ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಸವಣ್ಣನ ಉತ್ಸವದ ಜೊತೆ ಕತ್ತೆ ಮೆರವಣಿಗೆ ನಡೆಸಿ ಬಸವನ ಮೂರ್ತಿ ಮತ್ತು ಕತ್ತೆಗೆ ಮಾರ್ಗದ ಉದ್ದಕ್ಕೂ ಪೂಜೆ ಸಲ್ಲಿಸಿದರು. ಉಯ್ಯೋ ಉಯ್ಯೋ ಮಳೆರಾಯ ಹೂವಿನ ತೋಟಕ್ಕೆ ನೀರಿಲ್ಲ. ಬಾರೋ ಬಾರೋ ಮಳೆರಾಯ ಬಾಳೆ ತೋಟಕೆ ನೀರಿಲ್ಲ ಎಂದು ಹಾಡುವ ಮೂಲಕ ಮಳೆರಾಯನನ್ನು ಪ್ರಾರ್ಥನೆ ಮಾಡಿದರು.
ಬಸವನ ಉತ್ಸವ ಮೂರ್ತಿ ಹೊತ್ತ ಹಾಗೂ ಮೆರವಣಿಗೆಯ ಜೊತೆ ಸಾಗಿದ ಯುವಕರಿಗೆ ಪ್ರತಿ ಮನೆಯಿಂದ ಒಂದೊಂದು ಬಿಂದಿಗೆ ನೀರು ಸುರಿಯಲಾಯಿತು. ಮೆರವಣಿಗೆ ಮುಗಿದ ಬಳಿಕ ಊರಿನ ಹೊರಗೆ ಮರದ ಬುಡದಲ್ಲಿ ದೇವರನ್ನು ವಿಸರ್ಜಿಸಿದರು. ಗ್ರಾಮದ ಮನೆಗಳಲ್ಲಿ ಸಂಗ್ರಹಿಸಿದ್ದ ದವಸ ಧಾನ್ಯಗಳಿಂದ ಅಡುಗೆ ಸಿದ್ದಪಡಿಸಿ ಸಾಮೂಹಿಕವಾಗಿ ಊಟ ಮಾಡಿದರು.ಮೆರವಣಿಗೆಯಲ್ಲಿ ಯಜಮಾನ್ ಧರ್ಮಣ್ಣ, ವಿಜಯಕುಮಾರ್, ಗಿರೀಶ್ಕುಮಾರ್, ಶಂಕರ್, ನಿಂಗೇಗೌಡ, ಸಿ.ಆರ್. ಶಂಕರ್, ಮಂಜು, ಕುಮಾರ ಸೇರಿದಂತೆ ಗ್ರಾಮಸ್ಥರು ಇದ್ದರು.
ಕನ್ನಡಪ್ರಭ ವಾರ್ತೆ ಮಂಡ್ಯದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರಿಕೆಯಾಗುತ್ತಿರುವುದರಿಂದ ನಗರದ ಹೊರ ವಲಯದಲ್ಲಿರುವ ಕೋಣನಹಳ್ಳಿ ಕೆರೆ ಸಂಪೂರ್ಣ ಬತ್ತಿಹೋಗಿದೆ. ಬೇಸಿಗೆಯಲ್ಲಿಯೂ ಬತ್ತದೆ ತನ್ನೊಡಲಿನಲ್ಲಿ ನೀರು ತುಂಬಿಸಿಕೊಂಡಿರುತ್ತಿದ್ದ ಕೆರೆ ಈಗ ಬಟಾಬಯಲಿನಂತೆ ಕಾಣುತ್ತಿದೆ. ಮೈಷುಗರ್ ಕಾರ್ಖಾನೆಗೆ ಕೋಣನಹಳ್ಳಿ ಕೆರೆಯಿಂದ ನೀರು ಪೂರೈಕೆಯಾಗುತ್ತಿದ್ದು, ಮಳೆ ಬಾರದಿರುವುದು, ನಾಲೆಗಳಲ್ಲಿ ನೀರು ಹರಿಯದಿರುವುದರಿಂದ ಸಂಪೂರ್ಣವಾಗಿ ಒಣಗಿನಿಂತಿದೆ.