ಹೋರಾಟ ಮನೋಭಾವ ಹೊಂದಿದ್ದ ಡಾ. ಜಗಜೀವನ ರಾಂ: ಎಚ್‌. ಪೂಜೆಪ್ಪ

KannadaprabhaNewsNetwork |  
Published : Apr 06, 2025, 01:48 AM IST
ಹೂವಿನಹಡಗಲಿಯ ತಾಪಂ ಸಭಾಂಗಣದಲ್ಲಿ ತಾಲೂಕ ಆಡಲಿತ ಆಯೋಜಿಸಿದ್ದ ಡಾ.ಬಾಬು ಜಗಜೀವನ್‌ ರಾಂ ಇವರ ಜಯಂತಿಯನ್ನು ಆಚರಿಸಲಾಯಿತು. | Kannada Prabha

ಸಾರಾಂಶ

ಹೂವಿನಹಡಗಲಿಯ ತಾಪಂ ರಾಜೀವ್‌ ಗಾಂಧಿ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಉಪ ಪ್ರಧಾನಿ ಡಾ. ಬಾಬು ಜಗಜೀವನ್‌ ರಾಂ ಅವರ 118ನೇ ಜಯಂತಿ ಕಾರ್ಯಕ್ರಮ ನಡೆಯಿತು.

ಹೂವಿನಹಡಗಲಿ: ಹಸಿರುಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್‌ ರಾಂ, ವಿದ್ಯಾರ್ಥಿ ದೆಸೆಯಲ್ಲೇ ಮೌಢ್ಯ, ಕಂದಾಚಾರ ಮತ್ತು ಅಸ್ಪೃಶ್ಯತೆ ಆಚರಣೆಯ ವಿರುದ್ಧ ಹೋರಾಟ ಮಾಡಿದ್ದರು ಎಂದು ದಲಿತ ಮುಖಂಡ ಎಚ್‌. ಪೂಜೆಪ್ಪ ಹೇಳಿದರು.

ಇಲ್ಲಿನ ತಾಪಂ ರಾಜೀವ್‌ ಗಾಂಧಿ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಉಪ ಪ್ರಧಾನಿ ಡಾ. ಬಾಬು ಜಗಜೀವನ್‌ ರಾಂ ಅವರ 118ನೇ ಜಯಂತಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೇ ಅಸ್ಪೃಶ್ಯತೆ ವಿರುದ್ಧ ಹೋರಾಟ ನಡೆಯುತ್ತಿದ್ದರೂ ಈ ವರೆಗೂ ಆಚರಣೆಯಲ್ಲಿರುವುದು ತೀರಾ ದುರಂತದ ಸಂಗತಿಯಾಗಿದೆ. ಅವರ ಮಾರ್ಗದರ್ಶನ ಹಾಗೂ ತತ್ವಾದರ್ಶಗಳನ್ನು ನಾನು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದರು.

ಕೇವಲ ಕಾಯ್ದೆ, ಕಾನೂನುಗಳಿಂದ ಅಸ್ಪೃಶ್ಯತೆ ನಿವಾರಣೆಯಾಗಲು ಸಾಧ್ಯವಿಲ್ಲ. ಮನುಷ್ಯನ ಮನೋಭಾವನೆ ಬದಲಾವಣೆ ಆಗಬೇಕಿದೆ. ಜತೆಗೆ ದಲಿತ ಸಮುದಾಯದವರು ಉನ್ನತ ಶಿಕ್ಷಣ ಪಡೆದು ಉತ್ತಮ ನಾಗರಿಕರಾಗಬೇಕಿದೆ ಎಂದರು.

ತಾಪಂ ಇಒ ಎಂ. ಉಮೇಶ ಮಾತನಾಡಿ, ಬಾಬು ಜಗಜೀವನ್‌ ರಾಂ ಅವರು 30 ವರ್ಷಗಳ ಕಾಲ ಸಚಿವರಾಗಿ ಕೆಲಸ ಮಾಡಿದ್ದಾರೆ. ದೇಶ ಆಹಾರ ಕೊರತೆ ಉಂಟಾಗಿದ್ದ ಸಂದರ್ಭದಲ್ಲಿ ಕೃಷಿ ಸಚಿವರಾಗಿದ್ದ ಅವರು, ಹಸಿರು ಕ್ರಾಂತಿಯ ಮೂಲಕ ದೇಶವನ್ನು ಸ್ವಾವಲಂಬಿ ಮಾಡಲು, ಎಂ.ಎಸ್‌. ಸ್ವಾಮಿನಾಥನ್‌ ಆಯೋಗ ರಚಿಸಿ, ದೇಶದಲ್ಲಿ ಆಹಾರ ಭದ್ರತೆ ನೀಡಿದ್ದಾರೆ ಎಂದರು.

ಈ ದೇಶದ ಕೂಲಿ ಕಾರ್ಮಿಕರ ಸಮಸ್ಯೆಯನ್ನು ಇಟ್ಟುಕೊಂಡು ಹಲವಾರು ಕಾಯ್ದೆ-ಕಾನೂನುಗಳನ್ನು ತಂದಿದ್ದಾರೆ. ಸದ್ಯದಲ್ಲಿ ಜಾರಿಯಲ್ಲಿರುವ ನರೇಗಾ ಯೋಜನೆ ಕೂಡಾ ಅವರ ದೂರದೃಷ್ಟಿಯದ್ದಾಗಿದೆ ಎಂದರು.

ದಲಿತ ಮುಖಂಡ ಉಚ್ಚೆಂಗೆಪ್ಪ ಮಾತನಾಡಿ, ವಿವಿಧ ಇಲಾಖೆಗಳಲ್ಲಿರುವ ಸೌಲಭ್ಯಗಳು ದಲಿತ ಸಮುದಾಯಕ್ಕೆ ಸಮಾನವಾಗಿ ಹಂಚಿಕೆಯಾಗಬೇಕಿದೆ. ಕೆಲವು ರಾಜಕಾರಣಿಗಳು ತಮ್ಮ ಸಮುದಾಯಕ್ಕೆ ಆದ್ಯತೆ ನೀಡುತ್ತಿದ್ದಾರೆ. ಇದು ಈ ದೇಶದ ಅಸ್ಪೃಶ್ಯತೆ ಆಚರಣೆಗಿಂತ ಕೆಟ್ಟದ್ದು. ಆದರಿಂದ ಜನಪ್ರತಿನಿಧಿಗಳು ಎಲ್ಲ ವರ್ಗದ ಜನರನ್ನು ಸಮಾನವಾಗಿ ಕಾಣಬೇಕಿದೆ ಎಂದರು.

ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹಾಗೂ ಪ್ರಾಚಾರ್ಯ ಎ. ಕೊಟ್ರಗೌಡ ಮಾತನಾಡಿ, ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಸೇರಿದಂತೆ ಇತರ ಮೌಢ್ಯಗಳು ಆಚರಣೆಯಲ್ಲಿ ಇರುವುದು ತೀರಾ ದುರಂತದ ಸಂಗತಿ. ನಮ್ಮ ಮನೋಭಾವನೆ ಬದಲಾವಣೆ ಮಾಡಿಕೊಳ್ಳುವ ಅಗತ್ಯವಿದೆ ಎಂದರು.

ಪಿ. ನಿಂಗಪ್ಪ, ಆನಂದ, ಗುಡದಯ್ಯ, ಸಮಾಜ ಕಲ್ಯಾಣಾಧಿಕಾರಿ ಆನಂದ್‌ ಡೊಳ್ಳಿನ್‌ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ದ್ವೇಷ ಮಸೂದೆಯಿಂದ ಭಿನ್ನ ದನಿ ದಮನ ಆಗಲ್ಲ ''
3 ವರ್ಷ ಮೊಮ್ಮಗನಿಗೆ ಬಾರಲ್ಲಿ ಹೆಂಡ ಕುಡಿಸಿದ ಅಜ್ಜ: ಆಕ್ರೋಶ