ರಾಜ್ಯದಲ್ಲಿ ಮತ್ತೆ ಡಬಲ್ ಇಂಜಿನ್ ಸರ್ಕಾರ: ಪ್ರಮೋದ್ ಸಾವಂತ್

KannadaprabhaNewsNetwork |  
Published : Apr 05, 2024, 01:01 AM IST
 ಪ್ರಮೋದ್ ಸಾವಂತ್ | Kannada Prabha

ಸಾರಾಂಶ

ಕಾಂಗ್ರೆಸ್ ಜಾತಿ ಆಧಾರದ ಮೇಲೆ ರಾಜಕಾರಣ ಮಾಡಿದರೆ, ಬಿಜೆಪಿ ವಿಕಾಸದ ಮೇಲೆ ರಾಜಕಾರಣ ಮಾಡುತ್ತಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಟ ಸರ್ಕಾರವಾಗಿದೆ. ಕಾಂಗ್ರೆಸ್‌ನಿಂದ ದೇಶ ಪ್ರಗತಿಯತ್ತ ಸಾಗಲು ಎಂದಿಗೂ ಸಾಧ್ಯವಿಲ್ಲ. ಕರ್ನಾಟಕದ ೨೮ ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ದೇಶಾದ್ಯಂತ ೪೦೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಎನ್‌ಡಿಎ ಮೈತ್ರಿಕೂಟ ಜಯಗಳಿಸಲಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ ಮತ್ತೆ ರಚನೆಯಾಗಲಿದೆ. ಮತ್ತೆ ರಾಜ್ಯ ಅಭಿವೃದ್ಧಿಯತ್ತ ದಾಪುಗಾಲಿಡಲಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತಗೊಂಡಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು.

ಗುರುವಾರ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಜೆಡಿಎಸ್-ಬಿಜೆಪಿ ಬಹಿರಂಗ ಸಮಾವೇಶ ಉದ್ಘಾಟಿಸಿ ಮಾತನಾಡಿ, ಗೋವಾದಲ್ಲೂ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಅಭಿವೃದ್ಧಿಯಾಗಿದೆ. ಚುನಾವಣೆಯ ನಂತರ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಉರುಳಲಿದ್ದು, ಮತ್ತೆ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಕರ್ನಾಟಕದಲ್ಲಿ ರಚನೆಯಾಗಲಿದೆ ಎಂದು ವಿಶ್ವಾಸದಿಂದ ನುಡಿದರು.

ಕಾಂಗ್ರೆಸ್ ಜಾತಿ ಆಧಾರದ ಮೇಲೆ ರಾಜಕಾರಣ ಮಾಡಿದರೆ, ಬಿಜೆಪಿ ವಿಕಾಸದ ಮೇಲೆ ರಾಜಕಾರಣ ಮಾಡುತ್ತಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಟ ಸರ್ಕಾರವಾಗಿದೆ. ಕಾಂಗ್ರೆಸ್‌ನಿಂದ ದೇಶ ಪ್ರಗತಿಯತ್ತ ಸಾಗಲು ಎಂದಿಗೂ ಸಾಧ್ಯವಿಲ್ಲ. ಕರ್ನಾಟಕದ ೨೮ ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ದೇಶಾದ್ಯಂತ ೪೦೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಎನ್‌ಡಿಎ ಮೈತ್ರಿಕೂಟ ಜಯಗಳಿಸಲಿದೆ. ಕುಮಾರಸ್ವಾಮಿ ಅವರನ್ನು ಲೋಕಸಭೆಗೆ ಕಳುಹಿಸುವ ಮೂಲಕ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬಂತೆ ಮತ್ತೆ ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬರಬೇಕು. ನಾರಿ ಶಕ್ತಿ, ಯುವ ಶಕ್ತಿ, ಕಿಸಾನ್ ಶಕ್ತಿ ಮತ್ತು ಗರೀಬ್ ಕಲ್ಯಾಣ್ ಎಂಬ ನಾಲ್ಕು ಸ್ಥಂಭಗಳ ಸರ್ಕಾರ ಮುನ್ನಡೆಯಲು ಜನರು ಬೆಂಬಲ ನೀಡಬೇಕು ಎಂದರು.

ಕಾಂಗ್ರೆಸ್ ಸರ್ಕಾರ ಐವತ್ತು ವರ್ಷ ಮಾಡದೇ ಇರುವ ಕೆಲಸವನ್ನು ಮೋದಿ ಸರ್ಕಾರ ಹತ್ತು ವರ್ಷಗಳಲ್ಲಿ ಮಾಡಿದೆ. ಈ ವಿಷಯವಾಗಿ ರಾಹುಲ್ ಗಾಂಧಿ ಅವರು ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬರಲಿ. ದೇಶದಲ್ಲಿ ಕಾಂಗ್ರೆಸ್ ಇದ್ದ ಸಮಯದಲ್ಲಿ ಯಾವ ಅಭಿವೃದ್ಧಿ ಕೆಲಸಗಳಾಗಿವೆ ಹೇಳಲಿ ಎಂದು ಸವಾಲು ಹಾಕಿದರಲ್ಲದೆ, ಕ್ಲೀನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ ಸೇರಿದಂತೆ ಬಹಳಷ್ಟು ಕಾರ್ಯಕ್ರಮಗಳನ್ನು ಮೋದಿ ಜಾರಿಗೆ ತಂದಿದ್ದಾರೆ. ಹತ್ತು ವರ್ಷಗಳ ಹಿಂದೆ ೩೫೦ ಮೆಡಿಕಲ್ ಕಾಲೇಜು ಇದ್ದವು. ಈಗ ೭೫೦ ಕ್ಕೂ ಹೆಚ್ಚು ಕಾಲೇಜುಗಳನ್ನು ತೆರೆಯಲಾಗಿದೆ ಎಂದು ಹೇಳಿದರು.

ಬಿಜೆಪಿ -ಜೆಡಿಎಸ್ ಮೈತ್ರಿ ವಿಧಾನಸಭಾ ಚುನಾವಣೆಗೆ ಮುಂಚೆ ಆಗಿದ್ದಿದ್ದರೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುತ್ತಿದ್ದರು. ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ರಚನೆಯಾಗುತ್ತಿತ್ತು. ಕರ್ನಾಟಕದಲ್ಲಿ ಸೂಪರ್ ಸಿಎಂ, ಶಾಡೋ ಸಿಎಂ ರೀತಿ ಐದೈದು ಜನ ಸಿಎಂಗಳಿದ್ದಾರೆ ಎಂದು ಮೂದಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ