ಇರಾನ್‌ ಕನ್ನಡಿಗ ವಿದ್ಯಾರ್ಥಿಗಳ ಕರೆ ತರಲು ವಿದೇಶಾಂಗ ಸಚಿವರಿಗೆ ಡಾ. ಆರತಿ ಕೃಷ್ಣ ಪತ್ರ

KannadaprabhaNewsNetwork |  
Published : Jun 17, 2025, 01:39 AM IST
16ಆರತಿ | Kannada Prabha

ಸಾರಾಂಶ

ಇರಾನ್‌ ದೇಶದಲ್ಲಿ ನಮ್ಮ ರಾಜ್ಯದ ಸುಮಾರು 9 ವಿದ್ಯಾರ್ಥಿಗಳು ಇರಾನ್ ದೇಶದಲ್ಲಿ ವ್ಯಾಸಂಗ ಮಾಡುತಿದ್ದು, ಅವರನ್ನು ಮರಳಿ ದೇಶಕ್ಕೆ ಕರೆತರಲು ಕ್ರಮ ಕೈಗೊಳ್ಳಬೇಕು ಎಂದು ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ. ಆರತಿಕೃಷ್ಣ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಇಸ್ರೇಲ್ ಮತ್ತು ಇರಾನ್ ನಡುವೆ ನಿರ್ಮಾಣವಾಗಿರುವ ಯುದ್ಧ ಉದ್ವಿಗ್ನ ಪರಿಸ್ಥಿತಿಯಿಂದಾಗಿ, ಆ ದೇಶಗಳಲ್ಲಿ ನೆಲೆಸಿರುವ ವಿದೇಶಿಗರಿಗೆ ಆತಂಕ ಉಂಟು ಮಾಡಿದೆ. ಮುಖ್ಯವಾಗಿ ಇರಾನ್‌ ದೇಶದಲ್ಲಿ ನಮ್ಮ ರಾಜ್ಯದ ಸುಮಾರು 9 ವಿದ್ಯಾರ್ಥಿಗಳು ಇರಾನ್ ದೇಶದಲ್ಲಿ ವ್ಯಾಸಂಗ ಮಾಡುತಿದ್ದು, ಅವರನ್ನು ಮರಳಿ ದೇಶಕ್ಕೆ ಕರೆತರಲು ಕ್ರಮ ಕೈಗೊಳ್ಳಬೇಕು ಎಂದು ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ. ಆರತಿಕೃಷ್ಣ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಈ ವಿದ್ಯಾರ್ಥಿಗಳು ಇರಾನ್ ರಾಜದಾನಿಯಾದ ತೆಹರಾನ್ ನ ಸಮೀಪದಲ್ಲಿರುವ ಶಹೀದ್ ಬೆಹ್ಸ್ತಿ ಮೆಡಿಕಲ್ ಯುನಿವರ್ಸಿಟಿಯಲ್ಲಿ ವೈದ್ಯಕೀಯ ಶಿಕ್ಷಣ ಓದುತ್ತಿದ್ದು, ಅವರು ಈ ಯುದ್ಧ ಪರಿಸ್ಥಿತಿಯಿಂದಾಗಿ ಆತಂಕಕ್ಕೊಳಗಾಗಿದ್ದಾರೆ. ಅವರಲ್ಲಿ ಬೆಂಗಳೂರು ಮೂಲದ ನದೀಮ್ ಹುಸೇನ್ ಎಂಬವರು ಹಾಗೂ ಅವರ ಪೋಷಕರು ಅನಿವಾಸಿ ಭಾರತೀಯ ಸಮಿತಿಯನ್ನು ಸಂಪರ್ಕಿಸಿದ್ದು, ಕೂಡಲೇ ದೇಶಕ್ಕೆ ಹಿಂದಿರುಗಲು ಇಚ್ಛೆಯನ್ನು ವ್ಯಕ್ತಪಡಿಸಿರುತ್ತಾರೆ. ಅಲ್ಲದೆ, ಕನ್ನಡಿಗರರಾದ ನಾಸೀರ್ ಹುಸೇನ್, ಸೈಯದ್ ಮೊಹಮದ್ ತಾಖಿ, ಮೀರ್ ಎಸಮ್ ರಝ, ಅಬ್ಬಾಸ್ ಅಸ್ಕರಿ, ಸಯ್ಯದ್ ಮೊಹ್ಸಿನ್ ರಝ, ಮರ್ಯಮ್ ಫಾತೀಮಾ, ಡಾನಿಯಾ ಉಲ್ಫತ್, ಅಬ್ಬಾಸ್ ಅಲಿ ಅವರು ಕೂಡ ಅನಿವಾಸಿ ಭಾರತೀಯ ಸಮಿತಿಯನ್ನು ಸಂಪರ್ಕಿಸಿದ್ದಾರೆ. ಆದರೆ, ಇರಾನ್‌ನಿಂದ ಬೇರೆ ದೇಶಗಳಿಗೆ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಆದ್ದರಿಂದ ಹಿಂದಕ್ಕೆ ಬರಲಿಚ್ಛಿಸುತ್ತಿರುವ ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಡಾ. ಆರತಿಕೃಷ್ಣ ಇರಾನ್ ನಲ್ಲಿರುವ ರಾಜ್ಯದ ವಿದ್ಯಾರ್ಥಿಗಳನ್ನು ಕೂಡಲೇ ಮರಳಿ ಭಾರತಕ್ಕೆ ಕರೆತರಲು ಕ್ರಮಗಳನ್ನು ಕೈಗೊಳ್ಳುವಂತೆ ವಿದೇಶಾಂಗ ವ್ಯವಹಾರಗಳ ಸಚಿವವರನ್ನು ಕೋರಿದ್ದಾರೆ.ಇರಾನ್‌ನಲ್ಲಿ ಸುಮಾರು 6000 ಮಂದಿ ಭಾರತೀಯ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿದ್ದಾರೆ, ಅದರಲ್ಲಿ ಸುಮಾರು 2000 ಮಂದಿಯನ್ನು ಈಗಾಗಲೇ ಅಕ್ಕಪಕ್ಕದ ದೇಶಗಳಿಗೆ ಕಳುಹಿಸಿ, ಅಲ್ಲಿಂದ ಭಾರತಕ್ಕೆ ಕರೆ ತರುವ ಕೆಲಸವನ್ನು ಭಾರತೀಯ ಧೂತವಾಸ ಈಗಾಗಲೇ ಆರಂಭಿಸಿದ್ದಾರೆ. ರಾಜ್ಯದಿಂದ ಈ 9 ವಿದ್ಯಾರ್ಥಿಗಳಲ್ಲದೆ ಇನ್ನೂ ಸಾಕಷ್ಟು ಮಂದಿ ಅಲ್ಲಿದ್ದಾರೆ. ಅವರು ಹಿಂದಕ್ಕೆ ಬರಲಿಚ್ಛಿಸಿದರೂ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ‘ಕನ್ನಡಪ್ರಭ’ಕ್ಕೆ ಡಾ. ಆರತಿ ಕೃಷ್ಣ ತಿಳಿಸಿದ್ದಾರೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ