ಸಾರ್ವಜನಿಕ ಗಣೇಶೋತ್ಸವ ಅರ್ಥ ಕಳೆದುಕೊಳ್ಳದಿರಲಿ-ಶಾಸಕ ಮಾನೆ

KannadaprabhaNewsNetwork |  
Published : Sep 17, 2024, 12:50 AM IST
ಪೊಟೋ ಪೈಲ್ ನೇಮ್ ೧೬ಎಸ್‌ಜಿವಿ೧  ಶಿಗ್ಗಾಂವಿ ತಾಲೂಕಿನ ಹುನಗುಂದ ಗ್ರಾಮದಲ್ಲಿ ನಡೆದ ಗಣೇಶೋತ್ಸವದ ಸಾಂಸ್ಕೃತಿಕ ಸಮಾರಂಭದಲ್ಲಿ ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಮಾತನಾಡಿದರು. ಕಾಂಗ್ರೆಸ್ ಮುಖಂಡ ಯಾಸೀರ್‌ಖಾನ್ ಪಠಾಣ ಇದ್ದರು. | Kannada Prabha

ಸಾರಾಂಶ

ಆ ದಿನಗಳಲ್ಲಿ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಕಿಚ್ಚು ಹಚ್ಚಿದ್ದ ಸಾರ್ವಜನಿಕ ಗಣೇಶೋತ್ಸವ ಈ ದಿನಗಳಲ್ಲಿ ಅರ್ಥ ಕಳೆದುಕೊಳ್ಳದಿರಲಿ ಎಂದು ಶಾಸಕ ಶ್ರೀನಿವಾಸ ಮಾನೆ ಆಶಯ ವ್ಯಕ್ತಪಡಿಸಿದರು.

ಶಿಗ್ಗಾಂವಿ: ಆ ದಿನಗಳಲ್ಲಿ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಕಿಚ್ಚು ಹಚ್ಚಿದ್ದ ಸಾರ್ವಜನಿಕ ಗಣೇಶೋತ್ಸವ ಈ ದಿನಗಳಲ್ಲಿ ಅರ್ಥ ಕಳೆದುಕೊಳ್ಳದಿರಲಿ ಎಂದು ಶಾಸಕ ಶ್ರೀನಿವಾಸ ಮಾನೆ ಆಶಯ ವ್ಯಕ್ತಪಡಿಸಿದರು.

ತಾಲೂಕಿನ ಹುನಗುಂದ ಗ್ರಾಮದ ಮರಾಠಾಗಲ್ಲಿಯ ಗಜಾನನ ಯುವಕ ಮಂಡಳದ ಆಶ್ರಯದಲ್ಲಿ ಗಣೇಶೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಾರ್ವಜನಿಕ ಗಣೇಶೋತ್ಸವದ ಹಿನ್ನೆಲೆಯನ್ನು ಪ್ರತಿಯೊಬ್ಬರೂ ಸಹ ಅರಿತುಕೊಳ್ಳಬೇಕಿದೆ. ಪರಸ್ಪರ ಬಾಂಧವ್ಯ ಬೆಸೆದು, ಸಂಬಂಧಗಳನ್ನು ಗಣೇಶೋತ್ಸವ ಹೆಚ್ಚಿಸಲಿದೆ. ಅರ್ಥಪೂರ್ಣ ಗಣೇಶೋತ್ಸವಕ್ಕೆ ಪ್ರತಿಯೊಬ್ಬರೂ ಸಹ ಸಂಕಲ್ಪಿಸಬೇಕಿದೆ ಎಂದು ಹೇಳಿದ ಅವರು ಇಂದಿನ ಆಧುನಿಕ ದಿನಗಳಲ್ಲಿ ಮೊಬೈಲ್ ಮೋಡಿ ಮಾಡಿದೆ. ಮಕ್ಕಳಿಂದ ವೃದ್ಧರವರೆಗೂ ಮೊಬೈಲ್‌ಗೆ ಅಂಟಿಕೊಂಡಿರುವುದನ್ನು ಕಾಣುತ್ತಿದ್ದೇವೆ. ಸಾಂಸ್ಕೃತಿಕ ಚಟುವಟಿಕೆಗಳು ಕಳಾಹೀನವಾಗುತ್ತಿವೆ.ಗಣೇಶೋತ್ಸವದ ನೆಪದಲ್ಲಿ ಜಾನಪದ ಕಲೆ, ಸಂಸ್ಕೃತಿ, ಸಂಪ್ರದಾಯ ಉಳಿಸಿ, ಬೆಳೆಸುವ ಕೆಲಸ ನಡೆಯಬೇಕಿದೆ ಎಂದರು.ಕಾಂಗ್ರೆಸ್ ಮುಖಂಡ ಯಾಸೀರ್‌ಖಾನ್ ಪಠಾಣ ಮಾತನಾಡಿ, ದೇಶಭಕ್ತಿ ಹಾಗೂ ಏಕತಾ ಶಕ್ತಿಗೆ ಗಣೇಶೋತ್ಸವ ಮುನ್ನುಡಿ ಬರೆದಿದೆ. ಇಂದಿನ ಯುವ ಸಮುದಾಯಕ್ಕೆ ಸಂಸ್ಕಾರ ಮತ್ತು ಈ ನೆಲದ ಪರಂಪರೆ ಕುರಿತು ಮಾಹಿತಿ ನೀಡುವ ಕೆಲಸವಾಗಬೇಕಿದೆ. ಹಬ್ಬಗಳು, ನಮ್ಮ ಸಂಪ್ರದಾಯ, ಆಚಾರ, ವಿಚಾರಗಳು ಎಲ್ಲ ಸಮಾಜಗಳನ್ನು ಬೆಸೆಯುವಂತಾಗಬೇಕಿದೆ ಎಂದರು.ಜಿಪಂ ಮಾಜಿ ಸದಸ್ಯ ಗುಡ್ಡಪ್ಪ ಜಲದಿ, ಮುಖಂಡರಾದ ಮಂಜುನಾಥ ಹಿರೂರ, ಪ್ರದೀಪ ಇಂಗಲಗಿ, ಚಂದ್ರಶೇಖರ ಮಾನೋಜಿ, ಚಂದ್ರಶೇಖರ ಮಾಯಣ್ಣನವರ, ರಿಯಾಜ್ ಗೌಳಿ, ಯುನುಸ್‌ಅಹ್ಮದ್ ಕಲ್ಯಾಣ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು