ರಾಧಾಕೃಷ್ಣ ಪರವಾಗಿ ಮನೆಮನೆಗೆ ತೆರಳಿ ಮತಯಾಚನೆ

KannadaprabhaNewsNetwork |  
Published : Apr 29, 2024, 01:34 AM IST
ಚಿತ್ತಾಪುರ ಪಟ್ಟಣದ ವಾರ್ಡ ನಂ ೩ ರಲ್ಲಿ ಕಾಂಗ್ರೆಸ್ ಲೊಕಸಭೆ ಚುನಾವಣೆ ಅಭ್ಯರ್ಥಿ ರಾಧಾಕೃಷ್ಣ ದೊಡ್ಮನಿ ಅವರ ಪರವಾಗಿ ಪುರಸಭೆ ಸದಸ್ಯ ಶೀಲಾ ಕಾಶಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. | Kannada Prabha

ಸಾರಾಂಶ

ಲೊಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯಾಗಿರುವ ರಾಧಾಕೃಷ್ಣ ದೊಡ್ಮನಿ ಅವರಿಗೆ ಮತವನ್ನು ನೀಡಿದಲ್ಲಿ ಇನ್ನು ಅಭಿವೃದ್ದಿಗೆ ಅನುಕೂಲವಾಗುತ್ತದೆ ಎಂದು ಪುರಸಭೆ ಸದಸ್ಯೆ ಶೀಲಾ ಕಾಶಿ ಹೇಳಿದರು.

ಕನ್ನಡ ಪ್ರಭ ವಾರ್ತೆ ಚಿತ್ತಾಪುರ

ಕಾಂಗ್ರೆಸ್ ಪಕ್ಷವು ನುಡಿದಂತೆ ನಡೆಯುವ ಸರ್ಕಾರವಾಗಿದ್ದು ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ನೀಡಿದ್ದ ೫ ಗ್ಯಾರಂಟಿಗಳನ್ನು ಜಾರಿಗೊಳಿಸಿ ರಾಜ್ಯದ ಪ್ರತಿ ಕುಟುಂಬಕ್ಕೆ ಅನುಕೂಲ ಮಾಡಿಕೊಟ್ಟಿದೆ ಈಗ ಲೊಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯಾಗಿರುವ ರಾಧಾಕೃಷ್ಣ ದೊಡ್ಮನಿ ಅವರಿಗೆ ಮತವನ್ನು ನೀಡಿದಲ್ಲಿ ಇನ್ನು ಅಭಿವೃದ್ದಿಗೆ ಅನುಕೂಲವಾಗುತ್ತದೆ ಎಂದು ಪುರಸಭೆ ಸದಸ್ಯೆ ಶೀಲಾ ಕಾಶಿ ಹೇಳಿದರು.

ಪಟ್ಟಣದ ವಾರ್ಡ ನಂ ೩ ರಲ್ಲಿ ಬೂತ್ ನಂ ೭೧ ರಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ ನಂತರ ಅವರು ಮಾತನಾಡಿ ರಾಧಾಕೃಷ್ಣ ದೊಡ್ಮನಿ ಅವರು ಅಭಿವೃದ್ದಿಯ ಚಿಂತಕರಾಗಿದ್ದು ಅವರು ಆಯ್ಕೆಯಾದಲ್ಲಿ ಜಿಲ್ಲೆಯ ಅಭಿವೃದ್ದಿಗೆ ಹೆಚ್ಚಿನ ಬಲ ಬಂದಾಂತಾಗುತ್ತದೆ. ಅಲ್ಲದೇ ಮಹಾಲಕ್ಷ್ಮೀ ಯೊಜನೆಯಡಿಯಲ್ಲಿ ವರ್ಷಕ್ಕೆ ೧ ಲಕ್ಷ ರೂಪಾಯಿ, ಆರೊಗ್ಯದ ಹಕ್ಕಿನಲ್ಲಿ ೨೫ ಲಕ್ಷ ಆರೊಗ್ಯ ವಿಮೆ, ಶ್ರಮಿಕ ನ್ಯಾಯದಡಿಯಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ದಿನಕ್ಕೆ ೪೦೦ ವೇತನ ಹಾಗೂ ಇತರ ಯೊಜನೆಗಳನ್ನು ತನ್ನ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಹೊಸ ಗ್ಯಾರಂಟಿಗಳನ್ನು ನೀಡಿದೆ. ಅದಕ್ಕಾಗಿ ನಮ್ಮ ಪಕ್ಷದ ಅಭ್ಯರ್ಥಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಮುಡಬೂಳಕರ್, ನಾಗರಾಜ ರೆಡ್ಡಿ, ಶಾಂತಾ ಭಜಂತ್ರಿ, ಬಸವರಾಜ ತಳವಾರ, ರಾಘವೇಂದ್ರ ಬುರ್ಲಿ, ಅಭಯ ಮುಡಬೂಳಕರ್, ವಿಜಯೇಂದ್ರ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು