ಡಾ.ಬಿ.ಆರ್.ಅಂಬೇಡ್ಕರ್ ಶೋಷಿತರ ಧ್ವನಿ: ಡಾ ಗಣಪತಿ

KannadaprabhaNewsNetwork |  
Published : Apr 15, 2026, 02:15 AM IST
೧೪ಕೆಪಿಎಲ್‌೦೫ ಕೊಪ್ಪಳ ನಗರದ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಜಯಂತಿಯನ್ನು ಮಂಗಳವಾರ ಆಚರಿಸಲಾಯಿತು | Kannada Prabha

ಸಾರಾಂಶ

ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಎಲ್ಲರೂ ಸ್ವಯಂ ಪ್ರೇರಣೆಯಿಂದ ಆಚರಣೆ ಮಾಡಬೇಕು

ಕೊಪ್ಪಳ: ಡಾ. ಬಿ.ಆರ್. ಅಂಬೇಡ್ಕರ್ ಶೋಷಿತರ ಪರ ಧ್ವನಿ ಎತ್ತಿ,ಹೋರಾಟ ಮಾಡಿ ನ್ಯಾಯ ದೊರಕಿಸಿಕೊಟ್ಟವರು ಎಂದು ಪ್ರಾಚಾರ್ಯ ಡಾ.ಗಣಪತಿ ಲಮಾಣಿ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ 135ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಅಂಬೇಡ್ಕರ್ ಜೀವನ ಚರಿತ್ರೆ ಕುರಿತು ಎಲ್ಲ ವಿಷಯಗಳಲ್ಲಿ ಪಠ್ಯ ಮಾಡಬೇಕು. ಎಲ್ಲರೂ ಅಂಬೇಡ್ಕರ್ ವಿಚಾರ ಓದಬೇಕು.ಅಂಬೇಡ್ಕರ್ ವರ್ಗ ರಹಿತ ಮತ್ತು ಜಾತಿ ರಹಿತ ಸಮಾಜದ ನಿರ್ಮಾಣ ಆಶಯ ಹೊಂದಿದ್ದರು ಎಂದರು.

ಕಾರ್ಯಕ್ರಮದಲ್ಲಿ ಸಹ ಪ್ರಾಧ್ಯಾಪಕ ವಿಠೋಬ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಎಲ್ಲರೂ ಸ್ವಯಂ ಪ್ರೇರಣೆಯಿಂದ ಆಚರಣೆ ಮಾಡಬೇಕು. ಅವರು ದೇಶದ ಎಲ್ಲ ವರ್ಗಗಳಿಗೆ ಮೀಸಲಾತಿ ಕೊಟ್ಟಿದ್ದಾರೆ.ಎಲ್ಲ ಜಾತಿಯ ಜನರಿಗೆ ಸಂವಿಧಾನದಲ್ಲಿ ಹಕ್ಕು ನೀಡಿದ್ದಾರೆ. ಅಂಬೇಡ್ಕರ್ ವಿಚಾರ ಎಲ್ಲರೂ ಅರ್ಥ ಮಾಡಿಕೊಂಡರೆ ಅರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಸಹಾಯಕ ಪ್ರಾಧ್ಯಾಪಕ ಡಾ.ನರಸಿಂಹ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಹುಟ್ಟಿದ ದಿನ ದಲಿತರ ಮತ್ತು ಹಿಂದುಳಿದ ವರ್ಗಗಳ ಚರಿತ್ರೆಯಲ್ಲಿ ಐತಿಹಾಸಿಕ ದಿನ. ಅವರ ವಿಚಾರ ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳೋಣ. ಅಂಬೇಡ್ಕರ್ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟರು. ಎಲ್ಲ ಶೋಷಿತರು ಶಿಕ್ಷಣ ಪಡೆಯಬೇಕು. ಆಗ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯ ಎಂದು ಹೇಳಿದರು.

ಕಾಲೇಜಿನ ಸಾಂಸ್ಕೃತಿಕ ಘಟಕದ ಸಂಚಾಲಕಿ ಡಾ.ಹುಲಿಗೆಮ್ಮ, ಡಾ.ಮಲ್ಲಿಕಾರ್ಜುನ, ಸುಮಯ್ಯ, ಹನುಮಪ್ಪ, ಸಂಗಪ್ಪ ಬ್ಯಾಳಿ, ವೆಂಕಟೇಶ್ ಹಾಗೂ ಬೊಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಡಾ. ಹುಲಿಗೆಮ್ಮ ನಿರೂಪಿಸಿ ಸ್ವಾಗತಿಸಿದರು. ಡಾ. ಮಲ್ಲಿಕಾರ್ಜುನ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂವಿಧಾನ ರಚನೆಯಾದ ದಿನ ನಿಜವಾದ ಸ್ವಾತಂತ್ರ‍್ಯ ದೊರಕಿದ ದಿನ: ಶಾಸಕ ಕೋಳಿವಾಡ
ಅಂಬೇಡ್ಕರ್ ಸಮಾನತೆಯ ಸಂದೇಶ ಪಾಲಿಸಿ: ಲಕ್ಷ್ಮೀಪ್ರಿಯಾ