ಹಬ್ಬ ಸಂಭ್ರಮ ಇತರರಿಗೆ ಸಮಸ್ಯೆ ಉಂಟು ಮಾಡದಿರಲಿ: ರಾಜೇಶ್‌ ಕೋಟ್ಯಾನ್‌

KannadaprabhaNewsNetwork |  
Published : Sep 02, 2024, 02:07 AM IST
ಚಿತ್ರ.1: ಗೌರಿ ಗಣೇಶ ಆಚರಣಾ ಪೂರ್ವ ನಿಯೋಜಿತ ಸಭೆಯಲ್ಲಿ ಕುಶಾಲನಗರ ವೃತ್ತನಿರೀಕ್ಷಕರಾದ ರಾಜೇಶ್‌ಕೋಟ್ಯಾನ್ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಶ್ರೀ ಗೌರಿ ಗಣೇಶ ಆಚರಣೆ ಸಮಿತಿಗಳ ಪೂರ್ವಭಾವಿ ಸಭೆ ನಡೆಯಿತು. ಸುಂಟಿಕೊಪ್ಪ ಪೊಲೀಸ್‌ ಠಾಣಾಧಿಕಾರಿ ಚಂದ್ರಶೇಖರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಯಾವುದೇ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ ಧಾರ್ಮಿಕ ಮೌಲ್ಯತೆಗೆ ಧಕ್ಕೆ ಉಂಟಾಗದಂತೆ ಮೂಲತೆಯನ್ನು ಗಮನದಲ್ಲಿರಿಸಿಕೊಂಡರೇ ಹಬ್ಬದ ಆಚರಣೆಗೆ ಅರ್ಥ ಬರುತ್ತದೆ. ನಾವು ಆಚರಿಸುವ ಹಬ್ಬದ ವಿಶೇಷತೆ, ಹರುಷದಲ್ಲಿ ಇತರರಿಗೆ ನೋವು ಸಂಕಷ್ಟಗಳನ್ನು ತಂದಿಡುತ್ತಿರುವುದು ವಿಷಾದ ಸಂಗತಿ ಎಂದು ಕುಶಾಲನಗರ ವೃತ್ತ ನಿರೀಕ್ಷಕ ರಾಜೇಶ್‌ ಕೋಟ್ಯಾನ್ ಹೇಳಿದರು.

ಗುಂಡುಗುಟ್ಟಿ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಶ್ರೀ ಗೌರಿ ಗಣೇಶ ಆಚರಣಾ ಸಮಿತಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಡಿ.ಜೆ. ಹಿರಿಯ ಮತ್ತು ಪುಟ್ಟ ಕಂದಮ್ಮಗಳ ಜೀವಕ್ಕೆ ಮಾರಕವಾಗುತ್ತಿದೆ. ಗೃಹೋಪಯೋಗಿ ವಸ್ತು, ಮನೆಗಳಿಗೆ ಹಾನಿಯಾಗುತ್ತದೆ. ಆಯೋಜಕರು ಇದರ ಬಗ್ಗೆ ಗಮನಹರಿಸಿ ಡಿ.ಜೆ.ಗಳಿಗೆ ಆದ್ಯತೆ ನೀಡದಿರುವಂತೆ ತಿಳಿಸಿದರು.

ಸರ್ಕಾರವು ನೀಡಿರುವ ಮಾರ್ಗಸೂಚಿಗಳನ್ನು ಗ್ರಾಮಗಳಲ್ಲಿ ಶ್ರೀ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಆಯೋಜಕ ಸಮಿತಿಯವರು ಪೊಲೀಸ್‌ ಠಾಣೆ ಸೇರಿದಂತೆ ವಿವಿಧ ಇಲಾಖೆಗಳಿಂದ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಂಡಿರಬೇಕು. ಮುಂಜಾಗೃತ ಕ್ರಮವಾಗಿ ಶ್ರೀ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಸ್ಥಳದಲ್ಲಿ ಸಿಸಿಕ್ಯಾಮರಗಳನ್ನು ಅಳವಡಿಸುವುದರಿಂದ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಸಹಕರಿಯಾಗಲಿದೆ ಎಂದರು.

ಪ್ರತಿಷ್ಠಾಪನಾ ವಿದ್ಯುತ್ ಸಂಪರ್ಕವನ್ನು ಅಳವಡಿಸಿಕೊಳ್ಳುವಾಗ ಸೂಕ್ಷ್ಮತೆಯನ್ನು ಗಮನದಲ್ಲಿ ಇರಿಸಿಕೊಳ್ಳಬೇಕು. ಶ್ರೀ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ ಸ್ಥಳದಲ್ಲಿ ಸಮಿತಿಯ ಈರ್ವರು ಪದಾಧಿಕಾರಿಗಳು ಕಾವಲು ಇರಿಸುವಂತೆ ಸೂಚಿಸಿದರು. ಸ್ಥಳದ ಪೂರ್ವಪರ ಮಾಹಿತಿಯನ್ನು ಪಡೆದಿರಬೇಕು, ವಿಸರ್ಜನೆಯ ವೇಳೆ ನುರಿತ ಈಜು ಬಲ್ಲವರು, ಅವರಿಗೆ ಸೂಕ್ತ ಭದ್ರತೆಯ ಜಾಕಿಟ್ ಕಡ್ಡಾಯವಾಗಿ ತೊಟ್ಟಿರಬೇಕು. ಮೂರ್ತಿಗಳ ವಿಸರ್ಜಿನೆಯ ವೇಳೆ ಅಲಂಕೃತ ಮಂಟಪ ಮೆರವಣಿಗೆ ತೆರಳುವ ಮಾರ್ಗಗಳ ಮಾಹಿತಿ ನಿಗದಿಗೊಂಡಿರುವ ಸಮಯವನ್ನು ಪೊಲೀಸ್ ಠಾಣೆಗೆ ತಿಳಿಸುವಂತೆ ಅವರು ಹೇಳಿದರು.

ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್, ಸರ್ಕಾರದಿಂದ ಹೊರಡಿಸಿರುವ ಕಾನೂನು ಅನುಮತಿ ಪತ್ರಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾಹಿತಿ ನೀಡಿದರು.

ಹರದೂರು, ನಾಕೂರು ಶಿರಂಗಾಲ,7ನೇ ಹೊಸಕೋಟೆ, ಕಂಬಿಬಾಣೆ,ಕೊಡಗರಹಳ್ಳಿ, ಹೆರೂರು, ಕೆದಕಲ್, ಹೊರೂರು, ಮತ್ತಿಕಾಡು, ಭೂತನಕಾಡು, ಆಯೋಜಕರು ಪೊಲೀಸ್ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ