ಡಾ.ಬಿ.ಆರ್‌. ಅಂಬೇಡ್ಕರ್‌ ಹೋರಾಟ ಇಂದಿಗೂ ಪ್ರಸ್ತುತ

KannadaprabhaNewsNetwork |  
Published : Apr 17, 2026, 02:45 AM IST
ನವಲಿಯ ಎಸ್‌ಸಿ ಕಾಲನಿಯಲ್ಲಿ ನಡೆದ ಡಾ. ಬಿ.ಆರ್‌. ಅಂಬೇಡ್ಕರ್‌ ಜಯಂತಿಯಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಶಿಕ್ಷಣದ ಮೂಲಕ ಸಮಾಜ ಬದಲಾಯಿಸಬಹುದು ಎಂಬ ಅವರ ನಂಬಿಕೆ ಯುವ ಜನತೆಗೆ ಪ್ರೇರಣೆಯಾಗಿದೆ

ನವಲಿ: ಸಾಮಾಜಿಕ ಅಸಮಾನತೆ ಮತ್ತು ಅಸ್ಪೃಶ್ಯತೆ ವಿರುದ್ಧ ಡಾ.ಬಿ.ಆರ್‌. ಅಂಬೇಡ್ಕರ್‌ ನಡೆಸಿದ ಹೋರಾಟ ಇತಿಹಾಸದ ಪುಟಗಳಲ್ಲಿ ಮಹತ್ವದ ಸ್ಥಾನ ಪಡೆದುಕೊಂಡಿದೆ ಎಂದು ನಿಂಗಪ್ಪ ನಾಯಕ ತಿಳಿಸಿದರು.

ಅವರು ನವಲಿ ಗ್ರಾಮದ ಎಸ್‌ಸಿ ಕಾಲನಿಯಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ 135ನೇ ಜನ್ಮದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿಕ್ಷಣದ ಮೂಲಕ ಸಮಾಜ ಬದಲಾಯಿಸಬಹುದು ಎಂಬ ಅವರ ನಂಬಿಕೆ ಯುವ ಜನತೆಗೆ ಪ್ರೇರಣೆಯಾಗಿದೆ, ಶಿಕ್ಷಣ ಪಡೆದು ಸಂಘಟಿತ ಹೋರಾಟ ನಡೆಸಿ ಎಂಬ ಅವರ ಹೋರಾಟ ಇಂದಿಗೂ ಪ್ರಸ್ತುತವಾಗಿದೆ ಎಂದರು.

ವೀರೇಶ ನಾಗವಂಶಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ ಒಂದೇ ಜಾತಿಗೆ ಸೀಮಿತರಲ್ಲ, ಅವರು ಅಸ್ಪೃಶ್ಯರ ಮತ್ತು ಕಾರ್ಮಿಕರ, ರೈತರು, ಪ್ರತಿಯೊಂದು ಸಮುದಾಯದ ಬಗ್ಗೆ ಹೋರಾಟ ಮಾಡಿ ನ್ಯಾಯ ಒದಗಿಸಿದ್ದಾರೆ. ಅಂಬೇಡ್ಕರ್‌ ಮಾರ್ಗದಲ್ಲಿ ಇಂದಿನ ಯುವಜನತೆ ಸಾಗಬೇಕು ಎಂದರು.

ಜಯಂತಿ ಆಚರಣೆ ವೇಳೆ ಪಿಯುಸಿಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಾದ ಪವಿತ್ರಾ, ಗಣೇಶ, ಹುಲಿಗೇಮ್ಮ, ಕಾವೇರಿ, ಗಣೇಶರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಭೀಮನಗೌಡ ಹರ್ಲಾಪೂರು, ಲಿಂಗರಾಜ ಹೂಗಾರ, ರಾಜಶೇಖರಗೌಡ, ಹುಲಗಪ್ಪ ಭೋವಿ,ಕನಕಪ್ಪ ಮೇಸ್ತ್ರಿ, ದುರುಗೇಶ, ರಾಮಣ್ಣ ಗಾಳಿ, ಮರಿಸ್ವಾಮಿ, ಜಡಿಯಪ್ಪ ಬಳಗಾನೂರ, ಯಮನೂರ ಛಲವಾದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.ಅ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂದೆಯ ಆಡಳಿತದಲ್ಲಿ ರಾಜ್ಯ ಸುಭಿಕ್ಷವಾಗಲಿ
ಐದು ವರ್ಷ ತಂದೆಯೇ ರಾಜ್ಯ ಮುುನ್ನಡೆಸಲಿ