ಸತ್ಕಾರ್ಯಗಳಿಗೆ ದಾನ ಮಾಡಿ ಜೀವನ ಸಾರ್ಥಕ ಮಾಡಿಕೊಳ್ಳಿ

KannadaprabhaNewsNetwork |  
Published : Sep 03, 2025, 01:02 AM IST
ಇಂಚಲದ ಡಾ.ಶಿವಾನಂದ ಭಾರತಿ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು. | Kannada Prabha

ಸಾರಾಂಶ

ಪ್ರತಿಯೊಬ್ಬ ಮನುಷ್ಯನು ಸದ್ಗುಣ ಬೆಳೆಸಿಕೊಳ್ಳಬೇಕು. ತಮ್ಮ ಗಳಿಕೆಯ ಸಾಮರ್ಥ್ಯಕ್ಕೆ ಅನುಗುಣವಾಗಿ ಸತ್ಕಾರ್ಯಗಳಿಗೆ ದಾನ ಮಾಡಿ ತಮ್ಮ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದು ಇಂಚಲ ಸಾಧು ಸಂಸ್ಥಾನ ಮಠದ ಡಾ.ಶಿವಾನಂದ ಭಾರತಿ ಮಹಾಸ್ವಾಮೀಜಿ ನುಡಿದರು.

ಕನ್ನಡಪ್ರಭ ವಾರ್ತೆ ಗೋಕಾಕ

ಪ್ರತಿಯೊಬ್ಬ ಮನುಷ್ಯನು ಸದ್ಗುಣ ಬೆಳೆಸಿಕೊಳ್ಳಬೇಕು. ತಮ್ಮ ಗಳಿಕೆಯ ಸಾಮರ್ಥ್ಯಕ್ಕೆ ಅನುಗುಣವಾಗಿ ಸತ್ಕಾರ್ಯಗಳಿಗೆ ದಾನ ಮಾಡಿ ತಮ್ಮ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದು ಇಂಚಲ ಸಾಧು ಸಂಸ್ಥಾನ ಮಠದ ಡಾ.ಶಿವಾನಂದ ಭಾರತಿ ಮಹಾಸ್ವಾಮೀಜಿ ನುಡಿದರು.

ತಾಲೂಕಿನ ಬೆಟಗೇರಿ ಗ್ರಾಮದ ಗಜಾನನ ವೇದಿಕೆಯಲ್ಲಿ ನಡೆದ 41ನೇ ಸತ್ಸಂಗ ಸಮ್ಮೇಳನದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಸುಜ್ಞಾನದ ಬೆಳಕು ನೀಡುವ ಶಕ್ತಿ ಸದ್ಗುರುವಿಗೆ ಇದೆ. ಸದ್ಗುರುವಿನ ಕೃಪೆಗೆ ಪಾತ್ರರಾಗಬೇಕಾದರೇ ಒಳ್ಳೆಯ ಕಾರ್ಯಕ್ಕೆ ದಾನ, ಧರ್ಮ ಮಾಡಬೇಕು. ದಾನ, ಧರ್ಮ ಮಾಡಿದವರಿಗೆ ಪುಣ್ಯ ಬರುತ್ತದೆ ಎಂದರು.ಗದಗ ಮಹಿಳಾ ಆಧ್ಯಾತ್ಮ ವಿದ್ಯಾಶ್ರಮ ಡಾ.ನೀಲಮ್ಮಾತಾಯಿ (ಅಸುಂಡಿ), ಇಂಚಲ ಪೂರ್ಣಾನಂದ ಭಾರತಿ ಸ್ವಾಮೀಜಿ, ಮಲ್ಲಾಪೂರ (ಕೆ.ಎನ್) ಚಿದಾನಂದ ಸ್ವಾಮೀಜಿ, ಹುಣಶ್ಯಾಳ(ಪಿ.ಜಿ) ನಿಜಗುಣ ದೇವರು, ತೊಂಡಿಕಟ್ಟಿ ಅಭಿನವ ವೆಂಕಟೇಶ್ವರ ಮಹಾರಾಜರು, ಕುಳ್ಳೂರ ಬಸವಾನಂದ ಭಾರತಿ ಸ್ವಾಮೀಜಿ, ಶೇಗುಣಶಿ ಡಾ.ಮಹಾಂತಪ್ರಭು ಸ್ವಾಮೀಜಿ, ಹಡಗಿನಾಳ ಮಲ್ಲೇಶ ಶರಣರು, ಗದಗ ಶರಣೆ ಮೈತ್ರಾ ತಾಯಿಯವರು, ವರಗುಣವಾವುದು? ಎಂಬ ವಿಷಯದ ಮೇಲೆ ಪ್ರವಚನ ಮಾಡಿದರು. ಕರಿಕಟ್ಟಿ ಗುರುನಾಥ ಶಾಸ್ತ್ರೀಗಳಿಂದ ಕೀರ್ತನೆ ಜರುಗಿತು.ಮದರಖಂಡಿ ಸಿದ್ಧಾರೂಢ ಮಠಪತಿ ಅವರ ತಬಲಾ ಸಾಥ್‌ದೊಂದಿಗೆ ಶೇಗುಣ್ಸಿಯ ಮಲ್ಲನಗೌಡ ಶಿವಲಿಂಗಪ್ಪಗೋಳ ಅವರಿಂದ ಸಂಗೀತ ಸೇವೆ ಜರುಗಿತು. ಗಣ್ಯರು, ದಾನಿಗಳಿಗೆ ಶ್ರೀಗಳಿಂದ ಶಾಲು ಹೊದಿಸಿ ಸತ್ಕರಿಸಿಲಾಯಿತು. ಸ್ಥಳೀಯ ಬಸವಂತ ನೀಲಣ್ಣವರ, ಬಸವರಾಜ ಯಾದವಾಡ, ವಿಠ್ಠಲ ಚಂದರಗಿ (ಗಿರಣಿ) ಹಾಗೂ ಕುಟುಂಬದವರಿಂದ ಇಂಚಲ ಡಾ.ಶಿವಾನಂದ ಭಾರತಿ ಶ್ರೀಗಳಿಗೆ ಭಕ್ತಿಯ ತುಲಾಭಾರ ಸೇವೆ, ಕೀರಿಟ ಪೂಜೆ, ಶ್ರೀಗಳಿಂದ ಆಶೀರ್ವಚನ, ಸ್ಥಳೀಯ ಗ್ರಾಪಂ ಮಾಜಿ ಅಧ್ಯಕ್ಷ ಬಸವಂತ ಕೋಣಿ ಮತ್ತು ಸಹೋದರರಿಂದ ಮಹಾಪ್ರಸಾದ ಸೇವೆ ನಡೆಯಿತು.ಗ್ರಾಮದ ಈಶ್ವರ ದೇವರ ದೇವಸ್ಥಾನದ ಈಶ್ವರ ದೇವರ ಗದ್ದುಗೆ 5 ದಿನಗಳ ಕಾಲ ಬೆಳಗ್ಗೆ 6 ಗಂಟೆಗೆ ಮಹಾಪೂಜೆ, ನೈವೇದ್ಯ ಸಮರ್ಪನೆ, ಪ್ರಾತ:ಕಾಲ ಬ್ರಾಹ್ಮಿ ಮೂಹೂರ್ತದಲ್ಲಿ ಶಿವನಾಮ ಸ್ಮರಣೆ, ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಸದ್ಭಕ್ತರಿಂದ, ಶಿವ ಭಜನೆ, ಜಾಗರಣೆ ಜರುಗಿತು. ಐದು ದಿನಗಳ ಕಾಲ ಪ್ರತಿ ದಿನ ಸಂಜೆ 7.30ಕ್ಕೆ ನಾಡಿನ ಹೆಸರಾಂತ ಹಲವಾರು ಜನ ಮಹಾತ್ಮರು, ಶರಣರು, ಹರ, ಗುರು ಚರಮೂರ್ತಿಗಳಿಂದ ವಿವಿಧ ವಿಷಯಗಳ ಮೇಲೆ ಪ್ರವಚನ ನಡೆಯಿತು. ಸ್ಥಳೀಯ ಈಶ್ವರ ಭಜನಾ ಮಂಡಳಿ ವತಿಯಿಂದ ಸಕಲ ಶ್ರೀಗಳಿಗೆ ಸತ್ಕಾರ ಜರುಗಿತು. ಸ್ಥಳೀಯ ಹಾಗೂ ಸುತ್ತ-ಮುತ್ತಲಿನ ಹಳ್ಳಿಗಳ ಸಂತ-ಶರಣರು, ಹರ, ಗುರು, ಚರಮೂರ್ತಿಗಳು, ಗಣ್ಯರು, ಅಧ್ಯಾತ್ಮ ಪ್ರವಚನ ಶ್ರವಣಾಸಕ್ತರು, ಸ್ಥಳೀಯ ಈಶ್ವರ ಭಜನಾ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು, ಮತ್ತೀತರರು ಇದ್ದರು. ಬಸವರಾಜ ಪಣದಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉರ್ದು ಮುಸ್ಲಿಂರಿಗಷ್ಟೇ ಸೀಮಿತವಲ್ಲ ಜನಸಾಮಾನ್ಯರ ಭಾಷೆ
2 ಕೋಟಿ ವಂಚನೆ ಪ್ರಕರಣ: ಶರವಣ ಅಂದರ್