ಡಾ. ಅಂಬೇಡ್ಕರ್ ಸದಾ ಪ್ರಾತಃಸ್ಮರಣೀಯರು: ದಿನಕರ ಶೆಟ್ಟಿ

KannadaprabhaNewsNetwork |  
Published : Apr 15, 2026, 02:30 AM IST
ಫೋಟೋ : ೧೪ಕೆಎಂಟಿ_ಎಪಿಆರ್_ಕೆಪಿ೨ : ಅಂಬೇಡ್ಕರ್ ಜಯಂತಿ ಪ್ರಯುಕ್ತ ಗಿಬ್ ವೃತ್ತದಿಂದ ಹೊನ್ನಾವರಕ್ಕೆ ತೆರಳುವ ಬೈಕ್ ರ‍್ಯಾಲಿಗೆ ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಿ ಮಾತನಾಡಿದರು. ಶಿವಾನಂದ ಹೆಗಡೆ ಕಡತೋಕಾ, ಸುಷ್ಮಾ ರೆಡ್ಡಿ, ಮಂಜುಳಾ ಮುಕ್ರಿ ಇತರರು ಇದ್ದರು. | Kannada Prabha

ಸಾರಾಂಶ

ಸ್ವಾತಂತ್ರ್ಯೋತ್ತರ ಕಾಲದಲ್ಲಿ ಪ್ರತಿಯೊಬ್ಬ ಪ್ರಜೆಯ ಹಕ್ಕು, ಕರ್ತವ್ಯ ಹಾಗೂ ಇತಿಮಿತಿಯನ್ನು ನಿರ್ದಿಷ್ಟಗೊಳಿಸಿ ಸ್ವತಂತ್ರ ಭಾರತದ ಪ್ರಗತಿಗೆ ಮುನ್ನುಡಿ ಬರೆದಿದ್ದೇ ಸಂವಿಧಾನ.

ಬೈಕ್ ರ‍್ಯಾಲಿಗೆ ಚಾಲನೆ ನೀಡಿದ ಶಾಸಕ

ಕನ್ನಡಪ್ರಭ ವಾರ್ತೆ ಕುಮಟಾ

ಸ್ವಾತಂತ್ರ್ಯೋತ್ತರ ಕಾಲದಲ್ಲಿ ಪ್ರತಿಯೊಬ್ಬ ಪ್ರಜೆಯ ಹಕ್ಕು, ಕರ್ತವ್ಯ ಹಾಗೂ ಇತಿಮಿತಿಯನ್ನು ನಿರ್ದಿಷ್ಟಗೊಳಿಸಿ ಸ್ವತಂತ್ರ ಭಾರತದ ಪ್ರಗತಿಗೆ ಮುನ್ನುಡಿ ಬರೆದಿದ್ದೇ ಸಂವಿಧಾನ. ಹೀಗಾಗಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಸದಾ ಪ್ರಾತಃಸ್ಮರಣೀಯರು ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.

ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಸೋಮವಾರ ಪಟ್ಟಣದ ಗಿಬ್ ವೃತ್ತದಲ್ಲಿ ಆಯೋಜಿಸಿದ್ದ ಕುಮಟಾದಿಂದ ಹೊನ್ನಾವರಕ್ಕೆ ತೆರಳುವ ಬೃಹತ್ ಬೈಕ್ ರ‍್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.

ಅಂಬೇಡ್ಕರ್ ಅವರ ಸಮಾನತೆ ಮತ್ತು ಭ್ರಾತೃತ್ವದ ಸಂದೇಶವನ್ನು ಸಾರುವ ಉದ್ದೇಶದಿಂದ ಅತ್ಯಂತ ಉತ್ಸಾಹ ಮತ್ತು ಸಡಗರದಿಂದ ಆಯೋಜಿಸಲಾಗಿದ್ದ ಬೈಕ್ ರ‍್ಯಾಲಿಯ ಮುಂಚೂಣಿಯಲ್ಲಿ ಅಂಬೇಡ್ಕರ್ ರಥದಲ್ಲಿದ್ದ ಭಾವಚಿತ್ರಕ್ಕೆ ಎಲ್ಲರೂ ಪುಷ್ಪಾರ್ಚನೆ ಮಾಡಿದರು. ಅಂಬೇಡ್ಕರ್ ಅಭಿಮಾನಿಗಳು ನೀಲಿ ಧ್ವಜಗಳನ್ನು ಹಿಡಿದು ಜಯಘೋಷಗೈದರು. ಬಳಿಕ ಅಲ್ಲಿಂದ ಹೊರಟ ಬೈಕ್ ರ‍್ಯಾಲಿ ರಾಷ್ಟ್ರೀಯ ಹೆದ್ದಾರಿ ೬೬ರ ಮೂಲಕ ಹೊನ್ನಾವರಕ್ಕೆ ತೆರಳಿ ಮರಳಿತು. ಶಿವಾನಂದ ಹೆಗಡೆ ಸುಷ್ಮಾ ರೆಡ್ಡಿ ಮಂಜುಳಾ ಮುಕ್ರಿ ಇತರರು ಇದ್ದರು.

ಬಳಿಕ ತಾಲೂಕು ಆಡಳಿತ ಸೌಧದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆಯ ಸಂಯುಕ್ತ ಆಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೫ನೇ ಜನ್ಮದಿನಾಚರಣೆ ಹಾಗೂ ಡಾ. ಬಾಬು ಜಗಜೀವನರಾಮ್ ಅವರ ೧೧೯ನೇ ಜಯಂತಿ ಆಚರಿಸಲಾಯಿತು. ಸಂವಿಧಾನದ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನಿಸಲಾಯಿತು. ಉಪವಿಭಾಗಾಧಿಕಾರಿ ಪಿ.ಶ್ರವಣಕುಮಾರ, ತಹಸೀಲ್ದಾರ್ ಶ್ರೀಕೃಷ್ಣ ಕಾಮಕರ, ಇಒ ರಾಜೇಂದ್ರ ಭಟ್, ಬಿಇಒ ಉದಯ ನಾಯ್ಕ, ಸಿಪಿಐ ಯೋಗೇಶ ಇನ್ನಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಬೇಡ್ಕರ್‌ ವ್ಯಕ್ತಿಯಲ್ಲ ಜಗತ್ತಿನ ಶಕ್ತಿ
ನಾಯಿ, ಬೆಕ್ಕುಗಳಿಗಿಲ್ಲದ ಮೈಲಿಗೆ ಮನುಷ್ಯರಿಗೆ ಏಕೆ?