ಕನ್ನಡಪ್ರಭ ವಾರ್ತೆ ಚಾಮರಾಜನಗರ
ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ಎಲ್ಲಾ ಗ್ರಂಥಗಳಿಗಿಂತ ಶ್ರೇಷ್ಠ ಗ್ರಂಥ ನಮ್ಮ ಸಂವಿಧಾನವಾಗಿದೆ. ಅದೇ ಸಂವಿಧಾನದಡಿ ನಾವೆಲ್ಲರೂ ನೆಮ್ಮದಿಯಿಂದ ಬದುಕುತ್ತಿದ್ದೇವೆ. ಅದಕ್ಕೆ ಕಾರಣಕರ್ತರು ಸಾಮಾಜಿಕ ನ್ಯಾಯ ಪರಿಕಲ್ಪನೆಯಡಿ ದೇಶದ ಎಲ್ಲರಿಗೂ ಸಮಾನತೆ ಒದಗಿಸಿದ ಮಹಾನ್ ಮಾನವತಾವಾದಿ ಡಾ.ಅಂಬೇಡ್ಕರ್ ಆಗಿದ್ದಾರೆ ಎಂದರು.
ಅಂಬೇಡ್ಕರ್ ಚಿಂತನೆ, ಆಶಯಗಳನ್ನು ಜನಸಾಮಾನ್ಯರಿಗೆ ಪಸರಿಸುವ ಸಲುವಾಗಿ ವಿಜಯವಾಡದಲ್ಲಿ ಅಂಬೇಡ್ಕರ್ ಪ್ರತಿಮೆ, ಬೃಹತ್ ಗ್ರಂಥಾಲಯ ಹಾಗೂ ಅಂತಾರಾಷ್ಟ್ರೀಯ ಅಧ್ಯಯನ ಕೇಂದ್ರ ತೆರೆಯಲಾಗಿದೆ. ಅದೇ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಪ್ರತಿಯೊಬ್ಬರಿಗೂ ಅನುಕೂಲವಾಗುವಂತೆ ಚಾಮರಾಜನಗರ ಜಿಲ್ಲೆಯಲ್ಲಿ ದಕ್ಷಿಣ ಭಾರತದಲ್ಲಿಯೇ ಅತಿದೊಡ್ಡ ಸಂಶೋಧನಾ ಕೇಂದ್ರವನ್ನು ಸಮಾಜ ಕಲ್ಯಾಣ ಇಲಾಖೆ ಮೂಲಕ ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.ನಗರದ ಬುದ್ಧ ವಿಹಾರದ ಮಹೇಶ್ ಅವರು ಕಾರ್ಯಕ್ರಮದಲ್ಲಿ ಬುದ್ಧ ವಂದನೆ ಮಾಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮುನಿರಾಜು, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ಜಿಲ್ಲಾಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.