ಜನಸೇವಾ ಮನೋಭಾವನೆಯ ಡಾ.ಚಂದ್ರಶೇಖರ ಪಾಟೀಲ್‌

KannadaprabhaNewsNetwork |  
Published : May 27, 2024, 01:09 AM IST
26ಕೆಪಿಎಸ್ಎನ್ಡಿ1 | Kannada Prabha

ಸಾರಾಂಶ

ಸಿಂಧನೂರಿನ ಜನಸ್ಪಂದನ ಕಾರ್ಯಾಲಯದಲ್ಲಿ ಎಂಎಲ್ಸಿ ಪ್ರಚಾರ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಮಾತನಾಡಿದರು.

ಸಿಂಧನೂರು: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಸದಾ ಹೋರಾಟ ಮಾಡುತ್ತಾ ಬಂದಿರುವ ಡಾ.ಚಂದ್ರಶೇಖರ ಪಾಟೀಲರಿಗೆ ಪ್ರತಿಯೊಬ್ಬ ಪದವೀಧರ ಮತದಾರರು ಮತ ನೀಡಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಹೇಳಿದರು. ಅವರು ಭಾನುವಾರ ಈಶಾನ್ಯ ಕರ್ನಾಟಕ ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಚಂದ್ರಶೇಖರ ಬಿ.ಪಾಟೀಲ್ ಪರವಾಗಿ ನಗರದ ಜನಸ್ಪಂದನ ಕಾರ್ಯಾಲಯದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ಚಂದ್ರಶೇಖರ ಪಾಟೀಲ್ ಅವರು ಜನಸೇವಾ ಮನೋಭಾವನೆ ಹೊಂದಿದ್ದು, ಪದವೀಧರರ ಹಲವು ಸಮಸ್ಯೆ ಅರಿತುಕೊಂಡಿದ್ದಾರೆ. ಈಗಾಗಲೇ ಒಂದು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಅನೇಕ ಕೆಲಸ ಮಾಡಿದ್ದಾರೆ. ಆದ್ದರಿಂದ ಅವರಿಗೆ ಜೂ.3ರಂದು ನಡೆಯುವ ಚುನಾವಣೆಯಲ್ಲಿ ಪದವೀಧರ ಮತದಾರರು ಮೊದಲ ಪ್ರಾಶಸ್ತ್ಯ 1ಕ್ಕೆ ಮತ ನೀಡಿ ಬೆಂಬಲಿಸುವಂತೆ ಮನವಿ ಮಾಡಿದರು.

ಸಿಂಧನೂರು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವಕುಮಾರ ಜವಳಿ, ಕೆಪಿಸಿಸಿ ಪರಿಶಿಷ್ಟ ಪಂಗಡದ ಕಾರ್ಯದರ್ಶಿ ವೆಂಕಟೇಶ ರಾಗಲಪರ್ವಿ, ಮುಖಂಡರಾದ ಯಂಕನಗೌಡ ಗಿಣಿವಾರ, ಅಮರೇಶ ಗಿರಿಜಾಲಿ, ಹಬೀಬ್ ಖಾಜಿ, ದಾದಾಪೀರ ಧಡೇಸೂಗೂರು, ಹೇಮರಾಜ ಗೊಬ್ಬರಕಲ್, ಗಂಗಯ್ಯ ಯದ್ದಲದೊಡ್ಡಿ, ಚನ್ನಪ್ಪ ಅಗಸಿ ಅಲಬನೂರು, ಈರಣ್ಣ ಹುಲಗುಂಚಿ, ಪ್ರಕಾಶ ಸೋಮಲಾಪುರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!