ಅಂಗನವಾಡಿಗಾಗಿ ಭೂಮಿ ದಾನ

KannadaprabhaNewsNetwork |  
Published : Dec 22, 2024, 01:32 AM IST
21ಎಚ್ಎಸ್ಎನ್5 : ಭೂಮಿಯ ದಾನ ಮಾಡಿದ ಪತ್ರವನ್ನು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಹಸ್ತಾಂತರಿಸಲಾಯಿತು. | Kannada Prabha

ಸಾರಾಂಶ

ಕೇರಳಾಪುರದ ನಿವಾಸಿಯಾದ ಹಾಗೂ ಕೇರಳಾಪುರ ಗ್ರಾಮಪಂಚಾಯ್ತಿ ಮಾಜಿ ಅಧ್ಯಕ್ಷರೂ ಆದ ಡಿ ಮಂಜುನಾಥ್ ಅವರು ಕೇರಳಾಪುರದಲ್ಲಿ ಜನತಾ ಬಡಾವಣೆಗೆ ಹೊಸದಾಗಿ ಮಂಜೂರಾಗಿರುವ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲು ೩೦*೪೦ ಅಳತೆಯ ಸುಮಾರು ೩೦ ಲಕ್ಷ ಬೆಲೆಬಾಳುವ ನಿವೇಶನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹೆಸರಿಗೆ ದಾನ ನೀಡಿದ್ದಾರೆ.

ಬಸವಾಪಟ್ಟಣ: ಕೇರಳಾಫುರದ ನಿವಾಸಿಯಾದ ಹಾಗೂ ಕೇರಳಾಪುರ ಗ್ರಾಮಪಂಚಾಯ್ತಿ ಮಾಜಿ ಅಧ್ಯಕ್ಷರೂ ಆದ ಡಿ ಮಂಜುನಾಥ್ ಅವರು ಕೇರಳಾಪುರದಲ್ಲಿ ಜನತಾ ಬಡಾವಣೆಗೆ ಹೊಸದಾಗಿ ಮಂಜೂರಾಗಿರುವ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲು ೩೦*೪೦ ಅಳತೆಯ ಸುಮಾರು ೩೦ ಲಕ್ಷ ಬೆಲೆಬಾಳುವ ನಿವೇಶನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹೆಸರಿಗೆ ದಾನ ನೀಡಿದ್ದಾರೆ.

ಭೂದಾನ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ವೆಂಕಟೇಶ್‌ರವರು ಸ್ವೀಕರಿಸಿ ಮಂಜುನಾಥ್‌ರವರ ಕಾರ್ಯ ಶ್ಲಾಘನೀಯವಾದುದು ಮತ್ತು ಮಾದರಿ ಎಂದು ತಿಳಿಸಿದರು. ಅಲ್ಲದೆ ಕೇರಳಾಪುರ ಗ್ರಾಮ ಪಂಚಾಯ್ತಿ ಗ್ರಾಮಸಭೆಯಲ್ಲಿ ಭೂಮಿದಾನ ನೀಡಿದ ಮಂಜುನಾಥ್‌ರವರನ್ನು ಸನ್ಮಾನಿಸಲಾಯಿತು.

ಇದೇ ವೇಳೆ ಗ್ರಾಮಪಂಚಾಯ್ತಿ ಅಧ್ಯಕ್ಷೆ ಗಂಗಾಮಣಿ, ಉಪಾಧ್ಯಕ್ಷರಾದ ಚಂದ್ರು, ಸದಸ್ಯರಾದ ಕೆ.ಎಂ ಶಿವಣ್ಣ ಗ್ರಾಮಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಲೋಕೇಶ್, ಇತರೆ ಸದಸ್ಯರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ