ಕನ್ನಡಪ್ರಭ ವಾರ್ತೆ ತುರುವೇಕೆರೆ
ತಾಲೂಕಿನ ದಂಡಿಶಿವರ ಹೋಬಳಿಯ ಡಿ.ಕಲ್ಕೆರೆ ಗ್ರಾಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ನೂತನ ಶಾಖೆ ಹಾಗೂ ಅಂಬೇಡ್ಕರ್ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಬಾಬಾ ಸಾಹೇಬರ ಜಯಂತಿಗಳನ್ನು ನಿರಂತರವಾಗಿ ಮಾಡಿಕೊಂಡೇ ಬರುತ್ತಿದ್ದೇವೆ. ಆದರೂ ದಮನಿತರ ಮೇಲೆ ಜಾತಿ, ದೌರ್ಜನ್ಯಗಳು, ಅವಮಾನಗಳು, ದೇವಸ್ಥಾನ ಪ್ರವೇಶ ನಿರಾಕರಣೆ, ಮಹಿಳಾ ದೌರ್ಜನ್ಯ, ಅತ್ಯಾಚಾರ, ಅವಕಾಶಗಳನ್ನು ವಂಚಿಸುವುದು ಇತ್ಯಾದಿಗಳು ಈಗಲೂ ನಡೆಯುತ್ತಿದೆ ಎಂದು ವಿಷಾದಿಸಿದರು. ಉಪನ್ಯಾಸಕ ಚಂದ್ರಯ್ಯ ತೊರೆಮಾವಿನಹಳ್ಳಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಇಒ ಅನಂತರಾಜು ಕಾರ್ಯಕ್ರಮ ಉದ್ಘಾಟಿಸಿದರು. ತಾಲೂ ಕು ಸಂಚಾಲಕರಾದ ಮಲ್ಲೂರು ತಿಮ್ಮೇಶ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ದಂಡಿನಶಿವರ ಕುಮಾರ್, ರಾಜ್ಯ ಮಹಿಳಾ ಸಂಚಾಲಕಿ ಲಾವಣ್ಯ, ಜಿಲ್ಲಾ ಸಂಘಟನಾ ಸಂಚಾಲಕ ನಾಗರಾಜು ಉಪ್ಪಾರಳ್ಳಿ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಚಿದಾನಂದ್, ಮುಖಂಡರಾದ ಮುತ್ತಣ್ಣ, ನಯಾಜ್ ಪಾಷಾ, ತಿಪಟೂರು ಕೊಪ್ಪ ಶಾಂತಣ್ಣ, ತಾಲ್ಲೂಕಿನ ಮುಖಂಡರು. ಗಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಉಪನ್ಯಾಸಕ ಕೆ.ಟಿ.ಶ್ರೀನಿವಾಸ್ ಕಾರ್ಯಕ್ರಮ ನಿರೂಪಿಸಿದರು.