ಬಾಯಿರುಚಿಗಾಗಿ ಆರೋಗ್ಯ ಕೆಡಿಸಿಕೊಳ್ಳದಿರಿ

KannadaprabhaNewsNetwork |  
Published : Feb 10, 2026, 02:15 AM IST
ನವೋದಯ ವಿದ್ಯಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಆಹಾರ ಮೇಳವನ್ನು ಶಾಸಕ ಬಾಲಕೃಷ್ಣ ಉದ್ಘಾಟಿಸಿದರು. | Kannada Prabha

ಸಾರಾಂಶ

ಹೋಟೆಲ್ ಮತ್ತು ಬೀದಿ ಬದಿ ಫಾಸ್ಟ್ ಫುಡ್‌ಗಳನ್ನು ಗ್ರಾಹಕರ ಸೆಳೆಯಲು ಪದಾರ್ಥಗಳಿಗೆ ವಿಶೇಷವಾಗಿ ಆಹಾರ ಬಣ್ಣಗಳನ್ನು ಬಳಸಲಾಗುತ್ತದೆ. ಆಹಾರ ಸುರಕ್ಷತಾ ಟೇಸ್ಟಿಂಗ್ ಪೌಡರ್, ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ಹೀಗಾಗಿ ಆಹಾರ ಸುರಕ್ಷತಾ ಅಧಿಕಾರಿಗಳು ನಿಗಾ ಇಡಬೇಕು. ಅಂತಹ ಘಟಕಗಳನ್ನು ಬಂದ್ ಮಾಡಿಸುವ ಮೂಲಕ ಜನರ ಆರೋಗ್ಯ ಕಾಪಾಡಲು ಮುಂದಾಗಬೇಕು ಎಂದರು. ಶಾಲೆಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಮಕ್ಕಳಲ್ಲಿ ವ್ಯವಹಾರ ಜ್ಞಾನ ಮೂಡಲಿದೆ. ಸಾಮಾನ್ಯ ಜ್ಞಾನವನ್ನೂ ವೃದ್ಧಿಸಿಕೊಳ್ಳಬಹುದಾಗಿದ್ದು ಲಾಭ, ನಷ್ಟ ಲೆಕ್ಕಾಚಾರದ ಅರಿವು ಮೂಡುತ್ತದೆ ಎಂದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಪ್ರಸ್ತುತ ಆಹಾರದಲ್ಲಿ ಕಲಬೆರಕೆ ಎಲ್ಲ ಕಡೆ ನಡೆಯುತ್ತಿದ್ದು, ಬಾಯಿರುಚಿಯ ಆಸೆಗೆ ಬಿದ್ದು ಆರೋಗ್ಯ ಕೆಡಿಸಿಕೊಳ್ಳುವ ಮಾರ್ಗವನ್ನು ದೂರ ಮಾಡಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

ಪಟ್ಟಣದ ನವೋದಯ ವಿದ್ಯಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಆಹಾರ ಮೇಳ ಉದ್ಘಾಟಿಸಿ ಮಾತನಾಡಿ, ವಿಷಕಾರಿ ಅಂಶಗಳಿರುವ ನಿಷೇಧಿತ ಪದಾರ್ಥಗಳನ್ನು ಒಳ್ಳೆಯ ಪದಾರ್ಥಗಳೊಂದಿಗೆ ಮಾರಾಟ ಮಾಡುವುದರಿಂದ ದೀರ್ಘಕಾಲಿಕ ತೊಂದರೆಗೆ ಒಳಗಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಹೋಟೆಲ್ ಮತ್ತು ಬೀದಿ ಬದಿ ಫಾಸ್ಟ್ ಫುಡ್‌ಗಳನ್ನು ಗ್ರಾಹಕರ ಸೆಳೆಯಲು ಪದಾರ್ಥಗಳಿಗೆ ವಿಶೇಷವಾಗಿ ಆಹಾರ ಬಣ್ಣಗಳನ್ನು ಬಳಸಲಾಗುತ್ತದೆ. ಆಹಾರ ಸುರಕ್ಷತಾ ಟೇಸ್ಟಿಂಗ್ ಪೌಡರ್, ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ಹೀಗಾಗಿ ಆಹಾರ ಸುರಕ್ಷತಾ ಅಧಿಕಾರಿಗಳು ನಿಗಾ ಇಡಬೇಕು. ಅಂತಹ ಘಟಕಗಳನ್ನು ಬಂದ್ ಮಾಡಿಸುವ ಮೂಲಕ ಜನರ ಆರೋಗ್ಯ ಕಾಪಾಡಲು ಮುಂದಾಗಬೇಕು ಎಂದರು. ಶಾಲೆಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಮಕ್ಕಳಲ್ಲಿ ವ್ಯವಹಾರ ಜ್ಞಾನ ಮೂಡಲಿದೆ. ಸಾಮಾನ್ಯ ಜ್ಞಾನವನ್ನೂ ವೃದ್ಧಿಸಿಕೊಳ್ಳಬಹುದಾಗಿದ್ದು ಲಾಭ, ನಷ್ಟ ಲೆಕ್ಕಾಚಾರದ ಅರಿವು ಮೂಡುತ್ತದೆ ಎಂದರು.

ತಹಸೀಲ್ದಾರ್ ಜಿ.ಎಸ್.ಶಂಕರಪ್ಪ ಮಾತನಾಡಿದರು. ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೆ.ಎನ್.ಅನಿಲ್, ಪ್ರಾಂಶುಪಾಲ ಎ.ಟಿ.ಸಂಜಯ್‌ಕುಮಾರ್, ಸುರೇಶ್, ನವೋದಯ ವಿದ್ಯಾಸಂಸ್ಥೆ ಅಧ್ಯಕ್ಷ ಸಿ.ಜೆ.ಮಂಜುನಾಥ್, ಗೌರವಾಧ್ಯಕ್ಷ ಸಿ.ಎಸ್. ಶೇಷಶಯನ, ಉಪಾಧ್ಯಕ್ಷ ಎಸ್.ಪ್ರಮೋದ್, ಕಾರ್‍ಯದರ್ಶಿ ಕೆ.ಪಿ.ಶರತ್, ಖಜಾಂಚಿ ಜಲೇಂದ್ರ, ನಿರ್ದೇಶಕ ಆನಂದ್ ಕಾಳೇನಹಳ್ಳಿ ಇತರರಿದ್ದರು.

ಬಗೆ ಬಗೆಯ ತಿಂಡಿ ತಿನಿಸುಗಳು:

ಪ್ರಾಥಮಿಕ ಶಾಲೆಯಿಂದ ಪದವಿಪೂರ್ವ ಕಾಲೇಜುವರೆಗಿನ ವಿದ್ಯಾರ್ಥಿಗಳು ಆಹಾರ ಮೇಳದಲ್ಲಿ ಭಾಗವಹಿಸಿದ್ದರು. ಬಗೆಬಗೆಯ ಆಹಾರ ತಿನಿಸುಗಳು ಬಾಯಲ್ಲಿ ನೀರೂರುವಂತೆ ಮಾಡಿದವು. ಎಳನೀರು, ಜ್ಯೂಸ್, ವೆಜ್ ಬಿರಿಯಾನಿ, ಪಾನಿಪುರಿ, ಮಜ್ಜಿಗೆ, ಹಣ್ಣುಗಳು, ಒಗ್ಗರಣೆ ಪುರಿ, ಜಾಮೂನು, ರಾಗಿರೊಟ್ಟಿ ಹುಚ್ಚೆಳ್ಳುಪುಡಿ, ಅಕ್ಕಿ ಮತ್ತು ರಾಗಿ ಒತ್ತುಶಾವಿಗೆ, ಮುದ್ದೆಊಟ, ವಡಾಪಾವ್ ಮುಂತಾದ ತಿನಿಸುಗಳನ್ನು ಮಕ್ಕಳು ಮಾರಾಟ ಮಾಡಿ ಗಮನ ಸೆಳೆದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೋಹಿತ್ ವೇಮುಲ ಕಾಯ್ದೆ ಅನುಷ್ಠಾನಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
ನಿಮ್ಮ ಬ್ಯಾಂಕ್‌ ಖಾತೆ ವಿವರ ಕೊಟ್ಟೀರಾ ಜೋಕೆ!