತ್ರಚಿಕಿತ್ಸೆಗಳು, ಗರ್ಭಿಣಿಯರು ಮತ್ತು ವಿವಿಧ ರೋಗಗಳಿಂದ ಬಳಲುವ ರೋಗಿಗಳಿಗೆ ತಕ್ಷಣ ರಕ್ತದ ಅವಶ್ಯಕತೆ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಸ್ವಯಂಪ್ರೇರಿತ ರಕ್ತದಾನಿಗಳು ಜೀವದಾತರಾಗುತ್ತಾರೆ.

ಲಕ್ಷ್ಮೇಶ್ವರ: ಸ್ವಯಂಪ್ರೇರಿತ ರಕ್ತದಾನ ಶಿಬಿರವು ಮಾನವೀಯತೆಯ ಅತ್ಯುನ್ನತ ಸೇವೆಯಾಗಿದೆ ಎಂದು ಗದಗ ಜಿಲ್ಲಾ ಕೆ.ಎಚ್. ಪಾಟೀಲ ಸರ್ಕಾರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ತಿಳಿಸಿದರು.

ಬುಧವಾರ ಪಟ್ಟಣದ ಕಮಲಾ ಮತ್ತು ವೆಂಕಪ್ಪ ಎಂ. ಅಗಡಿ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯದ ಸಂಸ್ಥಾಪಕ ಅಧ್ಯಕ್ಷ ದಿ. ವೆಂಕಪ್ಪ ಎಂ. ಅಗಡಿ ಅವರ 94ನೇ ಜನ್ಮದಿನ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ರಕ್ತವು ಯಾವುದೇ ಕಾರ್ಖಾನೆಯಲ್ಲಿ ತಯಾರಿಸಲು ಸಾಧ್ಯವಿಲ್ಲ. ಅದು ಒಬ್ಬ ವ್ಯಕ್ತಿಯಿಂದ ಮತ್ತೊಬ್ಬರಿಗೆ ಮಾತ್ರ ದೊರೆಯುತ್ತದೆ. ಆದ್ದರಿಂದ ರಕ್ತದಾನ ಜೀವ ಉಳಿಸುವ ಮಹಾದಾನವೆಂದು ಪರಿಗಣಿಸಲಾಗುತ್ತದೆ ಎಂದರು.

ರಸ್ತೆ ಅಪಘಾತಗಳು, ಶಸ್ತ್ರಚಿಕಿತ್ಸೆಗಳು, ಗರ್ಭಿಣಿಯರು ಮತ್ತು ವಿವಿಧ ರೋಗಗಳಿಂದ ಬಳಲುವ ರೋಗಿಗಳಿಗೆ ತಕ್ಷಣ ರಕ್ತದ ಅವಶ್ಯಕತೆ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಸ್ವಯಂಪ್ರೇರಿತ ರಕ್ತದಾನಿಗಳು ಜೀವದಾತರಾಗುತ್ತಾರೆ. ಒಂದು ದಾನದಿಂದ ಮೂರು ಜನರ ಜೀವ ಉಳಿಯಬಹುದು ಎಂದರು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಪರಶುರಾಮ ಬಾರಕಿ ಮಾತನಾಡಿ, ಕಳೆದ ಎರಡು ದಶಕಗಳಿಂದ ರಕ್ತದಾನ ಶಿಬಿರ ಆಯೋಜನೆ ಯಶಸ್ವಿಯಾಗಿ ಕೈಗೊಂಡಿದ್ದು, ಇದು ಮಾನವೀಯತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚಿಸುತ್ತದೆ. ತುರ್ತು ಪರಿಸ್ಥಿತಿಯಲ್ಲಿ ಸಹಾಯವಾಗುತ್ತದೆ ಎಂದು ಹೇಳಿದ ಅವರು, ಪ್ರಸಕ್ತ ಸಾಲಿನಿಂದ ಹುತಾತ್ಮ ಯೋಧರ ಮಕ್ಕಳಿಗೆ ವಸತಿಸಹಿತ ಉಚಿತ ತಾಂತ್ರಿಕ ಶಿಕ್ಷಣ ನೀಡಲು ಸಂಸ್ಥೆ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದರು.

ಇದೇ ಸಂದರ್ಭದಲ್ಲಿ ನಿವೃತ್ತ ಯೋಧ ಯೋಗೇಶ್ ಹಿರೇಮಠ, ಚನ್ನಬಸಪ್ಪ ಹುಡೇದ, ಎಚ್.ಡಿ. ಸಂಜೀವಣ್ಣವರ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಅಗಡಿ ಸನ್ ರೈಸ್ ಆಸ್ಪತ್ರೆಯ ಡಾ. ರಾಜಶೇಖರ ಮೂಲಿಮನಿ, ಡಾ. ಸುಜಾತಾ ಸಂಗೂರ್, ಡಾ. ವಾಣಿ ಶಿವಪುರ, ಪ್ರೊ. ವಿಕ್ರಂ ಶಿರೋಳ, ಡಾ. ಸುಭಾಷ್ ಮೇಟಿ, ಪದವಿಪೂರ್ವ ಮಹಾವಿದ್ಯಾಲಯ ಪ್ರಾಚಾರ್ಯ ಶುಭಾ ಡಿ., ರವಿಪ್ರಕಾಶ್, ಎನ್ಎಸ್ಎಸ್ ಅಧಿಕಾರಿ ಪ್ರೊ. ಸೋಮಶೇಖರ ಕೆರಿಮನಿ, ಕಿರಣ ಕೋತಿನ, ರಾಜೇಶ್ವರಿ ಗಾಮನಗಟ್ಟಿ, ಗೀತಾ ಬ್ಯಾಟಿ, ಡಾ. ಗಿರೀಶ್ ಯತ್ತಿನಹಳ್ಳಿ, ಡಾ. ಸಂತೋಷ್ ಬುಜರಿ, ಡಾ. ಶಿವರಾಜ್ ಹಿರೇಮಠ, ಎಸ್.ಎನ್. ಗೊಂದಕರ, ದಯಾನಂದ ಬಡಿಗಣ್ಣವರ, ಎಸ್.ಎಫ್. ಕೊಡ್ಲಿ, ರಮೇಶ ರೆಡ್ಡಿ, ಬಸವರಾಜ ಮುರಗೋಡ, ರವಿ ಸದ್ಲಾಪುರ, ಮಲ್ಲಯ್ಯ ಹಿರೇಮಠ, ಷಣ್ಮುಖ ಜಿ., ಈರಣ್ಣ ಮಕರಬ್ಬಿ, ಶ್ರೀಕಾಂತ್ ಮಲ್ಲಿಗವಾಡ, ರವಿ ದುರ್ಗಣ್ಣವರ, ಸಂಗಮೇಶ, ಸೋಮು ನವಲಗುಂದ, ಮಂಜುನಾಥ ಎಂ., ಸಂಗಮೇಶ ಉಳೆವಪ್ಪನವರ ಹಾಗೂ ಮಹಾವಿದ್ಯಾಲಯದ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿದ್ದರು. 133 ಜನ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಡವರಿಗೆ ಸಾಮೂಹಿಕ ವಿವಾಹ ಅನುಕೂಲ: ಮುದುಕೇಶ್ವರ ಶಿವಾಚಾರ್ಯರು ಸ್ವಾಮಿಗಳು
ಲಿಂ. ಸಿದ್ಧಗಂಗಾ ಡಾ. ಶಿವಕುಮಾರ ಶ್ರೀ ಸದಾ ಸ್ಮರಣೀಯರು: ಜಗದೀಶ ಸಂಕನೂರ