ಹೊನ್ನಾವರ: ಅಂಬೇಡ್ಕರ್ ಅವರ ಜೀವನದ ತತ್ವವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಪ್ರವೀಣ್ ಕರಾಂಡೆ ಅಭಿಪ್ರಾಯಪಟ್ಟರು.
ಎಸ್ಡಿಎಂ ಕಾಲೇಜಿನ ಉಪನ್ಯಾಸಕ ನಾಗರಾಜ್ ಹೆಗಡೆ ಅಪಗಾಲ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ, ಬದುಕು ಹಾಗೂ ಅವರು ಎದುರಿಸಿದ ಸವಾಲುಗಳು ಮತ್ತು ಡಾ. ಬಾಬು ಜಗನ್ ಜೀವನ್ ಅವರ ಕೊಡುಗೆ ಕುರಿತು ಉಪನ್ಯಾಸ ನೀಡಿದರು.
ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಅಣ್ಣಪ್ಪ ನಾಯ್ಕ ಮಾತನಾಡಿ, ಇಂದಿನ ದಿನವನ್ನು ಸಮಾನತೆಯ ದಿನ ಎಂದು ಕರೆಯಬೇಕು. ಅವರು ಸಮಾನತೆಗಾಗಿ ತುಂಬಾ ಹೋರಾಟ ನಡೆಸಿದವರು. ಸಾಮಾಜಿಕ ನ್ಯಾಯವನ್ನು ಸಂವಿಧಾನದ ಮೂಲಕ ಎಲ್ಲರಿಗೂ ನೀಡಿದ್ದಾರೆ ಎಂದರು.ಎಸ್ಎಸ್ಎಲ್ಸಿ ೨೦೨೪-೨೫ನೇ ಸಾಲಿನ ಹತ್ತನೇ ತರಗತಿಯಲ್ಲಿ ಉತ್ತಮ ಸಾಧನೆ ವಸತಿ ನಿಲಯದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಪಪಂ ಮುಖ್ಯಾಧಿಕಾರಿ ಏಸು ಬೆಂಗಳೂರು, ಮಂಕಿ ಪಪಂ ಮುಖ್ಯಾಧಿಕಾರಿ ಕೇಶವ್ ಚೌಗಲೆ, ತಾಲೂಕು ಶಿಕ್ಷಣಾಧಿಕಾರಿ ಜಿ.ಎಸ್. ನಾಯ್ಕ, ತಾಲೂಕು ಆರೋಗ್ಯ ವೈದ್ಯಾಧಿಕಾರಿ ಉಷಾ ಹಾಸ್ಯಗಾರ ಉಪಸ್ಥಿತರಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸುಮಂಗಲಾ ಭಟ್ ಸ್ವಾಗತಿಸಿದರು. ಮೆಟ್ರಿಕ್ ಪೂರ್ವ ಬಾಲಕಿಯರು ಪ್ರಾರ್ಥಿಸಿದರು. ಸುದೀಶ್ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.