ವಚನ ಸಾಹಿತ್ಯ ರಕ್ಷಣೆಗಾಗಿ ಶ್ರಮಿಸಿದ ಡಾ.ಫ.ಗು. ಹಳಕಟ್ಟಿಯವರು

KannadaprabhaNewsNetwork |  
Published : Jul 06, 2026, 02:45 AM IST
ಹಾವೇರಿ ಬಸವಕೇಂದ್ರ ಹೊಸಮಠದಲ್ಲಿ ಏರ್ಪಡಿಸಿದ್ದ ಶರಣ ಸಂಗಮ ಹಾಗೂ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿಯವರ ಜಯಂತಿ ಕಾರ್ಯಕ್ರಮದಲ್ಲಿ ಬಸವಶಾಂತಲಿAಗ ಸ್ವಾಮೀಜಿ ಮಾತನಾಡಿದರು. | Kannada Prabha

ಸಾರಾಂಶ

ಹಾವೇರಿ ಬಸವಕೇಂದ್ರ ಹೊಸಮಠದಲ್ಲಿ ಏರ್ಪಡಿಸಿದ್ದ ಶರಣ ಸಂಗಮ ಹಾಗೂ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿಯವರ ಜಯಂತಿ ಕಾರ್ಯಕ್ರಮದಲ್ಲಿ ಬಸವಶಾಂತಲಿAಗ ಸ್ವಾಮೀಜಿ ಮಾತನಾಡಿದರು.

ಹಾವೇರಿ: ಡಾ.ಫ.ಗು. ಹಳಕಟ್ಟಿಯವರು ವಚನ ಸಾಹಿತ್ಯ ರಕ್ಷಣೆ, ಪ್ರಚಾರಕ್ಕೆ ತಮ್ಮನ್ನು ತಾವು ತೊಡಗಿಸಿಕೊಂಡು ಗಂಧದಂತೆ ಜೀವನ ತೇಯ್ದು, ಬತ್ತಿಯಂತೆ ಸುಟ್ಟುಕೊಂಡು, ದೀಪದಂತೆ ಬೆಳೆಕಾದರು ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು.

ಸ್ಥಳೀಯ ಬಸವಕೇಂದ್ರ ಹೊಸಮಠದಲ್ಲಿ ಏರ್ಪಡಿಸಿದ್ದ ಶರಣ ಸಂಗಮ ಹಾಗೂ ವಚನ ಪಿತಾಮಹ ಡಾ.ಫ.ಗು. ಹಳಕಟ್ಟಿಯವರ ಜಯಂತಿ ಮತ್ತು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಮನೆ, ಮಠ, ಜಗುಲಿಗಳಲ್ಲಿ ಪೂಜಿಸುತ್ತಿದ್ದ ತಾಡೋಲೆಗಳನ್ನು ಹುಡುಕಿ ತಂದು ಅದರಲ್ಲಿನ ಅರ್ಥ ಬಿಡಿಸಿ ಬರೆದರು. ತಾವು ಸಂಗ್ರಹಿಸಿದ ರಾಶಿ ರಾಶಿ ವಚನಗಳನ್ನು ಮುದ್ರಿಸಿ, ಈ ಸಾಹಿತ್ಯ ಜನರಿಗೆ ತಲುಪಲು 1925ರಲ್ಲಿ ಹಿತಚಿಂತಕ ಮುದ್ರಣಾಲಯ ಯಂತ್ರ ಖರೀದಿಸಲು ಆರ್ಥಿಕ ತೊಂದರೆ ಉಂಟಾದಾಗ ವಕೀಲಿ ವೃತ್ತಿಯಿಂದ ಸಂಪಾದಿಸಿ ಕಟ್ಟಿಕೊಂಡಿದ್ದ ತಮ್ಮ ಮನೆಯನ್ನೇ ಮಾರಾಟ ಮಾಡಿ ಬಾಡಿಗೆ ಮನೆಯಲ್ಲಿ

ಅಂದು ಜೀವನ ಸಾಗಿಸಿದರು ಎಂದರು.

ಅಂದು ಆರಂಭಿಸಿದ ಶಿವಾನುಭವ ಪತ್ರಿಕೆ, ಬಡತನದ ಮಧ್ಯೆಯೂ ಮುನ್ನಡೆಯಿತು. ಈ ಪತ್ರಿಕೆಯನ್ನು 35 ವರ್ಷಗಳ ಕಾಲ ನಿರಂತರವಾಗಿ ಪ್ರಕಟಿಸಿ ಡಾ.ಫ.ಗು. ಹಳಕಟ್ಟಿಯವರು ಪತ್ರಿಕೋದ್ಯಮದಲ್ಲಿ ಹೊಸ ಇತಿಹಾಸ ಸೃಷ್ಟಿಸಿದರು ಎಂದರು.

ಉಪನ್ಯಾಸಕರಾದ ಡಾ.ಶಮಂತಕುಮಾರ ಕೆ.ಎಸ್., ಮಾತನಾಡಿ, ಅನುಭವ ಮಂಟಪದ ಪರಿಕಲ್ಪನೆ ಮತ್ತು ವಚನ ಸಾಹಿತ್ಯವನ್ನು ಪ್ರತಿಯೊಬ್ಬರ ಜೀವನದಲ್ಲಿ ಅಳವಡಿಸಿಕೊಂಡು ಯುವ ಪೀಳಿಗೆಗೆ ತಲುಪಿಸಬೇಕು ಎಂದರು.

ಅತಿಥಿಗಳಾಗಿ ರಾಣಿಬೆನ್ನೂರು ವರ್ತಕರ ಸಂಘದ ಮಾಜಿ ಅಧ್ಯಕ್ಷ ಜಿ.ಜಿ. ಹೊಟ್ಟೆಗೌಡರ, ನಿವೃತ್ತ ಅರಣ್ಯಾಧಿಕಾರಿ ಡಾ.ಜಗದೀಶ ಮಹಾರಾಜಪೇಟೆ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಪರಶುರಾಮ ಹರ್ಲಾಪೂರ, ಮಲ್ಲಿಕಾರ್ಜುನ ಹಿಂಚಗೇರಿ, ಕಮಲ ಬುಕ್‌ಶೆಟ್ಟಿ, ಶಿವಶಂಕರ ಹೇರುಂಡಿ, ರೇಣುಕಾ ಗುಡಿಮನಿ ಸೇರಿದಂತೆ ಇತರರು ಇದ್ದರು.

ಅಕ್ಕನ ಬಳಗದ ಮಹಿಳೆಯರು ಪ್ರಾರ್ಥಿಸಿದರು. ಮೃತ್ಯುಂಜಯ ಮುಷ್ಟಿ ಸ್ವಾಗತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೀದಿ ನಾಯಿ ದಾಳಿ ಜಿಂಕೆ ಸಾವು
ಮತದಾರರ ಪರಿಷ್ಕರಣಾ ಅರ್ಜಿ ವಿತರಣೆ