ಕನ್ನಡಪ್ರಭ ವಾರ್ತೆ ಮಂಡ್ಯ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಗಾಂಧಿ ಭವನದಲ್ಲಿ ಜುಲೈ 10ರಂದು ಮಧ್ಯಾಹ್ನ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಾಸಕ ಪಿ.ರವಿಕುಮಾರ್ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಬೆಂಗಳೂರಿನ ಎಸ್ಜೆಆರ್ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಪ್ರೇಮ ಸಿದ್ದರಾಜು, ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಘನ ಉಪಸ್ಥಿತಿ ವಹಿಸುವರು ಎಂದರು.
ರೈತರ ಅಭಿವೃದ್ಧಿ, ಸಮಾಜಮುಖಿ ಕಾರ್ಯ, ನೈತಿಕ ರಾಜಕಾರಣ ಮತ್ತು ಜನಪರ ಸೇವೆಯ ಮೂಲಕ ಸಲ್ಲಿಸಿರುವ ಅಮೋಘ ಕೊಡುಗೆಯನ್ನು ಗೌರವಿಸಿ ಡಾ.ಜಿ.ಮಾದೇಗೌಡ ಪ್ರತಿಷ್ಠಾನದಿಂದ ರಾಜ್ಯ ಮಟ್ಟದ ಸಮಾಜ ಸೇವಾ ಪ್ರಶಸ್ತಿ ಮೊತ್ತ 25 ಸಾವಿರ ರು. ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ನೀಡಿ ಶರಣಪ್ಪ ಸಲಾದಪುರ ಆವರನ್ನು ಗೌರವಿಸಲಾಗುತ್ತಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಭಾರತೀ ಕಾಲೇಜಿನ ಪ್ರಾಂಶುಪಾಲ ಮಹದೇವಸ್ವಾಮಿ, ಪ್ರೊ.ಕೃಷ್ಣ, ಪ್ರೊ.ನಾಗರಾಜು ಇದ್ದರು. ಇಂದು ಎಸ್ಡಿಪಿಐ ಮೈಸೂರು ವಿಭಾಗೀಯ ನಾಯಕರ ಸಭೆಕನ್ನಡಪ್ರಭ ವಾರ್ತೆ ಮಂಡ್ಯಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ಮೈಸೂರು ವಿಭಾಗೀಯ ನಾಯಕರ ಸಭೆಯನ್ನು ಜು.9ರಂದು ಮಂಡ್ಯ ನಗರದ ಹೊರವಲಯದಲ್ಲಿನ ಎ ಅಂಡ್ ಎ ಕನ್ವೆಂಷನ್ ಹಾಲ್ನಲ್ಲಿ ಆಯೋಜಿಸಲಾಗಿದೆ ಎಂದು ಪಕ್ಷದ ರಾಜ್ಯ ಖಜಾಂಚಿ ಅಹ್ಮದ್ ಖಾನ್ ತಿಳಿಸಿದರು.
ಸಭೆಯಲ್ಲಿ ರಾಜ್ಯಾಧ್ಯಕ್ಷ ಅಕ್ಬರ್ ಮುಜೀಬ್, ಉಪಾಧ್ಯಕ್ಷರಾದ ಸೀತಾರಾಂ ಕೊಹ್ಲಿವಾಲ, ಮಹಮದ್ ಶಫಿ, ರಾಜ್ಯ ಉಸ್ತುವಾರಿ ಮುಜಾಹಿರ್ ಪಾಷಾ, ನಾಯಕರಾದ ಅಂಗಡಿ ಚಂದ್ರು, ಅಕ್ರಮ್, ಅಸ್ಗರ್ ಅಹ್ಮದ್ ಸೇರಿದಂತೆ ಹಲವರು ಭಾಗವಹಿಸಿ ಪಕ್ಷದ ಬೆಳವಣಿಗೆಗೆ ಪೂರಕವಾದ ಶಾಂತಿ ಸಂದೇಶ ನೀಡುವರು ಎಂದು ಮಾಹಿತಿ ನೀಡಿದರು.ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಮಹಮ್ಮದ್ ತಾಹೆರ್, ಮುಹ್ತಾಕ್ ಅಹಮದ್, ಅತೀಕ್ ಅಹಮದ್, ಮುಬಾರಕ್ ಹುಸೇನ್, ಅಸ್ಕರ್ ಅಹ್ಮದ್ ಇದ್ದರು.